‘ಇಂಡಿಯಾ’ ಒಕ್ಕೂಟಕ್ಕೆ 315 ಸೀಟು, ಬಿಜೆಪಿ 200 ದಾಟದು: ಮಮತಾ ಬ್ಯಾನರ್ಜಿ

Date:

ಲೋಕಸಭೆ ಚುನಾವಣೆಯ ನಂತರ ‘ಇಂಡಿಯಾ’ ಒಕ್ಕೂಟ ಕನಿಷ್ಠ 315 ಕ್ಷೇತ್ರಗಳನ್ನು ಗೆಲ್ಲಲಿದ್ದು, ಬಿಜೆಪಿ 200 ಕ್ಷೇತ್ರಗಳನ್ನು ದಾಟದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೋಲ್ಕತ್ತಾದಿಂದ 78 ಕಿ.ಮೀ ದೂರವಿರುವ ಉತ್ತರ 24 ಪರಗಣದ ಪಟ್ಟಣದ ರ್ಯಾಲಿಯಲ್ಲಿ ಮಾತನಾಡಿದರು. ಇಂಡಿಯಾ ಒಕ್ಕೂಟ 315 ಸೀಟುಗಳನ್ನು ಗೆದ್ದರೆ, ಬಿಜೆಪಿ ಹೆಚ್ಚಿಗೆ ಎಂದರೆ 195 ಸ್ಥಾನ ಗಳಿಸಬಹುದು. ಈ ಬಾರಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದು ನನಗೆ ಖಚಿತವಿದೆ. ಮೋದಿ ದೆಹಲಿಯಲ್ಲಿ ಇರುವುದಿಲ್ಲ.ನನಗೆ ಬಂದ ಅಂಕಿಅಂಶಗಳ ಮಾಹಿತಿಯ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದರು.

ಮೋದಿ ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲ.ನಾಲ್ಕು ಹಂತದ ಮತದಾನವಾದ ನಂತರ ಬಿಜೆಪಿ ಪರವಾಗಿ ಮತದಾನ ಚೆನ್ನಾಗಿ ನಡೆದಿಲ್ಲ. ಈ ಕಾರಣದಿಂದ ಕೇಂದ್ರದಲ್ಲಿರುವ ಆಡಳಿತ ಪಕ್ಷ ಭಯಗೊಂಡಿದೆ. ಅದಕ್ಕಾಗಿಯೇ ಅವರು 400 ಸೀಟು ಎಂದು ಬೊಗಳುತ್ತಿದ್ದಾರೆ ಎಂದು ಮಮತಾ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

“ಸಂದೇಶ್‌ಖಾಲಿ ಸಮಸ್ಯೆಯ ಬಗ್ಗೆ ಬಿಜೆಪಿ ಹಾಗೂ ಪ್ರಧಾನಿ ಸುಳ್ಳುಗಳನ್ನು ಹರಡುತ್ತಿದ್ದಾರೆ. ಗ್ಯಾರಂಟಿ ನಾಯಕ ಪಶ್ಚಿಮ ಬಂಗಾಳದಲ್ಲಿ ಆರೋಪ ಮಾಡುತ್ತಿದ್ದಾರೆ.ಈಗ ವಿಡಿಯೋಗಳ ಮೂಲಕ ಸತ್ಯ ಬಹಿರಂಗಗೊಂಡಿದೆ. ಅವುಗಳನ್ನು ಮಾಧ್ಯಮಗಳಲ್ಲಿ ತೋರಿಸುತ್ತಿದ್ದಾರೆ. ಅವರು ಸತ್ಯವನ್ನು ಮುಚ್ಚಿಡುತ್ತಿದ್ದಾರೆ. ರಾಜ್ಯದ ಮಹಿಳೆಯರ ಘನತೆಯನ್ನು ಹಾಳು ಮಾಡಲು ಷಡ್ಯಂತ್ರ ರೂಪಿಸುತ್ತಿದ್ದಾರೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದರು.

ಭಾನುವಾರ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಟಿಎಂಸಿ ಸಂದೇಶ್‌ಖಾಲಿಯಲ್ಲಿನ ಹಿಂದಿನ ದುಷ್ಕೃತ್ಯಗಳನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ. ಅವರ ಪಕ್ಷದ ನಾಯಕರು ಲೈಂಗಿಕ ದೌರ್ಜನ್ಯ ಹಾಗೂ ಭೂಕಬಳಿಕೆ ಆರೋಪದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...