ಅಸ್ಸಾಂನಲ್ಲಿ BJP ಎಂದರೆ ‘ಕೇಸರಿ ಲೇಬಲ್’ವುಳ್ಳ ಹಿಮಂತ್ ನೇತೃತ್ವದ ಕಾಂಗ್ರೆಸ್: ಗೌರವ್ ಗೊಗೊಯ್ ವ್ಯಂಗ್ಯ

Date:

ಅಸ್ಸಾಂನಲ್ಲಿರುವ ಬಿಜೆಪಿ ವಾಸ್ತವವಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ, ಕೇಸರಿ ಪಕ್ಷದ ಲೇಬಲ್ ಹೊಂದಿರುವ ಕಾಂಗ್ರೆಸ್ ಆಗಿದೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ವ್ಯಂಗ್ಯವಾಡಿದ್ದಾರೆ.

ವಿಧಾನಸಭಾ ಚುನಾವಣೆಯ ಹಿನ್ನೆಲೆ ಮಾಜುಲಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು. “ಮುಂಬರುವ ವಿಧಾನಸಭಾ ಚುನಾವಣೆಯು ಮಾಜಿ ಮುಖ್ಯಮಂತ್ರಿ ದಿವಂಗತ ತರುಣ್ ಗೊಗೊಯ್ ನೇತೃತ್ವದ ಕಾಂಗ್ರೆಸ್ ಮತ್ತು ‘ಶರ್ಮಾ ನೇತೃತ್ವದ ಕಾಂಗ್ರೆಸ್’ (ಬಿಜೆಪಿ) ನಡುವಿನ ಸ್ಪರ್ಧೆಯಾಗಲಿದೆ” ಎಂದು ಹೇಳಿದ್ದಾರೆ.

ತರುಣ್ ಗೊಗೊಯ್ ಅವರೊಂದಿಗಿನ ಭಿನ್ನಾಭಿಪ್ರಾಯದ ನಂತರ 2015ರಲ್ಲಿ ಶರ್ಮಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ತಮ್ಮೊಂದಿಗೆ ಅನೇಕ ಆಪ್ತರನ್ನು ಕರೆದೊಯ್ದಿದ್ದರು. ಇತ್ತೀಚೆಗೆ ಲೋಕಸಭಾ ಸಂಸದ ಪ್ರದ್ಯುತ್ ಬೊರ್ಡೊಲೊಯ್ ಮತ್ತು ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಕೂಡ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಬಿಜೆಪಿಯಲ್ಲಿರುವ ಪ್ರಬಲ ನಾಯಕರೆದಲ್ಲರೂ ಕಾಂಗ್ರೆಸ್‌ನವರೇ ಆಗಿದ್ದಾರೆ. ಆದ್ದರಿಂಲೇ, ಗೊಗೊಯ್ ಅವರು ಬಿಜೆಪಿಯಲ್ಲಿ ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಮುಂದೆ ನಿಂತಿರುವುದು ಕೇವಲ ಬಿಜೆಪಿ ಟ್ಯಾಗ್ ಹೊತ್ತಿರುವ ಶರ್ಮಾ ನೇತೃತ್ವದ ಕಾಂಗ್ರೆಸ್. ತರುಣ್ ಗೊಗೊಯ್ ಅವರ ಅವಧಿಯಲ್ಲಿ ತಪ್ಪು ಮಾಡಿದ ನಾಯಕರು ಈಗ ಬಿಜೆಪಿಯಲ್ಲಿದ್ದಾರೆ. ಈಗ ಅವರೆಲ್ಲರೂ ಬಿಜೆಪಿಯಲ್ಲಿದ್ದುಕೊಂಡು ತಮ್ಮ ಮತ್ತು ತಮ್ಮ ಕುಟುಂಬದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಗೊಗೊಯ್ ಆರೋಪಿಸಿದ್ದಾರೆ.

“ನಾವು ತರುಣ್ ಗೊಗೊಯ್ ಅವರ ಆದರ್ಶಗಳಿಂದ ಪ್ರೇರಿತವಾದ ಕಾಂಗ್ರೆಸ್ಅನ್ನು ಪ್ರತಿನಿಧಿಸುತ್ತಿದ್ದೇವೆ. ಅಸ್ಸಾಂನ ಜನತೆ ಶರ್ಮಾ ನೇತೃತ್ವದ ಕಾಂಗ್ರೆಸ್ ಬೇಕೇ ಅಥವಾ ತರುಣ್ ಗೊಗೊಯ್ ಅವರ ಆದರ್ಶಗಳನ್ನು ಹೊಂದಿರುವ ಕಾಂಗ್ರೆಸ್ ಬೇಕೇ ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಇರಾನ್‌-ಕತಾರ್‌ ಅನಿಲ ಘಟಕಗಳಿಗೆ ಹತ್ತಿದ ಕಿಚ್ಚು: ಭಾರತಕ್ಕೂ ತಟ್ಟಲಿದೆಯಾ ಬಿಸಿ?

“ಈ ಚುನಾವಣೆಯು ಒಂದು ಪಕ್ಷವಾಗಿ ಬಿಜೆಪಿಯೊಂದಿಗಿನ ಹೋರಾಟವಲ್ಲ, ಬದಲಾಗಿ ಶರ್ಮಾ ನೇತೃತ್ವದ ‘ಹಳೆಯ ಕಾಂಗ್ರೆಸ್’ ಮತ್ತು ತರುಣ್ ಗೊಗೊಯ್ ಅವರಿಂದ ಪ್ರೇರಿತವಾದ ‘ಹೊಸ ಕಾಂಗ್ರೆಸ್’ ನಡುವಿನ ಸ್ಪರ್ಧೆಯಾಗಿದೆ. ಈ ಬಾರಿ ನಾವು ಹೊಸ ಮುಖಗಳನ್ನು ಕಣಕ್ಕಿಳಿಸುತ್ತಿದ್ದೇವೆ. ವಿರೋಧ ಪಕ್ಷಗಳ ನಡುವೆ ಒಗ್ಗಟ್ಟಿದೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗುವ ಆಶಾವಾದವನ್ನು ಹೆಚ್ಚಿಸಿದೆ” ಎಂದು ಅವರು ಹೇಳಿದ್ದಾರೆ.

ಮೈತ್ರಿಕೂಟದ ಎಲ್ಲ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರ ತ್ಯಾಗ ಮತ್ತು ಶ್ರಮಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಮೈತ್ರಿಕೂಟವು ಬಲಗೊಂಡಿದ್ದು, ರಾಜ್ಯದಲ್ಲಿ ಹೊಸ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಲಾಗಿದೆ ಎಂದಿದ್ದಾರೆ.

ಕಾಂಗ್ರೆಸ್, ರೈಜೋರ್ ದಳ, ಅಸ್ಸಾಂ ಜಾತೀಯ ಪರಿಷದ್ (AJP), ಸಿಪಿಐ(ಎಂ), ಆಲ್ ಪಾರ್ಟಿ ಹಿಲ್ ಲೀಡರ್ಸ್ ಕಾನ್ಫರೆನ್ಸ್ (APHLC) ಮತ್ತು ಸಿಪಿಐ(ಎಂಎಲ್) ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ.

ಕಾಂಗ್ರೆಸ್ ತನ್ನ ಸಂಪೂರ್ಣ 94 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ, ರೈಜೋರ್ ದಳ 13, ಎಜೆಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಸಿಪಿಐ(ಎಂ) ಮತ್ತು ಎಪಿಹೆಚ್‌ಎಲ್‌ಸಿ ತಲಾ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

126 ಸದಸ್ಯ ಬಲದ ವಿಧಾನಸಭೆಗೆ ಏಪ್ರಿಲ್ 9 ರಂದು ಚುನಾವಣೆ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...