ಮೇದಕ್ ಗಲಭೆ : ತೆಲಂಗಾಣದ ವಿವಾದಿತ ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ

Date:

ತೆಲಂಗಾಣದ ವಿವಾದಿತ ಬಿಜೆಪಿ ಮುಖಂಡ ಹಾಗೂ ಶಾಸಕ ರಾಜಾಸಿಂಗ್‌ರನ್ನು ತೆಲಂಗಾಣ ಪೊಲೀಸರು ಭಾನುವಾರ ವಶಕ್ಕೆ ಪಡೆದು, ಬಂಧಿಸಿರುವುದಾಗಿ ವರದಿಯಾಗಿದೆ.

ತೆಲಂಗಾಣದ ಗೋಶಮಹಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕನಾಗಿರುವ ರಾಜಾ ಸಿಂಗ್, ವಿವಾದಾತ್ಮಕ ಹಾಗೂ ಮುಸ್ಲಿಂ ದ್ವೇಷ ಭಾಷಣ ಮಾಡುವುದಕ್ಕೆ ಕುಖ್ಯಾತಿ ಪಡೆದಿದ್ದಾರೆ. ಅವರನ್ನು ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇದಕ್‌ ಜಿಲ್ಲೆಯಲ್ಲಿ ಶನಿವಾರ ಸಂಜೆ ಗಲಭೆ ನಡೆದಿತ್ತು. ಹೀಗಾಗಿ, ಅಲ್ಲಿನ ಹಿಂದೂ ಮುಖಂಡರು ಹಾಗೂ ಘಟನೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡುವುದಕ್ಕಾಗಿ ಆಗಮಿಸುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಶಾಸಕ ರಾಜಾಸಿಂಗ್‌ರನ್ನು ಬಂಧಿಸಲಾಗಿದೆ. ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಮಿಯಾಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಒಂಬತ್ತು ಮಂದಿಯ ಬಂಧನ

ಮೇದಕ್‌ನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.

ಬಿಜೆಪಿ ಮೇದಕ್ ಜಿಲ್ಲಾಧ್ಯಕ್ಷ ಗದ್ದಂ ಶ್ರೀನಿವಾಸ್, ಮೇದಕ್ ಟೌನ್ ಅಧ್ಯಕ್ಷ ಎಂ ನಯಮ್ ಪ್ರಸಾದ್ ಮತ್ತು ಕೋಮು ಘರ್ಷಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಬಂಧಿತರು.

ಮೇದಕ್ ಪಟ್ಟಣದ ಮಿನ್‌ಹಾಜುನ್ ಉಲೂಮ್ ಮದ್ರಸದ ಆಡಳಿತ ಸಮಿತಿಯು ಜಾನುವಾರೊಂದನ್ನು ಖರೀದಿಸಿತ್ತು. ಜೂನ್‌ 15ರಂದು ಸಂಜೆ ಅದನ್ನು ಮದ್ರಸದ ಆವರಣದೊಳಗೆ ತಂದ ಬೆನ್ನಲ್ಲೇ, ಅಲ್ಲಿ ಜಮಾಯಿಸಿದ ಸಂಘ ಪರಿವಾರದ ಸಂಘಟನೆಯೊಂದರ ಸದಸ್ಯರು, ಜಾನುವಾರು ಹತ್ಯೆ ಮಾಡಲಾಗುತ್ತಿದೆ ಎಂದು ಪ್ರತಿಭಟನೆ ನಡೆಸಿದ್ದರು. ಪೊಲೀಸರು ಸ್ಥಳಕ್ಕಾಗಮಿಸಿ ಗುಂಪು ಚುದುರಿಸಿದ್ದರು.

ಒಂದು ಗಂಟೆಯ ಬಳಿಕ ಮತ್ತೆ ಸ್ಥಳಕ್ಕೆ ಆಗಮಿಸಿದ್ದ ಗುಂಪು ಮದ್ರಸಾ ಮೇಲೆ ದಾಳಿ ನಡೆಸಿತ್ತು. ಆಸ್ಪತ್ರೆಯ ಮೇಲೂ ಕೂಡ ಕಲ್ಲು ತೂರಾಟ ನಡೆಸಿತ್ತು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಲಾಠಿಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದರು.

ಮದ್ರಸಾ ಮೇಲಿನ ದಾಳಿಯ ನಂತರ, ಗುಂಪು ಘರ್ಷಣೆಯಲ್ಲಿ ಗಾಯಗೊಂಡ ಜನರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಹಿಂದೂ ವಾಹಿನಿ ಮತ್ತು ಬಿಜೆಪಿ ಸದಸ್ಯರು ಮೇದಕ್ ಪೊಲೀಸ್ ಠಾಣೆ ಬಳಿಯ ಆಸ್ಪತ್ರೆಯನ್ನು ಸುತ್ತುವರಿದು ದಾಂಧಲೆ ನಡೆಸಿದ್ದಾರೆ ಎಂದು ಕಾರವಾನ್ ಶಾಸಕ ಕೌಸರ್ ಮೊಹಿಯುದ್ದೀನ್ ಹೇಳಿದ್ದಾರೆ.

ಈ ಸುದ್ದಿ ಪಟ್ಟಣದಾದ್ಯಂತ ಹಬ್ಬಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಶಾಂತಿ ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...