ವಾಯುಮಾಲಿನ್ಯ ನಿರ್ಲಕ್ಷ್ಯ: ಅಧಿಕಾರಿಗಳ ವೇತನ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ ಬಾಂಬೆ ಹೈಕೋರ್ಟ್‌

Date:

ವಾಯುಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ನೀಡಲಾಗಿದ್ದ ಆದೇಶವನ್ನು ನಿರ್ಲಕ್ಷಿಸಿದ ಮುಂಬೈನ ಅಧಿಕಾರಿಗಳನ್ನು ಬಾಂಬೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ನೀವು ಕೂಡಾ ಇದೇ ಅಶುದ್ಧ ಗಾಳಿಯನ್ನು ಉಸಿರಾಡುತ್ತಿದ್ದೀರಿ, ನೀವು ಅನ್ಯಲೋಕದಲ್ಲಿ (Alien World) ಇರುವುದಲ್ಲ” ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಸುಮನ್ ಶ್ಯಾಮ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು, ನ್ಯಾಯಾಲಯದ ಆದೇಶಗಳನ್ನು ಪಾಲಿಸದಿದ್ದಕ್ಕಾಗಿ ಮತ್ತು ಕ್ಷೀಣಿಸುತ್ತಿರುವ ವಾಯು ಗುಣಮಟ್ಟ ಸೂಚ್ಯಂಕ (AQI) ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳದ ಮುಂಬೈ ಮತ್ತು ನವಿ ಮುಂಬೈ ಎರಡೂ ನಗರ ಆಯುಕ್ತರ ವೇತನವನ್ನು ನಿಲ್ಲಿಸುವುದಾಗಿ ಎಚ್ಚರಿಸಿದೆ.

ಇದನ್ನು ಓದಿದ್ದೀರಾ? ವಾಯುಮಾಲಿನ್ಯ | ದೆಹಲಿಯಲ್ಲ ದೇಶದ ‘ಟಾಪ್‌ 5’ ಅತಿ ಕಲುಷಿತ ನಗರಗಳಿವು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಸಂಬಂಧಿಸಿ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡು ವಾಯುಮಾಲಿನ್ಯವನ್ನು ತಗ್ಗಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸ್ಥಳೀಯ ಸಂಸ್ಥೆಗಳು ಮತ್ತು ಇತರ ಅಧಿಕಾರಿಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿತ್ತು. ಆದರೆ ಆದೇಶ ಪಾಲಿಸದ ಅಧಿಕಾರಿಗಳನ್ನು ಈಗ ತರಾಟೆಗೆ ತೆಗೆದುಕೊಂಡಿದೆ.

ಇನ್ನು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವಕೀಲ ಎಸ್ ಯು ಕಾಮ್ದಾರ್, “ಹಲವು ನಿರ್ಮಾಣ ಸಂಸ್ಥೆಗಳಿಗೆ ಕೆಲಸ ನಿಲ್ಲಸಲು ನೋಟಿಸ್‌ಗಳನ್ನು ನೀಡಲಾಗಿದೆ. ವಾಯು ಗುಣಮಟ್ಟದ ನಿಗಾ ಅಗತ್ಯವಿರುವ 600 ಸ್ಥಳಗಳಲ್ಲಿ, ಸುಮಾರು 400 ಸ್ಥಳಗಳಲ್ಲಿ ಅದಕ್ಕೆ ಬೇಕಾದ ಅಗತ್ಯ ಸಾಧನಗಳನ್ನು ಸ್ಥಾಪಿಸಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಆದರೆ ಈ ಸಮರ್ಥನೆಯನ್ನು ಒಪ್ಪದ ಹೈಕೋರ್ಟ್, “ಈ ಎಲ್ಲಾ ಮಾಲಿನ್ಯ ವಿರೋಧಿ ಕ್ರಮಗಳನ್ನು ನ್ಯಾಯಾಲಯದ ಆದೇಶದ ಬಳಿಕ ತೆಗೆದುಕೊಳ್ಳಲಾಗಿದೆ. ನೀವು ಇಷ್ಟು ವರ್ಷ ಏನು ಮಾಡುತ್ತಿದ್ದೀರಿ? ಪ್ರತಿ ಬಾರಿಯೂ ಪರಿಸ್ಥಿತಿಯನ್ನು ಅವಲೋಕಿಸಲು ನಾವು ಬರಲಾಗದು. ಪುರಸಭೆಯನ್ನು ನಡೆಸುವುದು ನ್ಯಾಯಾಲಯದ ಕೆಲಸವಲ್ಲ” ಎಂದು ಒತ್ತಿ ಹೇಳಿದೆ. ಹಾಗೆಯೇ ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...