ಕೇಂದ್ರ ಕಾನೂನು ಸಚಿವ ‘ಭ್ರಷ್ಟಾಚಾರಿ ನಂ. 1’ ಎಂದ ಬಿಜೆಪಿ ಶಾಸಕ

Date:

ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘ್ವಲ್‌ ಅವರು ‘ಭ್ರಷ್ಟಾಚಾರಿ ನಂಬರ್‌ ಒನ್’ ಎಂದು ಬಿಜೆಪಿ ಶಾಸಕ ಹಾಗೂ ರಾಜಸ್ಥಾನ ವಿಧಾನಸಭೆಯ ಮಾಜಿ ಸ್ಪೀಕರ್‌ ಕೈಲಾಶ್‌ ಚಂದ್ರ ಆರೋಪಿಸಿದ್ದಾರೆ.

ಭಿಲ್ವಾರಾದ ಶಾಹಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ 89 ವರ್ಷದ ಕೈಲಾಶ್‌ ಚಂದ್ರ, ಭ್ರಷ್ಟಾಚಾರಿಯಾಗಿರುವ ಅರ್ಜುನ್‌ ರಾಮ್‌ ಮೇಘ್ವಲ್‌ ಅವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಕೋರಿ ತಾವು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

“ಅರ್ಜುನ್‌ ಮೇಘ್ವಲ್‌ ಭ್ರಷ್ಟಾಚಾರಿ ನಂಬರ್‌ 1. ಅವರ ವಿರುದ್ಧ ಹಲವು ಭ್ರಷ್ಟಾಚಾರ ಪ್ರಕರಣಗಳಿವೆ. ನೀವು ಕಾನೂನು ಸಚಿವರಾಗಿ ನೇಮಿಸಿದವರು ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ ಎಂದು ಪ್ರಧಾನಿಗೆ ಬರೆಯುವ ಪತ್ರದಲ್ಲಿ ವಿವರಿಸುತ್ತೇನೆ. ಅವರು ಅಧಿಕಾರಿಯಾಗಿದ್ದಾಗ ಬಡವರನ್ನು ಮತ್ತು ಪರಿಶಿಷ್ಟ ಜಾತಿಯವರನ್ನೂ ಬಿಟ್ಟಿಲ್ಲ. ಎಲ್ಲರಿಂದಲೂ ಹಣ ಪಡೆದಿದ್ದರು,” ಎಂದು ಕೈಲಾಶ್‌ ಚಂದ್ರ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅರ್ಜುನ್‌ ಮೇಘ್ವಲ್‌ ಹಿಂದೆ ಕಲೆಕ್ಟರ್‌ ಆಗಿದ್ದಾಗ ವ್ಯಾಪಕ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದರು. ಭ್ರಷ್ಟಾಚಾರ ಪ್ರಕರಣಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಅವರು ರಾಜಕೀಯ ಸೇರಿದರು ಎಂದು ಕೈಲಾಶ್‌ ಚಂದ್ರ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲು ಧೈರ್ಯವಿದೆಯೆ? ಕೇಂದ್ರಕ್ಕೆ ಸಂಜಯ್‌ ರಾವುತ್‌ ಸವಾಲ್‌

“ಇಲ್ಲಿನ ರಾಜಕೀಯದಲ್ಲಿ ಸಚಿವರು ಹಸ್ತಕ್ಷೇಪ ನಡೆಸುತ್ತಿದ್ದಾರೆ. ಅವರ ವಿರುದ್ಧದ ಎಲ್ಲ ಭ್ರಷ್ಟಾಚಾರ ಪ್ರಕರಣಗಳು ಇತ್ಯರ್ಥವಾಗುವ ತನಕ ಸಚಿವ ಸ್ಥಾನದಿಂದ ತೆಗೆದುಹಾಕಬೇಕು” ಎಂದು ಕೈಲಾಶ್‌ ಚಂದ್ರ ಹೇಳಿದ್ದಾರೆ.

ಅರ್ಜುನ್‌ ಮೇಘ್ವಲ್ ಅವರು ಕೇಂದ್ರ ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಂಸ್ಕೃತಿ ಸಚಿವರಾಗಿದ್ದಾರೆ.

ರಾಜಸ್ಥಾನ ವಿಧಾನಸಭಾ ಚುನಾವಣೆಗಾಗಿ ಬಿಜೆಪಿಯ 25 ಸದಸ್ಯರ ಸಂಕಲ್ಪ ಪತ್ರ ಅಥವಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಇತ್ತೀಚೆಗಷ್ಟೇ ಅರ್ಜುನ್‌ ಮೇಘ್ವಲ್‌ ಅವರನ್ನು ನೇಮಿಸಲಾಗಿತ್ತು. ರಾಜಸ್ಥಾನ ಆಡಳಿತಾತ್ಮಕ ಸೇವೆಗಳ ಅಧಿಕಾರಿಯಾಗಿದ್ದ ಅವರು ನಂತರ ಐಎಎಸ್‌ ಅಧಿಕಾರಿಯಾಗಿ ಭಡ್ತಿಗೊಂಡು ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

2009 ಲೋಕಸಭಾ ಚುನಾವಣೆಗೆ ಮುನ್ನ ವಿಆರ್‌ಎಸ್‌ ಪಡೆದು ಅವರು ಬಿಕಾನೇರ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆದು ಗೆಲುವು ಸಾಧಿಸಿದ್ದರು.

ಅರ್ಜುನ್ ಮೇಘ್ವಲ್ ಅವರನ್ನು ‘ಭ್ರಷ್ಟ’ನಾಯಕ ಎಂದು ಸಾರ್ವಜನಿಕವಾಗಿ ಕರೆದಿದ್ದಕ್ಕಾಗಿ ಕೈಲಾಶ್ ಮೇಘವಾಲ್ ಅವರಿಗೆ ರಾಜಸ್ಥಾನ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿಗೊಳಿಸಿದೆ.

ರಾಜ್ಯಾಧ್ಯಕ್ಷ ಸಿ ಪಿ ಜೋಶಿ ಅವರ ಸೂಚನೆ ಮೇರೆಗೆ ರಾಜ್ಯ ಶಿಸ್ತು ಸಮಿತಿಯು ಕೈಲಾಶ್ ಮೇಘವಾಲ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಹತ್ತು ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...