ಚೆನ್ನೈ| 4 ಕೋಟಿ ರೂ ನಗದು ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಬಿಜೆಪಿ ಕಾರ್ಯಕರ್ತರು; ಮೂವರ ಬಂಧನ

Date:

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸುಮಾರು 4 ಕೋಟಿ ರೂಪಾಯಿ ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತ ಸೇರಿದಂತೆ ಮೂವರನ್ನು ಶನಿವಾರ ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. 4 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಕಳುಹಿಸಲಾಗಿದೆ ಎಂದು ಚೆಂಗಲ್ಪಟ್ಟು ಡಿಇಒ ತಿಳಿಸಿದ್ದಾರೆ.

ಬಿಜೆಪಿ ಸದಸ್ಯ ಹಾಗೂ ಖಾಸಗಿ ಹೋಟೆಲ್ ಮ್ಯಾನೇಜರ್ ಸತೀಶ್, ಆತನ ಸಹೋದರ ನವೀನ್ ಮತ್ತು ಒಬ್ಬ ಚಾಲಕ ಪೆರುಮಾಳ್‌ ಅನ್ನು ಬಂಧಿಸಲಾಗಿದೆ. ಒಟ್ಟು ಆರು ಬ್ಯಾಗ್‌ಗಳಲ್ಲಿ 4 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ. ಮೂವರು ಕೂಡಾ ರೈಲಿನಲ್ಲಿ ತಿರುನಲ್ವೇಲಿಗೆ ತೆರಳುತ್ತಿದ್ದಾಗ ಫ್ಲೈಯಿಂಗ್ ಸ್ಕ್ವಾಡ್ ಅವರನ್ನು ವಶಕ್ಕೆ ಪಡೆದಿದೆ.

ಇದನ್ನು ಓದಿದ್ದೀರಾ?   ತಮಿಳುನಾಡು| ಮಿತಿಗಿಂತ 10 ರೂ ಹೆಚ್ಚು; ಮಹಿಳೆಯಿಂದ 50,010 ರೂ ವಶಪಡಿಸಿಕೊಂಡ ಎಲೆಕ್ಷನ್ ಸ್ಕ್ವಾಡ್!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲಗಳ ಪ್ರಕಾರ, ತಿರುನಲ್ವೇಲಿ ಬಿಜೆಪಿ ಸಂಸದ ನೈನಾರ್ ನಾಗೇಂತಿರನ್ ಅವರ ತಂಡದ ಸೂಚನೆಯಂತೆ ಈ ಹಣವನ್ನು ಸಾಗಿಸುತ್ತಿದ್ದೆ ಎಂದು ಬಿಜೆಪಿ ಕಾರ್ಯಕರ್ತ ಸತೀಶ್ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕ ತನಿಖೆ ನಡೆಸಲಾಗುತ್ತಿದೆ.

“ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಶನಿವಾರ 4 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದೆ. ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಕಳುಹಿಸಲಾಗಿದೆ. ವಶಪಡಿಸಿಕೊಂಡ ಮೊತ್ತವು 10 ಲಕ್ಷ ರೂಪಾಯಿಗಿಂತ ಅಧಿಕವಾಗಿರುವ ಕಾರಣ ಆದಾಯ ತೆರಿಗೆ ಇಲಾಖೆಯು ತನಿಖೆ ನಡೆಸಲಿದೆ” ಎಂದು ಚೆಂಗಲ್ಪಟ್ಟು ಡಿಇಒ ಹೇಳಿದರು.

“ಈ ಕಾರ್ಯಾಚರಣೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಗೆ ಕಳುಹಿಸಲಾಗಿದೆ. ಇದರ ನಂತರ, ಆದಾಯ ತೆರಿಗೆ ಇಲಾಖೆ ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಸುತ್ತದೆ” ಎಂದು ಡಿಇಒ ತಿಳಿಸಿದರು.

39 ಲೋಕಸಭಾ ಸ್ಥಾನಗಳನ್ನು ಹೊಂದಿರುವ ತಮಿಳುನಾಡಿನಲ್ಲಿ ಏಪ್ರಿಲ್ 19 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...