ED ಕಚೇರಿಗೆ ಬೆಂಕಿ: ಮೆಹುಲ್‌ ಚೋಕ್ಸಿ, ನೀರವ್ ಮೋದಿ ಸೇರಿ ಹಲವು ಭ್ರಷ್ಟರ ದಾಖಲೆಗಳು ಸುಟ್ಟು ಹೋದವೇ?

Date:

ಕಚೇರಿಗೆ ಬೆಂಕಿ ಬಿದ್ದ ನಂತರ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಪಡೆದಿರುವ ನಿಗದಿತ ಸಾಕ್ಷಿಗಳ ವಿಚಾರಣೆಯ ಮೇಲೆ ಪರಿಣಾಮ ಬೀರುವ, ಮೆಹುಲ್ ಚೋಕ್ಸಿ, ನೀರವ್‌ ಮೋದಿ, ಅನಿಲ್ ದೇಶ್‌ಮುಖ್, ಛಗನ್ ಭುಜ್‌ಬಲ್ ಬಚಾವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮುಂಬೈನಲ್ಲಿ ಭಾನುವಾರ(ಏ.27)ರಂದು ಮಧ್ಯರಾತ್ರಿ ದಕ್ಷಿಣ ಮುಂಬೈನಲ್ಲಿರುವ ಇ.ಡಿ ಕಚೇರಿಗೆ ಬೆಂಕಿ ಹೊತ್ತಿಕೊಂಡಿತ್ತು. 10 ಗಂಟೆಗಳಿಗೂ ಹೆಚ್ಚು ಕಾಲ ಬೆಂಕಿ ಉರಿದಿದ್ದು, ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಆದರೆ ಮೆಹುಲ್ ಚೋಕ್ಸಿ, ನೀರವ್‌ ಮೋದಿ, ಅನಿಲ್ ದೇಶ್‌ಮುಖ್, ಛಗನ್ ಭುಜ್‌ಬಲ್ ಅವರ ಹಲವು ಭ್ರಷ್ಟಾಚಾರ ಪ್ರಕರಣಗಳ ದಾಖಲೆಗಳು ಹಾಗೂ ಕಾಗದ ಪತ್ರಗಳು ಸುಟ್ಟುಹೋಗಿದೆ ಎಂದು ಹೇಳಲಾಗುತ್ತಿದೆ.

ಮಾಧ್ಯಮಗಳ ವರದಿಯ ಪ್ರಕಾರ ಯಾವ ಮಟ್ಟದ ಹಾನಿಯುಂಟಾಗಿದೆ ಎಂಬುದನ್ನು ಇ.ಡಿ ದಾಖಲಿಸಲಿದೆ ಎಂದು ಹೇಳಲಾಗುತ್ತಿದೆ. ಈ ಕಚೇರಿಯಲ್ಲಿ ಹಲವು ಭ್ರಷ್ಟಾಚಾರ ಪ್ರಕರಣಗಳ ಭೌತಿಕ ಹಾಗೂ ಡಿಜಿಟಲ್‌ ತನಿಖೆಯ ದಾಖಲೆಗಳನ್ನು ಇಡಲಾಗಿತ್ತು. ತನಿಖೆ ನಡೆಯುತ್ತಿದ್ದ ದಾಖಲೆಗಳು ಸುಟ್ಟುಹೋಗಿರಬಹುದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಮೂಲಗಳ ಪ್ರಕಾರ ಕಂಪ್ಯೂಟರ್‌ಗಳು ಹಾಗೂ ದಾಖಲೆಗಳನ್ನು ಒಳಗೊಂಡ ತನಿಖೆಗೆ ಸಂಬಂಧಪಟ್ಟ ಸ್ವತ್ತುಗಳನ್ನು ಕಚೇರಿಯಲ್ಲಿ ಇಡಲಾಗಿತ್ತು ಎನ್ನಲಾಗಿದೆ.

ಹಾಗೆಯೇ ಬಹುತೇಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿತ್ತು ಎನ್ನಲಾಗುತ್ತಿದೆ. ಜಾರಿ ನಿರ್ದೇಶನಾಲಯವು ಅವುಗಳನ್ನು ಪುನಃ ಮರಳಿಪಡೆಯುವ ಸಾಧ್ಯತೆಯಿದೆ ಎಂದೂ ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಮೂಲಗಳ ಪ್ರಕಾರ ಪ್ರಕರಣಗಳ ತನಿಖೆಯ ದಾಖಲೆಗಳನ್ನು ಇ.ಡಿ ಆರೋಪಪಟ್ಟಿಯ ಮೂಲಕ ಕೋರ್ಟ್‌ಗೆ ಸಲ್ಲಿಸಿದ್ದು, ಅವುಗಳ ಪ್ರತಿಗಳನ್ನು ತನ್ನಲ್ಲಿ ಇಟ್ಟುಕೊಂಡಿತ್ತು. ಆದರೆ ಕಚೇರಿಗೆ ಬೆಂಕಿ ಬಿದ್ದ ನಂತರ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಪಡೆದಿರುವ ನಿಗದಿತ ಸಾಕ್ಷಿಗಳ ವಿಚಾರಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕೈಸರ್‌ ಹಿಂದ್‌ ಪ್ರದೇಶದಲ್ಲಿರುವ ನಾಲ್ಕು ಮಹಡಿಗಳ ಪುರಾತನ ಕಟ್ಟಡದಲ್ಲಿ ಇ.ಡಿ ನಾಲ್ಕನೇ ಹಾಗೂ ಮೊದಲ ಮಹಡಿಯಲ್ಲಿ ಕಚೇರಿ ಹೊಂದಿದೆ. ನಾಲ್ಕನೇ ಮಹಡಿಯಲ್ಲಿರುವ ಹೆಚ್ಚುವರಿ ನಿರ್ದೇಶಕರ ಕಚೇರಿ ಹಾಗೂ ತನಿಖಾ ಘಟಕಗಳಿಗೆ ಬೆಂಕಿ ಬಿದ್ದಿದ್ದು, ಘಟನೆ ನಂತರ ಈ ಮಹಡಿಯನ್ನು ಸದ್ಯಕ್ಕೆ ಮುಚ್ಚಲಾಗಿದೆ. ಅಗ್ನಿಶಾಮಕ ದಳದ ವರದಿಯ ಪ್ರಕಾರ ಕಚೇರಿಗೆ ಮಧ್ಯರಾತ್ರಿ 2.30ರ ಸಮಯದಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಆ ಸಂದರ್ಭದಲ್ಲಿ ಅಡುಗೆ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಮಾತ್ರ ಸ್ಥಳದಲ್ಲಿದ್ದರು. ಯಾರಿಗೂ ಗಾಯಗಳಾಗಿಲ್ಲ.

ಹೆಚ್ಚು ಹೊಗೆ ಆವರಿಸಿದ ಕಾರಣ ಅಗ್ನಿ ಶಾಮಕ ಸಿಬ್ಬಂದಿ ಕೂಡ ಘಟನೆ ನಡೆದ ಪ್ರಮುಖ ಸ್ಥಳಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಹಳೆಯ ಕಟ್ಟಡವಾದ ಕಾರಣ ಕೇವಲ ಒಂದು ಮೆಟ್ಟಿಲು ಪ್ರದೇಶ ಮಾತ್ರ ಇದೆ. ಅಗ್ನಿ ಶಾಮಕ ಸಿಬ್ಬಂದಿ ಪ್ರಕಾರ ದುರಂತದಲ್ಲಿ ಅಪಾರ ಪ್ರಮಾಣದ ಕಾಗದ ಪತ್ರಗಳು, ದಾಖಲೆಗಳು ಪೀಠೋಪಕರಣಗಳು ಬೆಂಕಿಯಲ್ಲಿ ನಾಶವಾಗಿವೆ ಎನ್ನಲಾಗುತ್ತಿದೆ. ಭಾನುವಾರ ಮಧ್ಯಾಹ್ನದ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ತಹಬದಿಗೆ ತರಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...