ಆಸ್ಟ್ರೇಲಿಯಾ ದಾಳಿಯ ಒಬ್ಬಾತ ಹೈದರಾಬಾದ್‌ ಮೂಲದವ; ತೆಲಂಗಾಣ ಪೊಲೀಸರ ಮಾಹಿತಿ

Date:

ಆಸ್ಟ್ರೇಲಿಯಾದ ಸಿಡ್ನಿಯ ಬಾಂಡಿ ಬೀಚ್‌ನಲ್ಲಿ ಹನುಕ್ಕಾ ಹಬ್ಬದ ಸಂಭ್ರಮಾಚರಣೆಯ ವೇಳೆ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಭಾಗಿಯಾದ ಇಬ್ಬರು ಉಗ್ರರ ಪೈಕಿ, ಪ್ರಮುಖ ಆರೋಪಿ ಹೈದರಾಬಾದ್ ಮೂಲದವನು ಎಂಬ ಆಘಾತಕಾರಿ ಸತ್ಯವನ್ನು ತೆಲಂಗಾಣ ಪೊಲೀಸರು ಮಂಗಳವಾರ ಖಚಿತಪಡಿಸಿದ್ದಾರೆ.

​ಈ ದಾಳಿಯಲ್ಲಿ 15 ಮಂದಿ ಬಲಿಯಾಗಿದ್ದು, ಪ್ರತಿದಾಳಿಯಲ್ಲಿ ಹತ್ಯೆಯಾದ ಸಾಜಿದ್ ಅಕ್ರಮ್ (50) ಹೈದರಾಬಾದ್‌ನ ಮೆಹದೀಪಟ್ಟಣಂ ನಿವಾಸಿ ಎಂದು ಗುರುತಿಸಲಾಗಿದೆ. ಆತನೊಂದಿಗೆ ದಾಳಿಯಲ್ಲಿ ಭಾಗಿಯಾಗಿ ಗಾಯಗೊಂಡಿರುವ ಆತನ ಪುತ್ರ ನವೀದ್ ಅಕ್ರಮ್ (24), ಆಸ್ಟ್ರೇಲಿಯಾದಲ್ಲಿಯೇ ಜನಿಸಿದ ಆಸ್ಟ್ರೇಲಿಯನ್ ಪ್ರಜೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

​ಯಾರು ಈ ಸಾಜಿದ್?
ಸಾಜಿದ್ ಅಕ್ರಮ್ ಹೈದರಾಬಾದ್‌ನಲ್ಲಿ ಬಿ.ಕಾಂ ಪದವಿ ಪೂರೈಸಿದ್ದ. ಬಳಿಕ ಉದ್ಯೋಗ ನಮಿತ್ತ 1998ರ ನವೆಂಬರ್‌ನಲ್ಲಿ ವಿದ್ಯಾರ್ಥಿ ವೀಸಾದಡಿ ಆಸ್ಟ್ರೇಲಿಯಾಕ್ಕೆ ತೆರಳಿದ್ದ. ಅಲ್ಲಿಯೇ ಯುರೋಪಿಯನ್ ಮೂಲದ ಮಹಿಳೆಯನ್ನು ವಿವಾಹವಾಗಿ ಕಾಯಂ ಆಗಿ ನೆಲೆಸಿದ್ದ. ಈತನಿಗೆ ನವೀದ್ ಎಂಬ ಮಗ ಮತ್ತು ಒಬ್ಬ ಮಗಳಿದ್ದಾರೆ. ಸಾಜಿದ್ ಭಾರತೀಯ ಪಾಸ್‌ಪೋರ್ಟ್ ಹೊಂದಿದ್ದರೂ, ಆತನ ಮಕ್ಕಳು ಆಸ್ಟ್ರೇಲಿಯಾದ ಪೌರತ್ವ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಡ್ಯದ ಹೆಣ್ಣು ಭ್ರೂಣ ಹತ್ಯೆ ಮತ್ತು ಹೆಣ್ಣು ಸಿಗದ ಯುವಕರ ಹತಾಶೆ

ಊರಿನ ನಂಟು ಕಡಿದುಕೊಂಡಿದ್ದ
‘ಸಾಜಿದ್ ಕಳೆದ 27 ವರ್ಷಗಳಲ್ಲಿ ಕೇವಲ ಆರು ಬಾರಿ ಮಾತ್ರ ಭಾರತಕ್ಕೆ ಭೇಟಿ ನೀಡಿದ್ದ. ಆಸ್ತಿ ವಿಲೇವಾರಿ ಮತ್ತು ಪೋಷಕರನ್ನು ನೋಡುವ ಸಲುವಾಗಿ ಆತ ಹೈದರಾಬಾದ್‌ಗೆ ಬರುತ್ತಿದ್ದನೇ ಹೊರತು, ಇಲ್ಲಿನ ಸ್ಥಳೀಯರೊಂದಿಗೆ ಅಥವಾ ಸ್ನೇಹಿತರೊಂದಿಗೆ ಹೆಚ್ಚಿನ ಒಡನಾಟ ಹೊಂದಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಥಳೀಯ ಸಂಪರ್ಕ ಇಲ್ಲ
‘ಆರೋಪಿಗಳಿಬ್ಬರ ಉಗ್ರಗಾಮಿ ಮನಸ್ಥಿತಿಗೆ ಹೈದರಾಬಾದ್ ಅಥವಾ ತೆಲಂಗಾಣದ ಯಾವುದೇ ಸ್ಥಳೀಯ ಪ್ರಭಾವ ಕಾರಣವಲ್ಲ. ಸಾಜಿದ್ ಭಾರತ ಬಿಡುವ ಮುನ್ನ ಆತನ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳು ದಾಖಲಾಗಿರಲಿಲ್ಲ. ಕುಟುಂಬಸ್ಥರಿಗೂ ಆತನ ಉಗ್ರ ಚಟುವಟಿಕೆಗಳ ಬಗ್ಗೆ ಮಾಹಿತಿ ಇರಲಿಲ್ಲ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾನುವಾರ ಸಿಡ್ನಿಯ ಬಾಂಡಿ ಬೀಚ್‌ನಲ್ಲಿ ಯಹೂದಿಗಳ ‘ಹನುಕ್ಕಾ’ ಹಬ್ಬದ ಆಚರಣೆ ನಡೆಯುತ್ತಿದ್ದ ವೇಳೆ ನುಗ್ಗಿದ ತಂದೆ–ಮಗ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...