ಮತದಾರರನ್ನು ಅಳಿಸಿಹಾಕಲು BJPಯಿಂದ ‘ವ್ಯಾನಿಶ್ ಆಯೋಗ’ದ ದುರುಪಯೋಗ; ಮುಂದುವರೆದ ಮಮತಾ ಧರಣಿ

Date:

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ಧ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಧರಣಿ ಮೂರನೇ ದಿನವು ಮುಂದುವರೆದಿದೆ. ಚುನಾವಣಾ ಆಯೋಗವನ್ನು ‘ವ್ಯಾನಿಶ್‌ ಆಯೋಗ’ವೆಂದು ಕರೆದಿರುವ ಮಮತಾ, “ಕಾನೂನುಬದ್ಧ ಮತದಾರರನ್ನು ಅಳಿಸಿಹಾಕಲು ಬಿಜೆಪಿ ‘ವ್ಯಾನಿಶ್ ಆಯೋಗ’ವನ್ನು ದುರುಪಯೋಗ ಮಾಡಿಕೊಂಡಿದೆ” ಎಂದು ಆರೋಪಿಸಿದ್ದಾರೆ.

“ದೇಶವು ತನ್ನ ಪ್ರಜಾಪ್ರಭುತ್ವದ ಅಡಿಪಾಯಗಳ ಮೇಲೆ ಅಭೂತಪೂರ್ವ ಮತ್ತು ನೇರ ದಾಳಿಯನ್ನು ಎದುರಿಸುತ್ತಿದೆ. ಬಿಜೆಪಿ ತನ್ನ ‘ಒಂದು ರಾಷ್ಟ್ರ, ಒಬ್ಬ ನಾಯಕ, ಒಂದು ಪಕ್ಷ’ ಎಂಬ ಉನ್ಮಾದದಲ್ಲಿ ಜನ ವಿರೋಧಿ ಮಹತ್ವಾಕಾಂಕ್ಷೆಗಳ ಈಡೇರಿಕೆಗಾಗಿ ಪ್ರಜಾಪ್ರಭುತ್ವ ಸಂಸ್ಥೆ ಮತ್ತು ಸಾಂವಿಧಾನಿಕ ಹುದ್ದೆಗಳನ್ನು ವ್ಯವಸ್ಥಿತವಾಗಿ ದುರುಪಯೋಗ ಮಾಡಿಕೊಂಡಿದೆ” ಎಂದು ಮಮತಾ ಆರೋಪಿಸಿದ್ದಾರೆ.

“ಬಾಬಾಸಾಹೇಬ್ ಅಂಬೇಡ್ಕರ್ ರೂಪಿಸಿದ ಸಂವಿಧಾನವನ್ನು ತನ್ನ ಪ್ರಣಾಳಿಕೆ ಮತ್ತು ಮನುವಾದದೊಂದಿಗೆ ಬದಲಾಯಿಸುವುದು ಬಿಜೆಪಿಯ ಅಂತಿಮ ಗುರಿಯಾಗಿದೆ. ವರ್ಷಗಳಿಂದ, ಬಿಜೆಪಿ ಕೇಂದ್ರೀಯ ಸಂಸ್ಥೆಗಳು, ರಾಷ್ಟ್ರೀಯ ಆಯೋಗಗಳು, ಗುಲಾಮ ಗೋದಿ ಮಾಧ್ಯಮ ಹಾಗೂ ನ್ಯಾಯಾಂಗದ ಒಂದು ವಿಭಾಗವನ್ನು ಬಂಗಾಳದ ವಿರುದ್ಧ ಅಸ್ತ್ರವಾಗಿ ಬಳಸಲಾಗುತ್ತಿದೆ. ಅವರು ಮತದಾರರ ಪಟ್ಟಿಯಿಂದ ಕಾನೂನುಬದ್ಧ ಮತದಾರರನ್ನು ಅಳಿಸಲು ಮುಂದಾಗಿದ್ದಾರೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಇರಾನ್ ನಾಯಕನ ಆಯ್ಕೆಯಲ್ಲಿ ಅಮೆರಿಕದ ಹಸ್ತಕ್ಷೇಪ; ಮುಂದುವರಿದ ಟ್ರಂಪ್ ದುಷ್ಟಬುದ್ಧಿ

ಬಿಜೆಪಿ ನಾಯಕತ್ವವನ್ನು ‘ದೆಹಲಿ ಜಮೀನ್ದಾರರು’ ಎಂದು ಕರೆದಿರುವ ಮಮತಾ, “ಬಂಗಾಳವನ್ನು ತಮ್ಮ ಅಧೀನಕ್ಕೆ ಪಡೆಯಬೇಕೆಂಬ ಅವರ ಗುರಿಯು ಎಂದಿಗೂ ಯಶಸ್ವಿಯಾಗುವುದಿಲ್ಲ. ಈ ರಾಜ್ಯದ ಜನರನ್ನು ಅವಮಾನಿಸಲು, ಬೆದರಿಸಲು ಹಾಗೂ ಕಿರುಕುಳ ನೀಡಲು ಪ್ರಯತ್ನಿಸುವ ಬಿಜೆಪಿ ಪ್ರತಿಯೊಂದು ಬಂಗಾಳ ವಿರೋಧಿ ಕಾರ್ಯಸೂಚಿಗೆ ನಮ್ಮ ಧರಣಿಯು ಉತ್ತರವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...