ಅಧಿಕಾರಿಯನ್ನು ಕಚೇರಿಯಿಂದ ಹೊರಗೆಳೆದು, ಮುಖಕ್ಕೆ ಒದ್ದು ಹಲ್ಲೆಗೈದ ಬಿಜೆಪಿಗರು

Date:

ಮಹಾನಗರ ಪಾಲಿಕೆ ಕಚೇರಿಯಲ್ಲಿ ಹಿರಿಯ ಅಧಿಕಾರಿಯೊಬ್ಬರ ಮೇಲೆ ಪುಂಡರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬಿಜೆಪಿ ಅಧಿಕಾರದಲ್ಲಿರುವ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಹಲ್ಲೆಗೈದವರು ಬಿಜೆಪಿ ಕಾರ್ಯಕರ್ತರು ಎಂದು ಆರೋಪಿಸಲಾಗಿದೆ.

ಭುವನೇಶ್ವರ ಮಹಾನಗರ ಪಾಲಿಕೆ (ಬಿಎಂಸಿ) ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹೂ ಅವರ ಮೇಲೆ ಬಿಜೆಪಿ ಕಾರ್ಪೋರೇಟರ್ ಎದುರೇ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ರತ್ನಾಕರ್ ಅವರನ್ನು ಪಾಲಿಕೆ ಕಚೇರಿಯಿಂದ ಹೊರಗೆ ಎಳೆದು ತಂದು, ಮುಖಕ್ಕೆ ಕಾಲಿನಿಂದ ಒದ್ದು, ನಿರಂತರವಾಗಿ ಥಳಿಸಿದ್ದಾರೆ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕುಂದುಕೊರತೆ ವಿಚಾರಣೆಯ ಸಮಯದಲ್ಲಿ ಸಾಹೂ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರ್ವಜನಿಕರ ಸಮಸ್ಯೆಗಳ ವಿಚಾರಣೆ ನಡೆಯುತ್ತಿರುವಾಗ, ಕೆಲವರು ನಮ್ಮ ಕೊಠಡಿಗೆ ನುಗ್ಗಿದರು. ನನ್ನ ಕಾಲರ್ ಹಿಡಿದು ‘ಜಗ್ ಭಾಯ್’ (ಬಿಜೆಪಿ ನಾಯಕ ಜಗನ್ನಾಥ್ ಪ್ರಧಾನ್ ಎನ್ನಲಾಗಿದೆ) ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದೀಯಾ ಎಂದು ಆರೋಪಿಸಿ, ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನನ್ನು ಬಲವಂತವಾಗಿ ತಮ್ಮ ವಾಹನದಲ್ಲಿ ಹತ್ತಿಸಿಕೊಂಡು ಕೊರೆದೊಯ್ಯಲು ಯತ್ನಿಸಿದರು” ಎಂದು ಹಲ್ಲೆಗೊಳಗಾದ ಅಧಿಕಾರಿ ಆರೋಪಿಸಿದ್ದಾರೆ.

“ನಾನು ಬೆಳಿಗ್ಗೆ 11.30ರ ಸುಮಾರಿಗೆ ಸಾರ್ವಜನಿಕರ ಸಮಸ್ಯೆಗಳನ್ನು ವಿಚಾರಣೆ ನಡೆಸುತ್ತಿದ್ದೆ. ಆಗ ಬಿಎಂಸಿ ಕಾರ್ಪೊರೇಟರ್ ಜೀವನ್ ರಾವತ್ ಸೇರಿದಂತೆ ಐದಾರು ಮಂದಿ ನನ್ನ ಕೊಠಡಿಗೆ ನುಗ್ಗಿದರು. ಕಾರ್ಪೊರೇಟರ್ ರಾವತ್ ಅವರು ‘ನೀನು ಜಗ್ ಭಾಯ್ ಜೊತೆ ಅನುಚಿತವಾಗಿ ವರ್ತಿಸಿದೆಯಾ’ ಎಂದು ಪ್ರಶ್ನಿಸಿದರು. ನಾನು ಅವರ ಆರೋಪವನ್ನು ನಿರಾಕರಿಸಿದೆ. ಆಗ ಅವರೊಂದಿಗೆ ಬಂದಿದ್ದವರು ನನ್ನ ಮೇಲೆ ದಾಳಿ ನಡೆಸಿದರು. ನನ್ನನ್ನು ನನ್ನ ಕಚೇರಿಯಿಂದ ಹೊರಗೆ ಎಳೆದುಕೊಂಡು ಹೋಗಿ, ಥಳಿಸಿ, ಬಲವಂತವಾಗಿ ತಮ್ಮ ವಾಹನಕ್ಕೆ ಕರೆದೊಯ್ಯಲು ಪ್ರಯತ್ನಿಸುತ್ತಿದ್ದರು” ಎಂದು ವಿವರಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ; ಗೂಂಡಾಗಳು ಅಧಿಕಾರಿ ರತ್ನಾಕರ್ ಅವರನ್ನು ನೆಲೆದಲ್ಲಿ ಎಳೆದಾಡಿ, ವಾಹನದ ಬಳಿಗೆ ಎಳೆದೊಯ್ಯುವುದು ಕಂಡುಬಂದಿದೆ.

ಸಂತ್ರಸ್ತ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಭುವನೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಾರ್ಪೋರೇಟರ್ ಜೀವನ್ ರಾವತ್ ಹಾಗೂ ಅವರೊಂದಿಗೆ ಬಂದಿದ್ದ ರಶ್ಮಿ ಮಹಾಪಾತ್ರ ಮತ್ತು ದೇಬಾಶಿಶ್ ಪ್ರಧಾನ್ ಎಂಬವರನ್ನು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.

ಘಟನೆಯನ್ನು ಖಂಡಿಸಿ ವಿಪಕ್ಷ ಬಿಜು ಜನತಾದಳ (ಬಿಜೆಡಿ)ದ ಕಾರ್ಪೊರೇಟರ್‌ಗಳು ಮತ್ತು ಬಿಎಂಸಿ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಆಡಳಿತದಲ್ಲಿ ‘ಯಾರೂ ಸುರಕ್ಷಿತವಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮುಖ್ಯಸ್ಥ, ಒಡಿಶಾ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು, “ಅಧಿಕಾರಿ ರತ್ನಾಕರ್ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವುದು ತೀವ್ರ ಆಘಾತ ಉಂಟುಮಾಡಿದೆ. ಈ ಅಮಾನವೀಯ ದಾಳಿ ನಡೆಸಿದ, ದಾಳಿಗೆ ಪಿತೂರಿ ರೂಪಿಸಿದ ರಾಜಕೀಯ ನಾಯಕರು ಸೇರಿದಂತೆ ತಪ್ಪಿತಸ್ಥರ ವಿರುದ್ಧ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರನ್ನು ಒತ್ತಾಯಿಸಿದ್ದಾರೆ.

“ಈ ವೀಡಿಯೊವನ್ನು ನೋಡಿ ನನಗೆ ಆಘಾತವಾಗಿದೆ. ಇಂದು, ಬಿಎಂಸಿಯ ಹುಚ್ಚುವರಿ ಆಯುಕ್ತ ರತ್ನಾಕರ್ ಸಾಹೂ ಅವರನ್ನು ಗೂಂಡಾಗಳು ಎಳೆದೊಯ್ದು ಬಿಜೆಪಿ ಕಾರ್ಪೊರೇಟರ್ ಮುಂದೆಯೇ ಕ್ರೂರವಾಗಿ ಹಲ್ಲೆ ನನಡೆಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿಯೊಂದಿಗೆ ಆರೋಪಿಗಳು ಸಂಬಂಧ ಹೊಂದಿದ್ದಾರೆಂದು ಹೇಳಲಾಗುತ್ತಿದೆ. ಇದು ರಾಜಕೀಯ ಪಿತೂರಿ ಮತ್ತು ಹಲ್ಲೆ. ಒಬ್ಬ ಹಿರಿಯ ಅಧಿಕಾರಿ ತನ್ನದೇ ಕಚೇರಿಯಲ್ಲಿ ಸುರಕ್ಷಿತವಾಗಿ ಇರಲು ಸಾಧ್ಯವಾಗಿದ್ದರೆ, ಸಾಮಾನ್ಯ ನಾಗರಿಕರು ಸರ್ಕಾರದಿಂದ ಯಾವ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರೀಕ್ಷಿಸಲು ಸಾಧ್ಯ” ಎಂದು ಪಟ್ನಾಯಕ್ ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...