ನಕಲಿ ಎನ್‌ಕೌಂಟರ್ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾಗೆ ಬಾಂಬೆ ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆ

Date:

ಚೋಟಾ ರಾಜನ್‌ ಸಹಚರ ರಾಮ್‌ನಾರಾಯಣ್‌ ಗುಪ್ತ ಎಂಬಾತನ ಮೇಲೆ 2006ರಲ್ಲಿ ಮುಂಬೈನಲ್ಲಿ ನಡೆದಿದ್ದ ನಕಲಿ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ಅವರಿಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಮೂರ್ತಿ ರೇವತಿ ಮೋಹಿತೆ ಹಾಗೂ ಗೌರಿ ಗೋಡ್ಸೆ ಅವರಿದ್ದ ಹೈಕೋರ್ಟ್ ಪೀಠ 2013ರಲ್ಲಿ ಖುಲಾಸೆಗೊಳಿಸಿದ ಸಷೆನ್ಸ್‌ ಕೋರ್ಟ್ ತೀರ್ಪನ್ನು ಸಮರ್ಥನೀಯವಲ್ಲ ಎಂದು ರದ್ದುಗೊಳಿಸಿತು.

ವಿಚಾರಣಾ ನ್ಯಾಯಾಲಯ ಶರ್ಮಾ ವಿರುದ್ಧ ಲಭ್ಯವಿದ್ದ ಸಾಕ್ಷ್ಯಾಧಾರವನ್ನು ಕಡೆಗಣಿಸಿದೆ. ಸಾಮಾನ್ಯ ಅಂಶವು ಕೂಡ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತುಪಡಿಸುತ್ತದೆ ಎಂದು ಹೈಕೋರ್ಟ್ ಹೇಳಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಬಂಧಿಸಿದ ಸಷೆನ್ಸ್‌ ನ್ಯಾಯಾಲಯದ ಮುಂದೆ ಮೂರು ವಾರಗಳೊಳಗೆ ಶರಣಾಗಬೇಕೆಂದು ವಿಭಾಗೀಯ ಪೀಠ ಶರ್ಮಾಗೆ ನಿರ್ದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಸೇರಿದಂತೆ 13 ಮಂದಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿಯಿತು. ಹಾಗೆಯೆ ಇತರ ಆರು ಮಂದಿಯ ಜೀವಾವಧಿ ಶಿಕ್ಷೆಯನ್ನು ಖುಲಾಸೆಗೊಳಿಸಿತು. ಹತ್ಯೆಯಲ್ಲಿ 13 ಪೊಲೀಸರು ಸೇರಿದಂತೆ 22 ಮಂದಿ ಭಾಗಿಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ಪ್ರದೀಪ್ ಶರ್ಮಾ ವಿರುದ್ಧ ಸಾಕಷ್ಟು ಸಾಕ್ಯ್ಷಾಧಾರವಿಲ್ಲವೆಂದು 2013ರಲ್ಲಿ ಸೆಷನ್ಸ್‌ ಕೋರ್ಟ್ ಖುಲಾಸೆಗೊಳಿಸಿ, ಇತರ 21 ಮಂದಿ ವಿರುದ್ಧ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇಬ್ಬರು ಆರೋಪಿಗಳು ಕಸ್ಟಡಿಯಲ್ಲೆ ಮೃತಪಟ್ಟಿದ್ದರು.

ಸೆಷನ್ಸ್‌ ಕೋರ್ಟ್ ತೀರ್ಪಿನ ವಿರುದ್ಧ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆರೋಪಿಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅಲ್ಲದೆ ನಕಲಿ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ರಾಮ್‌ ಪ್ರಸಾದ್‌ ಗುಪ್ತ ಸಹೋದರ ಕೂಡ ಪ್ರದೀಪ್‌ ಶರ್ಮಾ ಖುಲಾಸೆಗೊಳಿಸಿರುವುದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

2006ರ ನವೆಂಬರ್‌ 11 ರಂದು ಗುಪ್ತ ಅಲಿಯಾಸ್‌ ಲಕನ್‌ ಬಯ್ಯ ಎಂಬಾತನನ್ನು ಚೋಟಾ ರಾಜನ್‌ ಗ್ಯಾಂಗ್‌ ಸಹಚರ ಎಂಬ ಸಂಶಯದ ಮೇಲೆ ಮುಂಬೈನ ಪ್ರದೇಶವೊಂದರಿಂದ ಕರೆದುಕೊಂಡು ಹೋಗಲಾಗಿತ್ತು. ಸಂಜೆಯ ವೇಳೆಗೆ ಈತನನ್ನು ನಕಲಿ ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...