ಪೊಲೀಸ್ ಠಾಣೆಯಲ್ಲೇ ಪತ್ರಕರ್ತನಿಗೆ ಥಳಿಸಿದ ಬಿಜೆಪಿ ಮಂತ್ರಿಯ ಮಗ

Date:

ಮಧ್ಯ ಪ್ರದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ನರೇಂದ್ರ ಶಿವಾಜಿ ಪಟೇಲ್‌ ಪುತ್ರ ಅಭಿಜ್ಞಾನ್‌  ಓರ್ವ ಪತ್ರಕರ್ತ ಹಾಗೂ ಮೂವರು ಸ್ಥಳೀಯರಿಗೆ ಪೊಲೀಸ್‌ ಠಾಣೆಯಲ್ಲೇ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದವರಲ್ಲಿ ಒಬ್ಬರು ಮಹಿಳೆಯರು ಸೇರಿದ್ದಾರೆ.

ಘಟನೆಯು ಭೋಪಾಲದ ಪ್ರಮುಖ ಪ್ರದೇಶದಲ್ಲಿ ನಡೆದಿದ್ದು, 30 ವರ್ಷದ ಸಚಿವ ನರೇಂದ್ರ ಶಿವಾಜಿ ಪಟೇಲ್‌ ಅವರ ಪುತ್ರ ಅಭಿಜ್ಞಾನ್‌ ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದವರು ಪೊಲೀಸ್‌ ಠಾಣೆಗೆ ದೂರು ನೀಡಲು ಬಂದಾಗ ಅಲ್ಲೂ ಕೂಡ ಹಲ್ಲೆ ನಡೆಸಿದ್ದಾನೆ.

ಸಚಿವರ ಪುತ್ರನಿಂದ ಹಲ್ಲೆಗೊಳಗಾದ ಪತ್ರಕರ್ತ ಹಾಗೂ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡದ ಕಾರಣಕ್ಕಾಗಿ ಠಾಣೆಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್‌ ಅಧಿಕಾರಿಗಳು ಅಮಾನತ್ತಾದ ನಂತರ ಠಾಣೆಗೆ ಮಧ್ಯರಾತ್ರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಂದ ಸಚಿವರ ಪುತ್ರ ದಾಂಧಲೆ ನಡೆಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

ನಿನ್ನೆ(ಮಾ.31) ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ದಂಪತಿ ಸಾರ್ವಜನಿಕ ಸ್ಥಳದಲ್ಲಿ ನಿಂತಿದ್ದಾಗ ಕಾರಿನಲ್ಲಿ ಬಂದ ಒಂದು ಗುಂಪು ಬೈಕ್‌ನಲ್ಲಿ ಇದ್ದ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸುತ್ತಿದ್ದರು. ಇದನ್ನು ರಸ್ತೆಯಲ್ಲಿ ನಿಂತಿದ್ದ ಸ್ಥಳೀಯ ಪತ್ರಕರ್ತ ಕೂಡ ನೊಡಿದ್ದಾನೆ.

ವ್ಯಕ್ತಿಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಮಹಿಳೆ ಪ್ರಶ್ನಿಸಿದಾಗ ಆಕೆಯನ್ನು ಸಚಿವರ ಪುತ್ರ ಮನಬಂದಂತೆ ನಿಂದಿಸಿ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದ್ದಾನೆ. ಮಹಿಳೆಯ ಜೊತೆ ಆಕೆಯ ಪತಿ ಹಾಗೂ ಪ್ರಶ್ನಿಸಿದ ಪತ್ರಕರ್ತನ ಮೇಲೂ ಸಚಿವರ ಪುತ್ರ ಹಲ್ಲೆ ಮಾಡಿದ್ದಾನೆ.

ನಾಲ್ವರು ಸ್ಥಳೀಯ ಪೊಲೀಸ್‌ ಠಾಣೆಗೆ ದೂರು ನಿಡಲು ಹೋದಾಗ ಅವರನ್ನು ಹಿಂಬಾಲಿಸಿದ ಸಚಿವರ ಪುತ್ರ ಹಾಗೂ ಆತನ ಗುಂಪು ಅಲ್ಲಿಯೂ ಹಲ್ಲೆ ನಡೆಸಿದ್ದಾರೆ. ನಂತರ ಪೊಲೀಸರು ಗುಂಪನ್ನು ಹೊರಗಡೆ ಕಳಿಸಿದರು.

ಘಟನೆಯ ನಂತರ ಪೊಲೀಸರು ಸಚಿವರ ಪುತ್ರ ಅಭಿಜ್ಞಾನ್‌ ಹಾಗೂ ಆತನ ಸಂಗಡಿಗರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಬಿಜೆಪಿ ಮಂತ್ರಿಯ ಅಮಾನುಷ ಹಲ್ಲೆಯನ್ನು ಖಂಡಿಸಿರುವ ಮಧ್ಯ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಜೀತು ಪತ್ವಾರಿ, ಮದ್ಯಪಾನ ಮಾಡಿ ಮಂತ್ರಿಯ ಮಗ ಹಲ್ಲೆ ನಡೆಸಿರುವುದು ರಾಜ್ಯದಲ್ಲಿ ಅರಾಜಕತೆ ನಡೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಸರ್ಕಾರದ ಒತ್ತಡದಿಂದಾಗಿ ಬಿಜೆಪಿಯ ಮಂತ್ರಿಯ ಪುತ್ರನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...