ಮುಂದಿನ ನಾಲ್ಕು ವಾರಗಳಲ್ಲಿ ಭಾರತದಲ್ಲಿ ಮುಂಗಾರು ದುರ್ಬಲ: ಸ್ಕೈಮೆಟ್‌ ವರದಿ

Date:

  • ಮುಂಗಾರು ದುರ್ಬಲದ ಪರಿಣಾಮ ಜುಲೈ 6ರವರೆಗೆ ಮಳೆಯಲ್ಲಿ ವ್ಯತ್ಯಯ
  • ಜೂನ್ 1ರ ಬದಲಿಗೆ ಜೂನ್ 8ಕ್ಕೆ ಕೇರಳಕ್ಕೆ ಆಗಮಿಸಲಿರುವ ನೈರುತ್ಯ ಮುಂಗಾರು

ಮುಂದಿನ ನಾಲ್ಕು ವಾರಗಳಲ್ಲಿ ಭಾರತದಲ್ಲಿ ಮುಂಗಾರು ದುರ್ಬಲ ಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ವೆದರ್‌ ಹೇಳಿರುವುದಾಗಿ ಮಂಗಳವಾರ (ಜೂನ್ 13) ವರದಿಯಾಗಿದೆ.

ಅನಿಯಮಿತವಾಗಿ ಸುರಿಯುವ ಮಳೆಯಿಂದ ಕೃಷಿ ಮೇಲೆ ಪರಿಣಾಮ ಉಂಟಾಗಬಹುದು ಎಂದು ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

“ಜುಲೈ 6ರವರೆಗೆ ಮುಂದಿನ ನಾಲ್ಕು ವಾರಗಳ ಕಾಲ ನಿರಾಶಾದಾಯಕ ವಾತಾವರಣ ಇರಲಿದೆ ಎಂದು ವಿಸ್ತೃತ ಶ್ರೇಣಿಯ ಮುನ್ಸೂಚನಾ ವ್ಯವಸ್ಥೆ (ಇಆರ್‌ಪಿಎಸ್‌) ಅಂದಾಜು ತೋರುತ್ತಿದೆ. ಕೃಷಿ ಭೂಮಿಯು ಬಿರುಕುಬಿಟ್ಟು ಒಣಗಿಹೋಗುತ್ತಿರುವುದು ಗೋಚರಿಸುತ್ತಿದ್ದು ಬಿತ್ತನೆಯ ನಿರ್ಣಾಯಕ ಮತ್ತು ಕೃಷಿ ಭೂಮಿಯನ್ನು ಸಿದ್ಧಗೊಳಿಸುವ ಸಮಯದಲ್ಲಿ ಮುಂಗಾರು ದುರ್ಬಲ ಸ್ಥಿತಿ ಉಂಟಾಗುವ ಸಾಧ್ಯತೆ ಇದೆ” ಎಂದು ಹವಾಮಾನ ಸಂಸ್ಥೆ ಸೋಮವಾರ (ಜೂನ್ 12) ಪ್ರಕಟಣೆಯೊಂದರಲ್ಲಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಗಾರು ದುರ್ಬಲ ವಲಯಕ್ಕೆ ಬರುವ ಭಾರತದ ಮಧ್ಯ ಹಾಗೂ ಪಶ್ಚಿಮ ಭಾಗಗಳಲ್ಲಿ ಋತುವಿನ ಆರಂಭದಲ್ಲಿ ಅಸಮರ್ಪಕ ಮಳೆಯಿಂದ ಉಂಟಾಗುವ ಒಣ ಭೂಮಿಯನ್ನು ನಿಭಾಯಿಸುವಲ್ಲಿ ಉಂಟಾಗುವ ಸವಾಲುಗಳನ್ನು ಎದುರಿಸಬಹುದು” ಎಂದು ಸ್ಕೈಮೆಟ್ ಸಂಸ್ಥೆ ಹೇಳಿದೆ.

ನೈರುತ್ಯ ಮುಂಗಾರು ನಿಗದಿತ ಜೂನ್ 1ರ ದಿನಾಂಕದ ಬದಲಿಗೆ ಒಂದು ವಾರ ತಡವಾಗಿ ಜೂನ್ 8ಕ್ಕೆ ಕೇರಳ ಪ್ರವೇಶಿಸಲಿದೆ.

ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ಬಿಪೊರ್‌ಜಾಯ್‌ ಚಂಡಮಾರುತ ಮೊದಲು ಕೇರಳಕ್ಕೆ ಮುಂಗಾರು ಪ್ರವೇಶವನ್ನು ವಿಳಂಬಗೊಳಿಸಿತು. ಈಗ ಮಳೆ ಬೀಳುವ ವ್ಯವಸ್ಥೆಗೆ ಅಡ್ಡಿಯಾಗುತ್ತಿದೆ.

ಮುಂಗಾರು ದುರ್ಬಲ ಪರಿಣಾಮ ದ್ವೀಪದ ಆಂತರಿಕ ಪ್ರದೇಶಗಳಿಗೆ ಮಳೆ ಪ್ರವೇಶಕ್ಕೆ ತಡೆ ಉಂಟಾಗಿದೆ ಎಂದು ಹವಾಮಾನ ಸಂಸ್ಥೆ ಹೇಳಿದೆ.

ಜೂನ್ 15ರೊಳಗೆ ಮುಂಗಾರು ಮಳೆಯು ಮಹಾರಾಷ್ಟ್ರ, ಒಡಿಶಾ ಮತ್ತು ತೆಲಂಗಾಣ, ಛತ್ತೀಸ್‌ಘಡ, ಜಾರ್ಖಂಡ್ ಹಾಗೂ ಬಿಹಾರದ ಭಾಗಶಃ ಪ್ರದೇಶಗಳಲ್ಲಿ ಹಾದು ಹೋಗುತ್ತದೆ.

ಆದರೆ ಈ ಬಾರಿ ಮುಂಗಾರು ಈ ಪ್ರದೇಶಗಳಲ್ಲಿ ನೆಲೆಸಲು ಇನ್ನೂ ಹರಸಾಹಸ ಪಡುತ್ತಿದೆ ಎಂದು ಸ್ಕೈಮೆಟ್ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಹರಿಯಾಣ | ಸೂರ್ಯಕಾಂತಿ ಬೆಳೆಗೆ ಎಂಎಸ್‌ಪಿ ನೀಡಲು ಆಗ್ರಹಿಸಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ

ಪ್ರಸ್ತುತ ಮುಂಗಾರು ಈಶಾನ್ಯ ಹಾಗೂ ಪಶ್ಚಿಮ ಕರಾವಳಿಗೆ ಸೀಮಿತವಾಗಿದೆ.

ಹವಾಮಾನ ವ್ಯವಸ್ಥೆಯಲ್ಲಿ ಬದಲಾವಣೆ ಉಂಟಾಗಿದೆ. ಇದರಿಂದ ಮಳೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸಂಸ್ಥೆ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...