‘ಬ್ಯಾಡ್ ಟಚ್’ ಮಾಡಿದ ಸೇನಾಧಿಕಾರಿಗೆ ಐದು ವರ್ಷಗಳ ಜೈಲು ಕಾಯಂ

Date:

ಹನ್ನೊಂದು ವರ್ಷದ ಬಾಲೆಯ ಮೇಲೆ ಲೈಂಗಿಕ ಹಲ್ಲೆಗಳನ್ನು ನಡೆಸಿ ಕಿರುಕುಳ ನೀಡಿದ ಮಾಜಿ ಸೇನಾಧಿಕಾರಿಗೆ ‘ಪೋಕ್ಸೋ’ ಕಾಯಿದೆಯಡಿ ವಿಧಿಸಲಾಗಿದ್ದ ಐದು ವರ್ಷಗಳ ಕಾರಾಗೃಹ ಶಿಕ್ಷೆಯನ್ನು ಬಾಂಬೆ ಹೈಕೋರ್ಟು ಎತ್ತಿ ಹಿಡಿದಿದೆ.

ಹಲ್ಲೆ ಮತ್ತು ಕಿರುಕುಳಕ್ಕೆ ಗುರಿಯಾಗಿರುವ ಅಪ್ರಾಪ್ತಳ ಹೇಳಿಕೆ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹುದಾಗಿದೆ. ಕಾರಾಗಾರ ಶಿಕ್ಷೆಯನ್ನು ಪ್ರಶ್ನಿಸಿರುವ ಮೇಲ್ಮನವಿದಾರನ ‘ದುರುಳ ಸ್ಪರ್ಶ’ವನ್ನು (ಬ್ಯಾಡ್ ಟಚ್) ಗುರುತು ಹಿಡಿದಿರುವ ಆಕೆಯ ಸಹಜ ಪ್ರವೃತ್ತಿ ಅಥವಾ ಅಂತರ್ಗತ ಭಾವನೆಯನ್ನು ನಂಬಬಹುದು ಎಂದು ನ್ಯಾಯಮೂರ್ತಿಗಳಾದ ರೇವತಿ ಮೊಹಿತೆ ಡೆರೆ ಮತ್ತು ನೀಲಾ ಗೋಖಲೆ ಅವರನ್ನು ಒಳಗೊಂಡ ನ್ಯಾಯಪೀಠ ಇತ್ತೀಚೆಗೆ ಹೇಳಿದೆ.

‘ಜನರಲ್ ಕೋರ್ಟ್ ಮಾರ್ಶಲ್’ 2021ರಲ್ಲಿ ನೀಡಿದ್ದ ಕನಿಷ್ಠ ಐದು ವರ್ಷಗಳ ಶಿಕ್ಷೆಯನ್ನು ಮುಂಬಯಿಯ ಸಶಸ್ತ್ರ ಸೇನಾ ನ್ಯಾಯಾಧಿಕರಣ (Armed Forces Tribunal) ಎತ್ತಿ ಹಿಡಿದಿತ್ತು. ಆಪಾದಿತನು ಈ  ತೀರ್ಪನ್ನು ಬಾಂಬೆ ಹೈಕೋರ್ಟಿನಲ್ಲಿ ಪ್ರಶ್ನಿಸಿದ್ದ. 2024ರಲ್ಲಿ ಲೆಫ್ಟಿನೆಂಟ್ ಕರ್ನಲ್ ದರ್ಜೆಯ ಈ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2020ರ ಫೆಬ್ರವರಿ ಒಂದರಂದು ಪುಣೆಯಲ್ಲಿ ಪೋಸ್ಟಿಂಗ್ ನಂತರ ಈತ ತನ್ನ ಅಧೀನದಲ್ಲಿರುವ ಹವಾಲ್ದಾರನನ್ನು ತನ್ನ ಇಬ್ಬರು ಮಕ್ಕಳನ್ನು ಕರೆತರುವಂತೆ ಸೂಚಿಸಿದ. ಅವರಿಗೆ ಹಸ್ತಸಾಮುದ್ರಿಕೆಯನ್ನು ಹೇಳಿಕೊಡುವುದಾಗಿ ಹೇಳಿದ್ದ. ತಂದೆ ಮತ್ತು ಮಗನನ್ನು ಪೆನ್ ತರುವಂತೆ ಕಳಿಸಿದ. ಎರಡು ನಿಮಿಷಗಳ ನಂತರ ಹವಾಲ್ದಾರ್ ಹಿಂತಿರುಗಿದಾಗ ಮಗಳು ಅಳುತ್ತಿದ್ದುದು ಕಂಡುಬಂತು.

ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದೂ, ಬಾಲಕಿಯಿಂದ ತಂದೆ-ತಾತನ ಮಮತೆಯ ಭಾವನೆಯಲ್ಲಿ ಕೇವಲ ಒಂದು ಮುತ್ತನ್ನು ಕೇಳಿದ್ದಾಗಿಯೂ ಲೆಫ್ಟಿನೆಂಟ್ ಕರ್ನಲ್ ಹೇಳಿದ್ದ.

ಮೊದಲ ಭೇಟಿಯಲ್ಲೇ ಬಾಲಕಿಯ ಕೈ ಹಿಡಿಯಲು ಕಾರಣವೇ ಇರಲಿಲ್ಲ. ಅನುಚಿತವಾಗಿ ಮುಟ್ಟಿ, ಮುತ್ತು ಕೇಳಿದ್ದೂ ಸರಿಯಲ್ಲ ಎಂದು ಹೈಕೋರ್ಟು ತನ್ನ ತೀರ್ಪಿನಲ್ಲಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...