ನ್ಯಾಯಾಲಯದಲ್ಲಿ ಅಕ್ಕಿ ಎಸೆದು ವಿಚಾರಣೆ ಅಡ್ಡಿಪಡಿಸಿದ ಆರೋಪಿ: ಮಾಟಮಂತ್ರ ಶಂಕೆ

Date:

ದೆಹಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ವೇಳೆ ಆರೋಪಿಯೋರ್ವ ನೆಲದ ಮೇಲೆ ಅಕ್ಕಿ ಎಸೆದಿದ್ದು, ವಿಚಾರಣೆಗೆ ಸುಮಾರು 15 ನಿಮಿಷಗಳ ಕಾಲ ಅಡ್ಡಿಪಡಿಸಿದ್ದಾನೆ. ಹಾಗೆಯೇ ಮಾಟಮಂತ್ರ ಶಂಕೆ ವ್ಯಕ್ತವಾಗಿದೆ. ಸುಮಾರು 14 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿ ವೈದ್ಯ ಚಂದರ್ ವಿಭಾಸ್ ನ್ಯಾಯಾಲಯದಲ್ಲಿ ಅಕ್ಕಿ ಎಸೆದಿದ್ದಾನೆ ಎಂದು ಹೇಳಲಾಗಿದೆ. ವಿದ್ಯಾವಂತನಾಗಿಯೂ ಮೌಢ್ಯಾಚರಣೆವನ್ನು ನಂಬಿರುವುದಕ್ಕೆ ಕೋರ್ಟ್ ಟೀಕಿಸಿದೆ.

ಟಿಸ್ ಹಜಾರಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಮೂರ್ತಿ ಶೆಫಾಲಿ ಬರ್ನಾಲಾ ಟಂಡನ್ ಅವರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗ, ನ್ಯಾಯಾಲಯದ ಸಿಬ್ಬಂದಿ ನೆಲದ ಮೇಲೇ ಏನೋ ಬಿದ್ದಿರುವುದು ಗಮನಿಸಿ ನ್ಯಾಯಾಧೀಶರಿಗೆ ತಿಳಿಸಿದ್ದಾರೆ. ನ್ಯಾಯಾಧೀಶರು ಪರಿಶೀಲಿಸಿದಾಗ ಆರೋಪಿ ಡಾ. ಚಂದರ್ ವಿಭಾಸ್ ನಿಂತಿದ್ದ ಸ್ಥಳದ ಕೆಳಗೆ ಅಕ್ಕಿ ಎಸೆದಿರುವುದು ಕಂಡುಬಂದಿದೆ.

ಇದನ್ನು ಓದಿದ್ದೀರಾ? ಮಾಟಮಂತ್ರ ಮಾಡುತ್ತಿದ್ದ ಶಂಕೆ: ಒಂದೇ ಕುಟುಂಬದ ಐವರ ಸಜೀವ ದಹನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಚಾರಣೆ ನಡೆಸಿದಾಗ ಆರೋಪಿಯು ತನ್ನ ಕೈಯಲ್ಲಿ ಸ್ವಲ್ಪ ಅಕ್ಕಿ ಇತ್ತು, ಅದು ಕೆಳಗೆ ಬಿತ್ತು ಎಂದು ಹೇಳಿಕೊಂಡನು. ಆದಾಗ್ಯೂ, ನ್ಯಾಯಾಲಯಕ್ಕೆ ಪ್ರವೇಶಿಸುವಾಗ ಮತ್ತು ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ಆತನ ಕೈಯಲ್ಲಿ ಅಕ್ಕಿ ಯಾಕೆ ಹಿಡಿದಿದ್ದ ಎಂದು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ಆತನಿಗೆ ಸಾಧ್ಯವಾಗಿಲ್ಲ” ಎಂದು ನ್ಯಾಯಮೂರ್ತಿ ಟಂಡನ್ ಹೇಳಿದ್ದಾರೆ.

ಇನ್ನು ಇದಕ್ಕೂ ಹಿಂದೆ ಆಗಸ್ಟ್ 2ರಂದೂ ನ್ಯಾಯಾಲಯದ ನೆಲದ ಮೇಲೆ ಕೆಲವು ಅಕ್ಕಿಯ ಕಾಳುಗಳು ಕಂಡುಬಂದಿವೆ ಎಂದು ನ್ಯಾಯಾಲಯದ ಸಿಬ್ಬಂದಿ ನ್ಯಾಯಾಧೀಶರಿಗೆ ತಿಳಿಸಿದರು. ಇದನ್ನು ನೋಡಿದ ವಕೀಲರು ಮಾಟಮಂತ್ರ ಎಂದು ಶಂಕಿಸಿದ್ದು, ಅಕ್ಕಿಯನ್ನು ಸ್ವಚ್ಛಗೊಳಿಸುವಂತೆ ತಿಳಿಸಿದ್ದಾರೆ. ಇದರಿಂದಾಗಿ 15 ನಿಮಿಷಗಳ ಕಾಲ, ನ್ಯಾಯಾಲಯದ ವಿಚಾರಣೆಯನ್ನು ಸ್ಥಗಿತಗೊಳಿಸಲಾಯಿತು. ನೆಲವನ್ನು ಸ್ವಚ್ಛಗೊಳಿಸಿದ ನಂತರ ವಿಚಾರಣೆ ಮುಂದುವರೆಸಲಾಗಿದೆ.

“ಆರೋಪಿಗಳಿಂದ ಮಾಟಮಂತ್ರ ನಡೆದಿದೆ ಎಂದು ಶಂಕಿಸಲಾಗಿರುವುದರಿಂದ ನ್ಯಾಯಾಲಯದಲ್ಲಿ ಹಾಜರಿದ್ದ ಲೆಫ್ಟಿನೆಂಟ್ ವಕೀಲರ ಕೋರಿಕೆಯ ಮೇರೆಗೆ ಕಸ ಗುಡಿಸುವವರು ಬರುವವರೆಗೆ ನ್ಯಾಯಾಲಯದ ಕಲಾಪಗಳನ್ನು ಸ್ಥಗಿತಗೊಳಿಸಲಾಗಿದೆ. 10 ನಿಮಿಷಗಳ ನಂತರ ಕಸ ಗುಡಿಸುವವರು ಬಂದು ನೆಲವನ್ನು ಸ್ವಚ್ಛಗೊಳಿಸಿದ್ದಾರೆ” ಎಂದು ಟಂಡನ್ ಹೇಳಿದರು.

“ವೃತ್ತಿಯಲ್ಲಿ ಶಸ್ತ್ರಚಿಕಿತ್ಸಕ ಮತ್ತು ವಿದ್ಯಾವಂತರು ಎಂದು ಹೇಳಲಾಗುವ ಪ್ರಸ್ತುತ ಆರೋಪಿ ಡಾ. ಚಂದರ್ ವಿಭಾಸ್ ಅವರು ಅಸಮಂಜಸ ರೀತಿಯಲ್ಲಿ ವರ್ತಿಸಿದ್ದಾರೆ. ನ್ಯಾಯಾಲಯದ ಕಲಾಪಗಳಲ್ಲಿ ಅಡಚಣೆ ಉಂಟುಮಾಡಿದ್ದಾರೆ ಎಂಬುದು ನ್ಯಾಯಾಲಯಕ್ಕೆ ತುಂಬಾ ಆಘಾತಕಾರಿ ಮತ್ತು ಆಶ್ಚರ್ಯಕರವಾಗಿದೆ” ಎಂದು ಕೋರ್ಟ್ ಹೇಳಿದೆ.

ಹಾಗೆಯೇ ಆರೋಪಿಯ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 267 (ನ್ಯಾಯಾಂಗ ಕಲಾಪದಲ್ಲಿ ಕುಳಿತಿರುವ ಸಾರ್ವಜನಿಕ ಸೇವಕನಿಗೆ ಉದ್ದೇಶಪೂರ್ವಕ ಅವಮಾನ ಅಥವಾ ಅಡ್ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಕ್ಷಮೆಯಾಚಿಸಿದ್ದು, ಆರೋಪಿಯನ್ನು ಪ್ರತಿನಿಧಿಸಿದ ವಕೀಲೆ ಸೋನಮ್ ಗುಪ್ತಾ ಆರೋಪಿಯು ಪಶ್ಚಾತ್ತಾಪ ಪಡುತ್ತಿದ್ದು, ಇನ್ನು ಮುಂದೆ ಇಂತಹ ಕೃತ್ಯ ಮಾಡುವುದಿಲ್ಲ. ಯಾರೋ ಅವರ ದಾರಿ ತಪ್ಪಿಸಿದ್ದಾರೆ ಎಂದು ಹೇಳಿದ್ದಾರೆ.

ವಾದ ಆಲಿಸಿದ ಕೋರ್ಟ್ “ಆರೋಪಿಯು ಸಲ್ಲಿಸಿದ ಕ್ಷಮೆಯಾಚನೆ ಮತ್ತು ಅವನ ಪಶ್ಚಾತ್ತಾಪದ ಭಾವನೆ ಸೇರಿದಂತೆ ಎಲ್ಲಾ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿ, ನ್ಯಾಯಾಲಯವು ಬೆಳಿಗ್ಗೆ 8 ಗಂಟೆಯವರೆಗೆ ಜೈಲು ಶಿಕ್ಷೆ ಮತ್ತು 2,000 ರೂ. ದಂಡವನ್ನು ಠೇವಣಿ ಇಡಲು ಶಿಕ್ಷೆ ವಿಧಿಸುತ್ತದೆ” ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...