ದೇವಸ್ಥಾನಕ್ಕೆ ಕಾಂಗ್ರೆಸ್‌ನ ದಲಿತ ನಾಯಕ ಭೇಟಿ: ಗಂಗಾಜಲದಿಂದ ಶುದ್ಧೀಕರಿಸಿದ ಬಿಜೆಪಿ ನಾಯಕ

Date:

ದಲಿತ ಸಮುದಾಯಕ್ಕೆ ಸೇರಿದ ರಾಜಸ್ಥಾನ ವಿಧಾನಸಭೆಯ ವಿಪಕ್ಷ ನಾಯಕ ಟೀಕಾರಾಮ್ ಜುಲ್ಲಿ ಅವರು ರಾಮ ಮಂದಿರಕ್ಕೆ ಭೇಟಿ ನೀಡಿದ ನಂತರ, ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಜ್ಞಾನ್ ದೇವ್ ಅಹುಜಾ ಮಂದಿರದಲ್ಲಿ ಗಂಗಾ ಜಲ ಸಿಂಪಡಿಸಿದ ಆರೋಪ ಕೇಳಿ ಬಂದಿದೆ. ಇದರಿಂದ ರಾಜಸ್ಥಾನದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.

ಭಾನುವಾರ ಅಲ್ವಾರ್ ನ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಟೀಕಾರಾಮ್ ಜುಲ್ಲಿ ಭಾಗವಹಿಸಿದ ನಂತರ, ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಟೀಕಾರಾಮ್ ಜುಲ್ಲಿ ಅವರು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಲವೇ ಕ್ಷಣಗಳಲ್ಲಿ, ಆ ಸ್ಥಳವನ್ನು ಶುದ್ಧೀಕರಿಸಬೇಕಾದ ಅಗತ್ಯವನ್ನು ಒತ್ತಿ ಹೇಳಿರುವ ಜ್ಞಾನ್ ದೇವ್ ಅಹುಜಾ, ಮಂದಿರದ ಆವರಣದಲ್ಲಿ ಗಂಗಾ ಜಲವನ್ನು ಸಿಂಪಡಿಸಲು ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಕಾರಾಮ್ ಜುಲ್ಲಿ ಅವರು ದಲಿತ ಸಮುದಾಯಕ್ಕೆ ಸೇರಿರುವುದರಿಂದ ಜ್ಞಾನ್ ದೇವ್ ಅಹುಜಾರ ಈ ನಡೆಯು ವ್ಯಾಪಕ ಟೀಕೆಗೆ ಗುರಿಯಾಗಿದೆ. ಜಾತಿ ಆಧಾರಿತ ತಾರತಮ್ಯ ಹಾಗೂ ಅಸ್ಪೃಶ್ಯತೆಯ ಚರ್ಚೆಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ನಂತರ ಕ್ರೈಸ್ತರು… ಆನಂತರ?

ಈ ಕುರಿತು ಎಕ್ಸ್ ನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಟೀಕಾರಾಮ್ ಜುಲ್ಲಿ, ”ಬಿಜೆಪಿಯ ಹಿರಿಯ ನಾಯಕರ ಈ ಕೃತ್ಯವು
ಬಿಜೆಪಿಯ ದಲಿತರೆಡೆಗಿನ ಪೂರ್ವಗ್ರಹವನ್ನು ತೋರಿಸಿದೆ. ಬಿಜೆಪಿಯ ಹಿರಿಯ ನಾಯಕ ಜ್ಞಾನ್ ದೇವ್ ಅಹುಜಾ ನೀಡಿರುವ ಹೇಳಿಕೆಯು ದಲಿತರ ಬಗ್ಗೆ ಬಿಜೆಪಿಯ ಮನಸ್ಥಿತಿಯನ್ನು ಬಹಿರಂಗಗೊಳಿಸಿದೆ. ನಾನು ವಿಧಾನಸಭೆಯಲ್ಲಿ ನಿರಂತರವಾಗಿ ದಲಿತರ ಪರ ಧ್ವನಿ ಎತ್ತಿದ್ದೆ ಹಾಗೂ ಅಸ್ಪೃಶ್ಯತೆಯ ವಿರುದ್ಧ ಅಭಿಯಾನ ನಡೆಸಿದ್ದೆ. ಆದರೆ, ಬಿಜೆಪಿಯ ಮನಸ್ಥಿತಿ
ಹೇಗಿದೆಯೆಂದರೆ, ನಾನು ಓರ್ವ ದಲಿತನಾಗಿ ಮಂದಿರಕ್ಕೆ ಭೇಟಿ ನೀಡಿದ್ದರಿಂದ, ಅದನ್ನು ಗಂಗಾ ಜಲದಿಂದ ಶುದ್ಧೀಕರಿಸಬೇಕು ಎಂಬ ಮಟ್ಟಕ್ಕಿದೆ. ಇದು ಕೇವಲ ನನ್ನ ವೈಯಕ್ತಿಕ ನಂಬಿಕೆಯ ಮೇಲಿನ ದಾಳಿ ಮಾತ್ರವಲ್ಲ, ಬದಲಿಗೆ, ಅಮಾನವೀಯತೆ ಹಾಗೂ ಅಸ್ಪೃಶ್ಯತೆಯಂತಹ ಕಾನೂನು ಬಾಹಿರ ರೂಢಿಗಳಿಗೆ ಪುರಾವೆಯಾಗಿದೆ” ಎಂದು ಹೇಳಿದರು.

”ದಲಿತರಾದ ನಾವು ಪೂಜೆ ಮಾಡುವುದನ್ನೂ ಸಹಿಸದಷ್ಟು ಬಿಜೆಪಿ ನಮ್ಮನ್ನು ದ್ವೇಷಿಸುತ್ತದೆಯೆ? ದೇವರು ಬಿಜೆಪಿ ನಾಯಕರ ವೈಯಕ್ತಿಕ ಆಸ್ತಿಯಾಗಿ ಬಿಟ್ಟಿದ್ದಾನ? ದಲಿತರು ದೇವಾಲಯಗಳಿಗೆ ಭೇಟಿ ನೀಡಿದಾಗ ನಡೆಯುವ ಇಂತಹ ಜಾತೀಯತೆಯ ನಡವಳಿಕೆಗಳಿಗೆ ತಮ್ಮ ಬೆಂಬಲವಿದೆಯೆ ಎಂಬುದನ್ನು ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರು ಸ್ಪಷ್ಟಪಡಿಸಲೇಬೇಕು” ಎಂದು ಹೇಳಿದರು.

ಘಟನೆ ನಂತರ ಜ್ಞಾನ್ ದೇವ್ ಅಹುಜಾ ಅವರನ್ನು ರಾಜ್ಯ ಬಿಜೆಪಿ ಘಟಕ ಅಮಾನತುಗೊಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಷೋಕಾಸ್‌ ನೋಟಿಸ್‌ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...