ಜಾರ್ಖಂಡ್ | ಹಿಂದೂಗಳಿಗೆ ಮುಸ್ಲಿಮರ ಟೋಪಿ ಧರಿಸಿ, ಸಭೆಯಲ್ಲಿ ಕುಳ್ಳಿರಿಸಿಕೊಂಡ ಬಿಜೆಪಿ ಮುಖಂಡರು!

Date:

ಲೋಕಸಭಾ ಚುನಾವಣೆಯ ಮೂರು ಹಂತದ ಮತದಾನ ಈಗಾಗಲೇ ದೇಶದಲ್ಲಿ ಮುಗಿದಿದೆ. ಇನ್ನು, ನಾಲ್ಕು ಹಂತಗಳ ಮತದಾನವಷ್ಟೇ ಬಾಕಿ ಇದೆ. ಈಗಾಗಲೇ ಮುಗಿದಿರುವ ಮತದಾನಗಳು ಬಿಜೆಪಿಗೆ ಸೋಲಿನ ಆತಂಕವನ್ನು ಹೆಚ್ಚಿಸಿವೆ.

ಈ ಆತಂಕ ಪ್ರಧಾನಿ ನರೇಂದ್ರ ಮೋದಿ ಅವರ ದ್ವೇಷ ಭಾಷಣದಲ್ಲೇ ಸ್ಪಷ್ಟವಾಗಿ ಕಾಣಿಸುತ್ತಿದೆ. ಮೊದಲ ಹಂತದ ಚುನಾವಣೆ ಮುಗಿದ ಬಳಿಕ ಮೋದಿ ಅವರು ನಿರಂತರವಾಗಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ವಿರುದ್ಧ ದ್ವೇಷಪೂರಿತ ಸುಳ್ಳು ಭಾಷಣಗಳನ್ನು ಮಾಡುತ್ತಲೇ ಇದ್ದಾರೆ. ಅಲ್ಲದೇ, ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಟೀಮ್ ಇಂಡಿಯಾದಲ್ಲಿ ಎಲ್ಲ ಮುಸ್ಲಿಮರಿಗೆ ಅವಕಾಶ ಸಿಗಲಿದೆ ಎಂಬ ಕೀಳುಮಟ್ಟದ ಭಾಷಣ ಕೂಡ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಎಲ್ಲ ಬೆಳವಣಿಗೆಯ ನಡುವೆಯೇ, ಜಾರ್ಖಂಡ್‌ನ ಬಿಜೆಪಿ ಮುಖಂಡರು ಮುಸ್ಲಿಂ ಸಮುದಾಯದೊಂದಿಗೆ ಸಂವಾದ ನಡೆಸಲು ಸಭೆಯೊಂದನ್ನು ಆಯೋಜಿಸಿದ್ದರು. ಆದರೆ, ಈ ಸಭೆಗೆ ಹೆಚ್ಚಿನ ಮುಸ್ಲಿಮರು ಬಾರದಿದ್ದಕ್ಕೆ, ಕೆಲವು ಹಿಂದೂಗಳಿಗೆ ಮುಸ್ಲಿಮರ ಟೋಪಿ ಧರಿಸುವಂತೆ ಮಾಡಿ, ಪೇಚಿಗೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಇದು ಈಗ ದೊಡ್ಡಮಟ್ಟದ ವಿವಾದಕ್ಕೂ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲ ವಿಚಾರವನ್ನು ಬಯಲಿಗೆ ಎಳೆದದ್ದು N4 NEWS BHARAT ಎನ್ನುವ ಜಾರ್ಖಂಡ್‌ನ ರಾಂಚಿಯ ಸ್ಥಳೀಯ ಯೂಟ್ಯೂಬ್‌ ಚಾನೆಲ್. ರಾಂಚಿಯ N4 ನ್ಯೂಸ್‌ನ ವೈರಲ್ ಕ್ಲಿಪ್ ಅನ್ನು ಆಲ್ಟ್‌ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಬಳಿಕ ಇದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ವೇದಿಕೆಯೊದಗಿಸಿದೆ.

ತಮ್ಮ ಟ್ವೀಟ್‌ನಲ್ಲಿ ಮೊಹಮ್ಮದ್ ಝುಬೇರ್ ಅವರು ವಿಡಿಯೋವನ್ನು ಹಂಚಿಕೊಳ್ಳುತ್ತಾ, “ತಮ್ಮ ಸಭೆಗೆ ಬಿಜೆಪಿ ನಾಯಕರು ಮುಸ್ಲಿಮರಂತೆ ವೇಷ ಧರಿಸಿ ಹಿಂದೂಗಳನ್ನು ಒಟ್ಟುಗೂಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

BJP 36

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಂಚಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಜಯ್ ಸೇಠ್ ಅವರು ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಮುಸ್ಲಿಂ ಸಮುದಾಯದ ಬೆಂಬಲವೂ ಬೇಕು ಎಂಬ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಸಭೆಯನ್ನು ಆಯೋಜಿಲಾಗಿತ್ತು. ಈ ಸಭೆಗೆ ಮುಖ್ಯ ಅತಿಥಿಯಾಗಿ ಆರು ಬಾರಿ ಶಾಸಕರಾಗಿದ್ದ ಸಿ ಪಿ ಸಿಂಗ್ ಕೂಡ ಭಾಗವಹಿಸಿದ್ದರು.

ಈ ಸಭೆಯಲ್ಲಿ ಸೇರಿದವರ ಬಗ್ಗೆ N4 ನ್ಯೂಸ್‌ನ ಪ್ರತಿನಿಧಿಗಳು ಬಿಜೆಪಿ ಮುಖಂಡರಲ್ಲಿ ಕೇಳಿದಾಗ, “ಇಲ್ಲಿ ಭಾಗವಹಿಸಿದ್ದ ಎಲ್ಲರೂ ಮುಸ್ಲಿಮರು. ಕೆಲವರು ಟೋಪಿ ಧರಿಸಿದ್ದರು, ಇನ್ನು ಕೆಲವರು ಧರಿಸಿಲ್ಲ. ಇವರೆಲ್ಲರೂ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಬಂದು ಹಾಜರಾಗಿದ್ದಾರೆ” ಎಂದು ತಿಳಿಸಿದ್ದರು.

ಆ ಬಳಿಕ ಸಭೆಯಲ್ಲಿದ್ದವರೊಂದಿಗೆ ಮಾತನಾಡಿಸಿದಾಗ, ಹೆಸರು ಹಿಂದೂಗಳದ್ದೆಂದು ಗೊತ್ತಾಗಿದೆ. ಅಲ್ಲದೇ, ಅವರ ಕಿಸೆಯಲ್ಲಿದ್ದ ಆಧಾರ್ ಕಾರ್ಡ್‌ ಅನ್ನು ಕೂಡ ಪರಿಶೀಲಿಸಿದ್ದಾರೆ. ಈ ಬಗ್ಗೆ ಟೋಪಿ ಧರಿಸಿದ್ದ ಹಿಂದೂಗಳಲ್ಲಿ N4 ನ್ಯೂಸ್‌ನ ಪ್ರತಿನಿಧಿ ಕೇಳಿದಾಗ, “ನಮಗೇನೂ ಗೊತ್ತಿಲ್ಲ. ನಮ್ಮ ಕಿಸೆಯಲ್ಲಿಟ್ಟಿದ್ದರು. ಅದನ್ನು ತಲೆಯಲ್ಲಿ ಇಟ್ಟುಕೊಳ್ಳಲು ಬಿಜೆಪಿಯವರು ತಿಳಿಸಿದ್ದರು” ಎಂದು ಹೇಳಿಕೆ ನೀಡಿದ್ದಾರೆ.

ಹಿಂದೂಗಳಿಗೆ ಟೋಪಿ ನೀಡುವ ಮೂಲಕ ಬಿಜೆಪಿಯೊಂದಿಗೆ ಮುಸ್ಲಿಮರು ಇದ್ದಾರೆ ಎಂಬುದನ್ನು ತೋರಿಸಲು ಬಿಜೆಪಿ ಮುಖಂಡರು ಯತ್ನಿಸಿದ್ದಾರೆ. ಆ ಮೂಲಕ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಜಾರ್ಖಂಡ್‌ನಲ್ಲಿ ಈ ಬೆಳವಣಿಗೆ ಈಗ ದೊಡ್ಡ ಮಟ್ಟದಲ್ಲಿ ರಾಜಕೀಯ ಚರ್ಚೆಗೂ ವೇದಿಕೆಯೊದಗಿಸಿದೆ.

ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಈ ಬಗ್ಗೆ ಹಲವು ಮಂದಿ ಬಿಜೆಪಿ ನಾಯಕರ “ಬಿಜೆಪಿಯು ಮತ ಗಳಿಸಲು ಹಿಂದೂಗಳನ್ನೇ ಮುಸ್ಲಿಮರನ್ನಾಗಿ ಬಿಂಬಿಸಲು ಹೊರಟಿದೆ. ಹಿಂದೂಗಳು ಕಷ್ಟದಲ್ಲಿದ್ದಾರೆ ಯಾರಿಂದ ಎಂಬುದು ಈಗ ಅರ್ಥವಾಯಿತಲ್ಲವೇ?” ಎಂದು ಪೋಸ್ಟ್ ಹಾಕುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...