ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ: ಕೇಂದ್ರ ಶಿಕ್ಷಣ ಸಚಿವಾಲಯ

Date:

ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದೆ. ನೂತನ ನೀತಿಯ ಅನ್ವಯ ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಪ್ರಕಾರ ಹೊಸ ಪಠ್ಯಕ್ರಮ ಚೌಕಟ್ಟು ಸಿದ್ಧವಾಗಿದೆ ಮತ್ತು 2024ರ ಶೈಕ್ಷಣಿಕ ಅವಧಿಗೆ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ಎನ್‌ಇಪಿಯ ನೂತನ ನೀತಿಯ ಪ್ರಕಾರ 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಎರಡು ಭಾಷೆಗಳನ್ನು ಅಧ್ಯಯನ ಮಾಡಬೇಕು. ಅವುಗಳಲ್ಲಿ ಒಂದು ಭಾರತೀಯ ಭಾಷೆಯಾಗಬೇಕು. ಈ ವಿಧಾನವು ಭಾಷಾ ವೈವಿಧ್ಯತೆ ಮತ್ತು ದೇಶದ ಸಾಂಸ್ಕೃತಿಕತೆಯನ್ನು ಒತ್ತಿಹೇಳುತ್ತದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 6,366 ಕೋಟಿ ರೂ. ನರೇಗಾ ಬಾಕಿ ಉಳಿಸಿಕೊಂಡಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ

ಕಂಠಪಾಠದ ಮೇಲೆ ಅವಲಂಬಿತರಾಗುವುದಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿಗಳ ತಿಳಿವಳಿಕೆ ಮತ್ತು ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲು ಹೊಸ ಚೌಕಟ್ಟು ಪ್ರತಿಪಾದಿಸುತ್ತದೆ. ಈ ವಿದ್ಯಾರ್ಥಿ-ಕೇಂದ್ರಿತ ವಿಧಾನವು ವಿಷಯಗಳ ಆಳವಾದ ಗ್ರಹಿಕೆ ಮತ್ತು ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಕಲಿಯುವವರಿಗೆ ಹೆಚ್ಚಿನ ಆಯ್ಕೆ ನೀಡಲು ಪ್ರಯತ್ನಿಸುತ್ತದೆ ವರದಿಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಕಷ್ಟು ಸಮಯ ಮತ್ತು ಅವಕಾಶವನ್ನು ಖಚಿತಪಡಿಸಿಕೊಳ್ಳಲು ವರ್ಷಕ್ಕೆ ಕನಿಷ್ಠ ಎರಡು ಬಾರಿ ಬೋರ್ಡ್‌ ಪರೀಕ್ಷೆಗಳನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ತಾವು ಆಯ್ದುಕೊಂಡ ವಿಷಯಗಳನ್ನು ಸಂಪೂರ್ಣವಾಗಿ ಸಿದ್ಧರಾದ ನಂತರ ವರ್ಷದಲ್ಲಿ ಇರುವ ಎರಡು ಬೋರ್ಡ್ ಪರೀಕ್ಷೆಗಳಲ್ಲಿ ಯಾವುದಾದರೂ ಒಂದಕ್ಕೆ ಹಾಜರಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಉಳಿಸಿಕೊಳ್ಳಲು ಸಹ ಅನುಮತಿಸಲಾಗುತ್ತದೆ ಎಂದು ಹೇಳಲಾಗಿದೆ.

ಮುಖ್ಯವಾಗಿ, ವಿಷಯಗಳನ್ನು ಆಯ್ಕೆ ಮಾಡುವ ಸೀಮಿತ ಗುರಿಯನ್ನು ವಿಸ್ತರಿಸಲಾಗುತ್ತಿದೆ. ಕಲೆ, ವಿಜ್ಞಾನ ಮತ್ತು ವಾಣಿಜ್ಯಗಳಂತ ಸಾಂಪ್ರದಾಯಿಕ ಪ್ರತ್ಯೇಕತೆಯು ಇನ್ನು ಮುಂದೆ ವಿದ್ಯಾರ್ಥಿಗಳ ಆಯ್ಕೆಗಳನ್ನು ನಿರ್ಬಂಧಿಸುವುದಿಲ್ಲ ಎಂದು ಸಚಿವಾಲಯದ ವರದಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...