ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ: ವಿಪಕ್ಷಗಳ ವಿರೋಧ

Date:

ವಿಪಕ್ಷಗಳ ತೀವ್ರ ವಿರೋಧದ ನಡುವೆ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್‌ ಅವರು 18ನೇ ಲೋಕಸಭೆಯ  ಹಂಗಾಮಿ ಸ್ಪೀಕರ್‌ ಆಗಿ ಪ್ರಮಾಣ ವಚನ ಸ್ಪೀಕರಿಸಿದರು.

ಭರ್ತೃಹರಿ ಮಹತಾಬ್‌ ಅವರಿಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿದರು.18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ಭರ್ತೃಹರಿ ಮಹತಾಬ್‌ ಅವರು ಅಧ್ಯಕ್ಷತೆ ವಹಿಸಲಿದ್ದು, ನೂತನವಾಗಿ ಆಯ್ಕೆಯಾದ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಭರ್ತೃಹರಿ ಮಹತಾಬ್‌ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರ ನಿಯಮಾವಳಿಗಳನ್ನು ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಒಳಗೊಂಡಂತೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ನಿಯಮಾನುಸಾರ ಅತೀ ಹೆಚ್ಚು ಅವಧಿಗೆ 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್ ಸಂಸದ ಕೆ ಸುರೇಶ್‌ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಬೇಕಿತ್ತೆಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಹಿರಿತನದ ಆಧಾರದ ಮೇಲೆ ಸುರೇಶ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್‌ ಆಗಿ ಆಯ್ಕೆ ಮಾಡಬೇಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ

ಬಿಜೆಪಿ ನೇತೃತ್ವದ ಸರ್ಕಾರ ಸ್ಪೀಕರ್‌ ಹುದ್ದೆಯ ನಿಯಮಾವಳಿಯನ್ನು ಉಲ್ಲಂಘಿಸಿ ರಾಜಕೀಯಕರಣಗೊಳಿಸಿದೆ ಎಂದು ಕಾಂಗ್ರೆಸ್ ನಾಯಕರಾದ ಜೈರಾಮ್‌ ರಮೇಶ್ ಹಾಗೂ ಕೆ ಸಿ ವೇಣುಗೋಪಾಲ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.

ವಿಪಕ್ಷಗಳ ಆರೋಪವನ್ನು ಅಲ್ಲಗಳೆದಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು, ಮಹತಾಬ್‌ ಅವರು ಸತತವಾಗಿ 7 ಬಾರಿ ಆಯ್ಕೆಯಾದ ಕಾರಣ ನಿಯಮಾನುಸಾರ ಅವರನ್ನು ಆಯ್ಕೆ ಮಾಡಲಾಗಿದೆ. ಸುರೇಶ್ ಅವರು 1998 ಹಾಗೂ 2004ರಲ್ಲಿ ಸೋಲು ಅನುಭವಿಸಿದ್ದರು ಎಂದು ತಿಳಿಸಿದ್ದಾರೆ.

ಕೇರಳದ ಸಂಸದ ಕೆ ಸುರೇಶ್‌ ಅವರು ಎರಡು ಬಾರಿ ಸೋತಿದ್ದರೂ ಎರಡು ಕ್ಷೇತ್ರಗಳಿಂದ 8 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...