ದೇಣಿಗೆ ಹಣಕ್ಕಾಗಿ ಕೋಟ್ಯಂತರ ಜನರ ಜೀವಕ್ಕೆ ಕುತ್ತು ತಂದ ಬಿಜೆಪಿ: ಅಖಿಲೇಶ್ ಯಾದವ್

Date:

ಕೋವಿಶೀಲ್ಡ್‌ ಲಸಿಕೆಯಿಂದ ಉಂಟಾಗುವ ಅಡ್ಡ ಪರಿಣಾಮದ ವಿವಾದದ ನಡುವೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಲಸಿಕೆ ತಯಾರಿಕೆ ಕಂಪನಿಗಳಿಂದ ರಾಜಕೀಯ ದೇಣಿಗೆಯ ಸುಲಿಗೆಗಾಗಿ ಬಿಜೆಪಿ ಸರ್ಕಾರವು ದೇಶದ ಕೋಟ್ಯಂತರ ಜನರ ಪ್ರಾಣವನ್ನು ಪಣಕ್ಕಿಟ್ಟಿದೆ. ಭಾರತದ ಸುಮಾರು 80 ಕೋಟಿ ಜನರು ಕೋವಿಶೀಲ್ಡ್‌ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಮೂಲ ತಯಾರಿಕಾ ಕಂಪನಿ ಹೇಳಿರುವಂತೆ ಗಂಭೀರ ಹೃದಯ ಸಮಸ್ಯೆಗಳು ಉಂಟಾಗಲಿವೆ. ಲಸಿಕೆ ಪಡೆದುಕೊಂಡ ಅಡ್ಡ ಪರಿಣಾಮಗಳಿಂದ ಹಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ ಅಲ್ಲದೆ ಲಸಿಕೆಯಿಂದ ಅಡ್ಡ ಪರಿಣಾಮ ಉಂಟಾಗುತ್ತದೆ ಎಂದು ಭಯ, ಅನುಮಾನಗಳು ಈಗ ಸಾಬೀತಾಗಿದೆ” ಎಂದು ಹೇಳಿದರು.

ಜನರ ಜೀವದ ಜೊತೆ ಆಡವಾಡಿದವರನ್ನು ಸಮಾಜ ಎಂದೂ ಕ್ಷಮಿಸುವುದಿಲ್ಲ. ಕೆಲವರನ್ನು ಕೊಲ್ಲುವ ಪಿತೂರಿಗೆ ಸಾಮಾನವಾದ ಇಂತಹ ಮಾರಕ ಔಷಧಗಳನ್ನು ಅನುಮತಿಸಲಾಗಿದೆ. ಇದಕ್ಕೆ ಜವಾಬ್ದಾರಿಯಾಗಿರುವ ಎಲ್ಲರ ವಿರುದ್ಧವೂ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

ಆಡಳಿತ ಪಕ್ಷವು ಲಸಿಕಾ ತಯಾರಿಕಾ ಕಂಪನಿಗಳಿಂದ ರಾಜಕೀಯ ನೆರವು ಪಡೆಯುವುದಕ್ಕಾಗಿ ಜನರ ಜೀವದ ಜೊತೆ ಚೆಲ್ಲಾಟವಾಡಿದೆ. ಇದಕ್ಕೆ ಕಾನೂನು ಅಥವಾ ಜನತೆ ಕ್ಷಮಿಸುವುದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕಾಗಿದೆ ಎಂದು ಒತ್ತಾಯಿಸಿದರು.

ಕೋವಿಡ್‌ 19ಗೆ ಕೋವಿಶೀಲ್ಡ್‌ ಲಸಿಕೆ ನೀಡಿದ ಇಂಗ್ಲೆಂಡ್ ಮೂಲದ ಫಾರ್ಮಾ ಕಂಪನಿ ಅಸ್ಟ್ರಾ ಜನಿಕಾ ಅತೀ ಅಪರೂಪದ ಸಂದರ್ಭಗಳಲ್ಲಿ ಹೃದಯದಲ್ಲಿ ಮಾರಾಣಾಂತಿಕ ತೊಂದರೆ ಸಂಭವಿಸುತ್ತದೆ ಎಂದು ಕೋರ್ಟ್‌ನಲ್ಲಿ ಒಪ್ಪಿಕೊಂಡಿತ್ತು.

ಅಸ್ಟ್ರಾ ಜನಿಕಾ ಕಂಪನಿಯಿಂದ ಬಿಜೆಪಿ ಪಕ್ಷ 200ರಿಂದ 300 ಕೋಟಿ ರೂ. ದೇಣಿಗೆ ಪಡೆದಿದೆ ಎಂದು ವಿಪಕ್ಷಗಳ ನಾಯಕರು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...