ನನ್ನ ಶೂಗಳನ್ನು ಎಣಿಸಲು ಸ್ವಾಗತ ಎಂದು ಸಿಬಿಐ ಛೇಡಿಸಿದ ಮಹುವಾ ಮೊಯಿತ್ರಾ

Date:

ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಟಿಎಂಸಿ ರಾಜ್ಯಸಭೆ ಸದಸ್ಯೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿರುವ ಬಗ್ಗೆ ಮಹುವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ ಮಹುವಾ ಮೊಯಿತ್ರಾ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ(ನ.08) ಹೇಳಿದ್ದಾರೆ.

‘ನನ್ನ ದೂರಿನ ಆಧಾರದ ಮೇಲೆ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಆರೋಪಿ ಸಂಸದೆ ಮಹುವಾ ಮೊಯಿತ್ರಾ ಅವರ ಭ್ರಷ್ಟಾಚಾರದ ಬಗ್ಗೆ ಇಂದು ಲೋಕಪಾಲ್ ಸಿಬಿಐ ತನಿಖೆಗೆ ಆದೇಶಿಸಿದೆ’ ಎಂದು ನಿಶಿಕಾಂತ್ ದುಬೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಮಹುವಾ ಮೊಯಿತ್ರಾ, “ನನಗೆ ಕರೆ ಮಾಡುವ ಮಾಧ್ಯಮಗಳಿಗೆ ನನ್ನ ಉತ್ತರ 13,000 ಕೋಟಿ ರೂ. ಅದಾನಿ ಕಲ್ಲಿದ್ದಲು ಹಗರಣದ ಕುರಿತು ಸಿಬಿಐ ಮೊದಲು ಎಫ್‌ಐಆರ್ ದಾಖಲಿಸಬೇಕಾಗಿದೆ. ಕೇಂದ್ರ ಗೃಹ ಇಲಾಖೆಯ ಕ್ಲಿಯರೆನ್ಸ್‌ನೊಂದಿಗೆ ಭಾರತೀಯ ಬಂದರುಗಳು ಮತ್ತು ವಿಮಾನ ನಿಲ್ದಾಣಗಳನ್ನು ಖರೀದಿಸುವ ಅದಾನಿ ಸಂಸ್ಥೆಗಳು ಎಫ್‌ಪಿಐ ಮಾಲೀಕತ್ವವನ್ನು ಹೇಗೆ ಹೊಂದಿದ್ದವು ಎಂಬುದು ರಾಷ್ಟ್ರೀಯ ಭದ್ರತಾ ಸಮಸ್ಯೆಯಾಗಿದೆ. ನನ್ನ ಶೂಗಳನ್ನು ಎಣಿಸಲು ಸಿಬಿಐಗೆ ಸ್ವಾಗತ” ಎಂದು ಛೇಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ಸಹಪಾಠಿಗಳಿಂದ ಹಲ್ಲೆ, ಜಾತಿ ನಿಂದನೆ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಂಸತ್ತಿನಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆಗಳನ್ನು ಕೇಳುವುದಕ್ಕೆ ಬದಲಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಹಣಕಾಸಿನ ಅನುಕೂಲಗಳು ಮತ್ತು ಉಡುಗೊರೆಗಳ ರೂಪದಲ್ಲಿ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸ ದುಬೆ ಆರೋಪಿಸಿದ್ದರು.

ಪ್ರಶ್ನೆಗಳನ್ನು ಅಪ್​ಲೋಡ್ ಮಾಡಲು ಮೊಯಿತ್ರಾ ಅವರ ಲೋಕಸಭೆ ಖಾತೆಗೆ ದುಬೈನಿಂದ ಲಾಗ್ ಇನ್ ಆಗಿರುವುದಾಗಿ ಹಿರಾನಂದನಿ ಅಫಿಡವಿಟ್‌ನಲ್ಲಿ ಹೇಳಿಕೊಂಡಿದ್ದಾರೆ. ಆದರೆ, ಲಂಚದ ಆರೋಪವನ್ನು ಟಿಎಂಸಿ ಸಂಸದೆ ನಿರಾಕರಿಸಿದ್ದರು. ಆದರೆ ಸಂಸತ್ತಿನ ಲಾಗಿನ್ ಮತ್ತು ಪಾಸ್‌ವರ್ಡ್ ವಿವರಗಳನ್ನು ಸ್ನೇಹಿತ ಮತ್ತು ಉದ್ಯಮಿ ದರ್ಶನ್ ಹಿರಾನಂದನಿಗೆ ನೀಡಿದ್ದಾಗಿ ನಂತರ ಒಪ್ಪಿಕೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದಷ್ಟೇ ಲೋಕಸಭೆಯ ನೈತಿಕ ಸಮಿತಿಯ ಮುಂದೆ ಮೊಯಿತ್ರಾ ವಿಚಾರಣೆಗೆ ಹಾಜರಾಗಿದ್ದರು. ಉದ್ಯಮಿ ದರ್ಶನ್ ಹಿರಾನಂದನಿ ಅವರೊಂದಿಗೆ ಸಂಸತ್ತಿನ ಲಾಗಿನ್ ವಿವರಗಳನ್ನು ಹಂಚಿಕೊಳ್ಳುವಾಗ ತಾನು ಯಾವುದೇ ಸಂಸದೀಯ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಸಮಿತಿಗೆ ಮೊಯಿತ್ರಾ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...