12 ರಾಜ್ಯಗಳಲ್ಲಿ ‘ಬಿಜೆಪಿ’ಯದ್ದೇ ನೇರ ಆಡಳಿತ; 3ಕ್ಕೆ ಕುಸಿದ ಕಾಂಗ್ರೆಸ್‌

Date:

ಈಗಷ್ಟೇ ಚುನಾವಣೆ ನಡೆದ ಐದು ರಾಜ್ಯಗಳ ಪೈಕಿ, ನಾಲ್ಕು ರಾಜ್ಯಗಳ ಮತ ಎಣಿಕೆ ಭಾನುವಾರ ನಡೆದಿದೆ. ಅವುಗಳಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಆ ಮೂಲಕ ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ 12 ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸಲಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಕಳೆದುಕೊಂಡ ಕಾಂಗ್ರೆಸ್‌, ಮೂರು ರಾಜ್ಯಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದೆ.

ಕೇಂದ್ರ ಸರ್ಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿಯು ಉತ್ತರಾಖಂಡ, ಹರಿಯಾಣ, ಉತ್ತರ ಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ತ್ರಿಪುರಾ, ಮಣಿಪುರ, ಅರುಣಾಚಲ ಪ್ರದೇಶದಲ್ಲಿ ಅಧಿಕಾರದಲ್ಲಿದೆ. ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ. ಜೊತೆಗೆ, ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಕಾಂಗ್ರೆಸ್‌ನಿಂದ ಕಸಿದುಕೊಂಡಿದೆ. ಆ ಮೂಲಕ 12 ರಾಜ್ಯಗಳಲ್ಲಿ ತನ್ನದೇ ನೇರ ಆಡಳಿತ ನಡೆಸಲಿದೆ.

ಇದಲ್ಲದೆ, ಮಹಾರಾಷ್ಟ್ರ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ – ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರದ ಭಾಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕು ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್‌, ರಾಜಸ್ಥಾನ ಮತ್ತು ಛತ್ತಿಸ್‌ಗಢವನ್ನು ಕಳೆದುಕೊಂಡಿದೆ. ತೆಲಂಗಾಣದಲ್ಲಿ ಗೆಲ್ಲುವ ಮೂಲಕ ಮೂರು ರಾಜ್ಯಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಕರ್ನಾಟಕ ಮತ್ತು ಹಿಮಾಚಲ ಪ್ರದೇಶದಲ್ಲಿ ಸುಭದ್ರ ಸರ್ಕಾರ ನಡೆಸುತ್ತಿದೆ.

ಜೊತೆಗೆ, ಬಿಹಾರ, ಜಾರ್ಖಂಡ್ ಹಾಗೂ ತಮಿಳುನಾಡಿನಲ್ಲಿ ಸರ್ಕಾರ ನಡೆಸುತ್ತಿರುವ ಮೈತ್ರಿ ಕೂಟದ ಭಾಗವಾಗಿ ಕಾಂಗ್ರೆಸ್‌ ಉಳಿದುಕೊಂಡಿದೆ.

ಇನ್ನು, ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತವಿದೆ. ಕೇರಳದಲ್ಲಿ ಸಿಪಿಐ(ಎಂ), ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಒಡಿಶಾದಲ್ಲಿ ಬಿಜೆಡಿ, ಪುದುಚೆರಿಯಲ್ಲಿ ಎಐಎನ್‌ಆರ್‌ಸಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕಾರದಲ್ಲಿವೆ.

ಮಿಜೋರಾಂ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಅಲ್ಲಿ ಎಂಎನ್‌ಎಫ್‌ ಗೆಲುವು ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ. ಫಲಿತಾಂಶ ಏನಾಗಲಿದೆ ಎಂಬುದು ಡಿ.4ರಂದು ತಿಳಿಯಲಿದೆ.

ಇದೆಲ್ಲದರ ನಡುವೆ, ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ವಿಧಾನಸಭೆ ಅವಧಿ ಮುಗಿಯುತ್ತಾ ಬಂದಿವೆ. ಈ ರಾಜ್ಯಗಳಲ್ಲಿ 2014ರಲ್ಲಿ ಚುನಾವಣೆ ನಡೆಯಲಿದೆ. ಇನ್ನು, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ. 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ಇದೂವರೆಗೂ ಚುನಾವಣೆ ನಡೆದಿಲ್ಲ. ಅಲ್ಲಿ,  ವಿಧಾನಸಭೆ ಚುನಾವಣೆ ನಡೆಯುವುದು ಬಾಕಿ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...