ಉತ್ತರಾಖಂಡ | ಹಿಂದೂಯೇತರರು, ರೋಹಿಂಗ್ಯಾ ಮುಸ್ಲಿಮರಿಗೆ ಪ್ರವೇಶ ನಿಷೇಧ; ಗ್ರಾಮಗಳಲ್ಲಿ ಫಲಕ ಅಳವಡಿಕೆ!

Date:

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಹಲವಾರು ಗ್ರಾಮಗಳ ಹೊರಭಾಗದಲ್ಲಿ ಹಿಂದೂಯೇತರರಿಗೆ, ರೋಹಿಂಗ್ಯಾ ಮುಸ್ಲಿಮರಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರವೇಶವನ್ನು ನಿಷೇಧಿಸುವ ಫಲಕಗಳನ್ನು ಹಾಕಲಾಗಿದ್ದು, ಸ್ಥಳೀಯ ಮುಸ್ಲಿಂ ಸಂಘಟನೆಗಳು ತೀವ್ರ ಕಳವಳ ವ್ಯಕ್ತಪಡಿಸಿದೆ. ಸದ್ಯ ಉತ್ತರಾಖಂಡ ರಾಜ್ಯ ಪೊಲೀಸರು ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಭಿನವ್ ಕುಮಾರ್, “ಹಲವು ಗ್ರಾಮಗಳಲ್ಲಿ ಇಂತಹ ಬೋರ್ಡ್‌ಗಳನ್ನು ಅಳವಡಿಸಿರುವುದನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಪೊಲೀಸ್ ಮತ್ತು ಗುಪ್ತಚರ ಘಟಕಗಳಿಗೆ ಆದೇಶ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನು ರುದ್ರಪ್ರಯಾಗದ ಪೊಲೀಸ್ ಅಧಿಕಾರಿ ಪ್ರಬೋಧ್ ಕುಮಾರ್ ಗಿಲ್ಡಿಯಾಲ್, “ಹಲವಾರು ಫಲಕಗಳನ್ನು ತೆಗೆದುಹಾಕಲಾಗಿದೆ. ಯಾರು ಈ ಅಪರಾಧವನ್ನು ಮಾಡಿದ್ದಾರೆ ಎಂದು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ವಿವಿಧ ಗ್ರಾಮ ಪ್ರಧಾನರೊಂದಿಗೆ (ಗ್ರಾಮ ಮುಖ್ಯಸ್ಥರು) ಸಭೆ ನಡೆಸಲಾಗಿದೆ” ಎಂದೂ ತಿಳಿಸಿದ್ದಾರೆ.

ಫಲಕದಲ್ಲಿ ಏನಿದೆ?

“ಹಿಂದೂಯೇತರರು/ ರೋಹಿಂಗ್ಯಾ ಮುಸ್ಲಿಮರು ಮತ್ತು ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವುದು/ಗ್ರಾಮದಲ್ಲಿ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಗ್ರಾಮದಲ್ಲಿ ಎಲ್ಲಿಯಾದರೂ ಕಂಡು ಬಂದರೆ ಶಿಕ್ಷಾರ್ಹ ಕ್ರಮ ಕೈಗೊಳ್ಳಲಾಗುವುದು” ಎಂದು ನ್ಯಾಲ್ಸು ಗ್ರಾಮದ ಹೊರಗೆ ಅಳವಡಿಸಿರುವ ಫಲಕದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಗ್ರಾಮಸಭೆಯಿಂದ ಈ ನಿರ್ದೇಶನ ನೀಡಲಾಗಿದೆ ಎಂದು ಫಲಕದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆ | ಮೋದಿ 173 ಭಾಷಣಗಳ ಪೈಕಿ 110 ‘ಮುಸ್ಲಿಂ ದ್ವೇಷ’ದಿಂದ ಕೂಡಿವೆ

ಶೇರ್ಸಿ, ಗೌರಿಕುಂಡ, ತ್ರಿಯುಗಿನಾರಾಯಣ, ಸೋನ್‌ಪ್ರಯಾಗ, ಬರಸು, ಜಾಮು, ಏರಿಯಾ, ರವಿಗ್ರಾಮ, ಮೈಖಂಡ ಸೇರಿದಂತೆ ಬಹುತೇಕ ಎಲ್ಲಾ ಗ್ರಾಮಗಳಲ್ಲಿ ಇದೇ ರೀತಿಯ ಬೋರ್ಡ್‌ಗಳು ಇದೆ.

“ತಮ್ಮ ಗ್ರಾಮದ ಹೊರಗೆ ಸೂಚನಾ ಫಲಕವನ್ನು ಗ್ರಾಮಸ್ಥರು ಅಳವಡಿಸಿದ್ದಾರೆಯೇ ಹೊರತು ಗ್ರಾಮ ಪಂಚಾಯಿತಿ ಅಳವಡಿಸಿರುವುದಲ್ಲ” ಎಂದು ನ್ಯಾಲ್ಸುವಿನ ಪ್ರಧಾನ್ ಪ್ರಮೋದ್ ಸಿಂಗ್ ಹೇಳಿದ್ದಾರೆ.

ಜೊತೆಗೆ “ಗಂಡಸರು ಬೇರೆಡೆ ಕೆಲಸದಲ್ಲಿರುತ್ತಾರೆ. ಇಲ್ಲಿ ಹೆಂಗಸರು ಮಾತ್ರ ಇರುತ್ತಾರೆ. ಅದಕ್ಕೆ ಆ ರೀತಿ ಫಲಕಗಳನ್ನು ಹಾಕಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ನಡುವೆ ಎರಡು ಮುಸ್ಲಿಂ ನಿಯೋಗಗಳಾದ ಮುಸ್ಲಿಂ ಸೇವಾ ಸಂಘಟನೆ ಮತ್ತು ಎಐಎಂಐಎಂ ಸೆಪ್ಟೆಂಬರ್ 5ರಂದು ಡಿಜಿಪಿ ಕುಮಾರ್ ಅವರನ್ನು ಭೇಟಿಯಾಗಿ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗೆಯೇ ದೇಶದಲ್ಲಿ ಮುಸ್ಲಿಮರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...