ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂ. ವೇತನ!

Date:

ಸಿಂಗಾಪುರ ಮೂಲದ ಮಾಧ್ಯಮ ನ್ಯೂಸ್ ಏಷ್ಯಾ ಸಾಕ್ಷ್ಯಚಿತ್ರ (documentary) ಒಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂಪಾಯಿ ನೀಡಲಾಗುತ್ತದೆ ಎಂಬ ವಿಚಾರ ಬಹಿರಂಗವಾಗಿದೆ.

ಸಾಕ್ಷ್ಯಚಿತ್ರದಲ್ಲಿ ಮಾತನಾಡಿರುವ ಬಿಜೆಪಿ ಐಟಿ ಸೆಲ್‌ನ ಫ್ರೀಲಾನ್ಸರ್‌ ಅನಿಲ್ ಕುಮಾರ್, “ಬಿಜೆಪಿ ಐಟಿ ಸೆಲ್ ಮಾಹಿತಿಗಳನ್ನು ಹರಡುವ ಕೆಲಸ ಮಾಡುತ್ತದೆ. ನಾನು ಕಳೆದ ಒಂದೂವರೆ ವರ್ಷದಿಂದ ಇಲ್ಲಿ ಕೆಲಸ ಮಾಡುತ್ತಿದ್ದೇನೆ. ನಮ್ಮನ್ನು ಯಾವುದೇ ಏಜೆನ್ಸಿ ನೇಮಕಾತಿ ಮಾಡುವುದಿಲ್ಲ. ಚುನಾವಣೆ ಬಂದಾಗ ಅಭ್ಯರ್ಥಿಗಳೇ ನಮ್ಮನ್ನು ಫ್ರೀಲಾನ್ಸರ್ ಆಗಿ ನೇಮಿಸುತ್ತಾರೆ. ಮಾಸಿಕವಾಗಿ ನಮಗೆ 40-50 ಸಾವಿರ ವೇತನ ಸಿಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಸ್ಥಾನದ ನಿಂಬಹೇರ ಎಂಬ ಸಣ್ಣ ಪಟ್ಟಣದಲ್ಲಿ ನ್ಯೂಸ್ ಏಷ್ಯಾ ಸಾಕ್ಷ್ಯಚಿತ್ರವನ್ನು ನಿರ್ಮಿಸಿದೆ. ಭಾರತದಲ್ಲಿ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಮಾಡಲು ಫ್ರೀಲಾನ್ಸರ್‌ಗಳಿಗೆ ಹೆಚ್ಚು ಬೇಡಿಕೆಯಿದೆ. ರಾಜಕೀಯ ಪಕ್ಷಗಳು ತಮ್ಮ ಅಜೆಂಡಾವನ್ನು ಹರಡಲು ಸಾವಿರಾರು ಮಂದಿಯನ್ನು ನೇಮಿಸುತ್ತದೆ. ಜೊತೆಗೆ ಈ ಐಟಿ ಸೆಲ್ ಉದ್ಯೋಗಿಗಳು ಬೇರೆ ಬೇರೆ ಪ್ರದೇಶಕ್ಕೆ ಪ್ರಯಾಣ ಮಾಡಬೇಕಾಗುತ್ತದೆ. ಆ ಸಂದರ್ಭದಲ್ಲಿ ಬೇಕಾದ ವಸತಿ ವ್ಯವಸ್ಥೆಯನ್ನು ಕೂಡಾ ಮಾಡಲಾಗುತ್ತದೆ ಎಂದು ಈ ಸಾಕ್ಷ್ಯಚಿತ್ರ ಹೇಳುತ್ತದೆ.

ಇದನ್ನು ಓದಿದ್ದೀರಾ?  ಪಕ್ಷವೊಂದರ ಬಗ್ಗೆ ಪ್ರಚಾರದ ನಕಲಿ ವಿಡಿಯೋ: ಪ್ರಕರಣ ದಾಖಲಿಸಿದ ಅಮೀರ್ ಖಾನ್

“ನಮಗೆ ಮೋದಿ ಅವರು ಮಾಡಿದ ಘೋಷಣೆಗಳು, ರಾಷ್ಟ್ರವಾದ ಮತ್ತು ಹಿಂದುತ್ವ – ಪ್ರಮುಖ ಪ್ರಚಾರ ವಿಷಯಗಳಾಗಿರುತ್ತದೆ. ನಮ್ಮಲ್ಲಿ ಎಡಿಟರ್‌ಗಳು, ಸ್ಕ್ರಿಪ್ಟ್ ರೈಟರ್ (Script Writer), ನಟರನ್ನು ನಾವು ಹೊರಗಿನಿಂದ ಕರೆಸಿಕೊಳ್ಳುತ್ತೇವೆ. ಸಂಪೂರ್ಣ ಸ್ಕ್ರಿಪ್ಟ್ ಬರೆದು ನಾವು ನಟನೆ ಮಾಡಿಸುತ್ತೇವೆ” ಎಂದು ಅನಿಲ್ ಕುಮಾರ್ ಹೇಳುತ್ತಾರೆ.

ಇನ್ನು ಈ ಸಾಕ್ಷ್ಯಚಿತ್ರದಲ್ಲಿ ಅನಿಲ್ ಕುಮಾರ್‌ನಂತಹ ಬಿಜೆಪಿ ಐಟಿ ಸೆಲ್ ಉದ್ಯೋಗಿಗಳು ಹೇಗೆ ವಿಪಕ್ಷಗಳ ವಿರುದ್ಧ ನಕಲಿ ಸುದ್ದಿಯನ್ನು, ವಿಡಿಯೋವನ್ನು ಸೃಷ್ಟಿಸುತ್ತಾರೆ ಎಂಬುವುದನ್ನು ತೋರಿಸಲಾಗಿದೆ.

“ಬಿಜೆಪಿ ಐಟಿ ಸೆಲ್‌ನಲ್ಲಿ ಕಾಮೆಂಟ್‌ಗಳನ್ನು ಮಾಡಲೆಂದೇ ಒಂದು ತಂಡ ಇರುತ್ತದೆ. ಈ ತಂಡದ ಮುಖ್ಯ ಕಾರ್ಯ ಅಪಮಾನ ಮಾಡುವುದೇ ಆಗಿರುತ್ತದೆ. ವಿಪಕ್ಷಗಳು ಯಾವುದೇ ಪೋಸ್ಟ್ ಮಾಡಿದರೂ ಅವರ ಪೋಸ್ಟ್‌ಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡುವುದು ಆ ತಂಡದ ಕೆಲಸವಾಗಿದೆ” ಎಂದು ಅನಿಲ್ ಕುಮಾರ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಮುಸ್ಲಿಮರ ಓಟು ಸಾಕು‌; ಸಿಎಂ ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’ ಹರಿಬಿಟ್ಟ ಕಿಡಿಗೇಡಿಗಳು

ಇನ್ನು ಬಿಜೆಪಿ ಐಟಿ ಸೆಲ್‌ನ ಈ ಉದ್ಯೋಗಿಗಳಿಗೆ ಯಾರು ಗುರಿ ಎನ್ನುವುದನ್ನು ಕೂಡಾ ಅನಿಲ್ ಕುಮಾರ್ ಈ ಸಾಕ್ಷ್ಯಚಿತ್ರದಲ್ಲಿ ಹೇಳಿದ್ದಾರೆ. “ಖಂಡಿತವಾಗಿಯೂ ನಮಗೆ ಕಾಂಗ್ರೆಸ್ ಟಾರ್ಗೆಟ್ ಆಗಿರುತ್ತದೆ. ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ನಾವು ಕಾರ್ಟೂನ್‌ಗಳನ್ನು ರಚಿಸುತ್ತೇವೆ. ಮೀಮ್ಸ್‌ ಮಾಡುತ್ತೇವೆ. ಜನರಿಗೆ ನಾವು ಕಾರ್ಟೂನ್‌ಗಳನ್ನು ಬಳಸಿಕೊಂಡು ಮೀಮ್ಸ್ ಮಾಡಿದರೆ ಅದು ಇಷ್ಟವಾಗುತ್ತದೆ. ಅದಕ್ಕಾಗಿ ಅದನ್ನೇ ಬಳಸಲಾಗುತ್ತದೆ” ಎಂದು ಅವರು ಹೇಳುತ್ತಾರೆ.

ಭಾರತದಲ್ಲಿ ನಕಲಿ ಸುದ್ದಿಯೇ ಒಂದು ಇಂಡಸ್ಟ್ರಿ!

ಇನ್ನು 2019ರಲ್ಲಿ ಬಿಜೆಪಿಯು ಉತ್ತರ ಪ್ರದೇಶ ಒಂದು ರಾಜ್ಯದಲ್ಲೇ ಎರಡು ಸಾವಿರ ಸೈಬರ್ ವಾರಿಯರ್‌ಗಳನ್ನು ನೇಮಿಸುವ ಯೋಜನೆ ರೂಪಿಸಿಕೊಂಡಿತ್ತು. 2019ರಲ್ಲಿ ಫೇಸ್‌ಬುಕ್ ಕಾಂಗ್ರೆಸ್ ಹಾಗೂ ಬಿಜೆಪಿಯ ಪರವಾಗಿ ನಕಲಿ ಸುದ್ದಿಗಳನ್ನು ಹರಡುತ್ತಿದ್ದ ಸುಮಾರು 700 ಪೇಜ್‌ಗಳನ್ನು ಬ್ಲಾಕ್ ಮಾಡಿದೆ. ಭಾರತದಲ್ಲಿ ನಕಲಿ ಸುದ್ದಿಯೇ ಒಂದು ಇಂಡಸ್ಟ್ರಿಯಾಗಿದೆ ಎಂದು ವರದಿ ಹೇಳುತ್ತದೆ.

ಇದನ್ನು ಓದಿದ್ದೀರಾ?  ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್!

15 ವರ್ಷಗಳ ಕಾಲ ನಡೆಸಿದ ತನಿಖೆಯ ಪ್ರಕಾರ 2005ರಿಂದ ಈವರೆಗೆ ಭಾರತದಲ್ಲಿ 750ಕ್ಕೂ ಅಧಿಕ ನಕಲಿ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿದೆ. ಇದು 116 ರಾಷ್ಟ್ರಗಳಲ್ಲಿ ಪಸರಿಸಿದೆ. ಇವೆಲ್ಲವೂ ಕೂಡಾ ನಕಲಿ ಸುದ್ದಿಗಳನ್ನು ಹರಡುತ್ತಿದೆ ಎಂದು ವರದಿ ಹೇಳುತ್ತದೆ.

ಇನ್ನು 2024 ರ ಲೋಕಸಭೆ ಮತ್ತು ವಿಧಾನ ಸಭೆ ಚುನಾವಣೆಗಳಿಗೆ ಮುಂಚಿತವಾಗಿ, 30 ಲಕ್ಷ ಸಾಮಾಜಿಕ ಮಾಧ್ಯಮ ಕಾರ್ಯಕರ್ತರ ಐಟಿ ಸೆಲ್ ಅನ್ನು ಆರಂಭಿಸಲು ಈ ಹಿಂದೆಯೇ ಮಹಾರಾಷ್ಟ್ರ ಬಿಜೆಪಿ ನಿರ್ಧರಿಸಿದೆ ಎಂದು ಕಳೆದ ವರ್ಷ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...