ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ಎರಡೂ ಎಂಜಿನ್‌ಗಳು ಸ್ಥಗಿತ: ಏರ್‌ ಇಂಡಿಯಾ ದುರಂತದ ತನಿಖಾ ವರದಿ

Date:

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಬಿಡುಗಡೆಯಾಗಿದ್ದು, ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ.

ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾದ ಬೋಯಿಂಗ್ ಡ್ರೀಮ್‌ಲೈನರ್ 787-8 ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ 242 ರಲ್ಲಿ 241 ಜನರು ಸೇರಿದಂತೆ ಕನಿಷ್ಠ 270 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯ ತನಿಖಾ ವರದಿ ಬಿಡುಗಡೆಗೊಂಡಿದೆ.

ಇದನ್ನು ಓದಿದ್ದೀರಾ? ಬೋಯಿಂಗ್ 787 ವಿಮಾನಗಳ ತಾಂತ್ರಿಕ ದೋಷಗಳ ಬಗ್ಗೆ ಎಚ್ಚರಿಸಿದ್ದ ಎಂಜಿನಿಯರ್ ನಿಗೂಢ ಸಾವು; ಮತ್ತೆ ಮುನ್ನೆಲೆಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ(ಜುಲೈ 12) ಬೆಳಗಿನ ಜಾವ 1 ಗಂಟೆಯ ನಂತರ ವರದಿ ಬಿಡುಗಡೆಯಾಗಿದೆ. ಹಲವು ಆಘಾತಕಾರಿ ಮಾಹಿತಿಗಳು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಬಹಿರಂಗವಾಗಿದೆ.

ಟೇಕ್-ಆಫ್ ಆದಾಗಲೇ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿದ್ದು ಇಂಧನ ಪೂರೈಕೆಯೂ ನಿಂತಿದೆ. ಕಾಕ್‌ಪಿಟ್ ಧ್ವನಿ ರೆಕಾರ್ಡಿಂಗ್‌ನಲ್ಲಿ ಒಬ್ಬ ಪೈಲಟ್ “ನೀವು ಏಕೆ ಕಟ್‌ಆಫ್ ಮಾಡಿದ್ದೀರಿ” ಎಂದು ಪ್ರಶ್ನಿಸಿರುವುದು, ಇನ್ನೊಬ್ಬ ಪೈಲಟ್ “ನಾನು ಮಾಡಲಿಲ್ಲ” ಎಂದು ಉತ್ತರಿಸಿರುವುದು ಕೇಳಿಬಂದಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಮಾನದಲ್ಲಿ ಸಂಪೂರ್ಣ ಶಕ್ತಿ ಮತ್ತು ಒತ್ತಡದ ಕೊರತೆ ಕಂಡುಬಂದಿದೆ ಎನ್ನಲಾಗಿದೆ.

“ವಿಮಾನ ನಿಲ್ದಾಣದಿಂದ ಪಡೆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ವಿಮಾನ ಟೇಕ್ ಆಫ್ ಆಗುವ ಸಮಯದಲ್ಲಿ ರಾಮ್ ಏರ್ ಟರ್ಬೈನ್ (RAT) ಅನ್ನು ನಿಯೋಜಿಸಲಾಗುತ್ತಿರುವುದನ್ನು ತೋರಿಸಿದೆ. ವಿಮಾನ ಹಾರಾಟ ಮಾರ್ಗದಲ್ಲಿ ಯಾವುದೇ ಪಕ್ಷಿಗಳು ಹಾರಾಡುವುದು ಕಂಡುಬಂದಿಲ್ಲ. ವಿಮಾನ ನಿಲ್ದಾಣದ ಪರಿಧಿಯ ಗೋಡೆಯನ್ನು ದಾಟುವ ಮೊದಲು ಮತ್ತೆ ಕೆಳಕ್ಕಿಳಿಯಲು ಪ್ರಾರಂಭಿಸಿದೆ” ಎಂದು ವರದಿ ಹೇಳಿದೆ.

ಎರಡೂ ಎಂಜಿನ್‌ಗಳು ಅಥವಾ ವಿದ್ಯುತ್ ಸರಬರಾಜು ನಿಂತಾಗ ರಾಮ್ ಏರ್ ಟರ್ಬೈನ್ ಸ್ವಯಂಚಾಲಿತವಾಗಿ ಸಕ್ರಿಯಗೊಳ್ಳುತ್ತದೆ. ಇದು ವಿಮಾನ ಎತ್ತರದಲ್ಲೇ ಇರಲು ಸಹಾಯ ಮಾಡುತ್ತದೆ. ವಿದ್ಯುತ್ ಉತ್ಪಾದಿಸಲು ಗಾಳಿಯ ವೇಗವನ್ನು ಬಳಸುತ್ತದೆ.

ವಿಮಾನವು ಕೇವಲ 32 ಸೆಕೆಂಡುಗಳ ಕಾಲ ಮಾತ್ರ ಗಾಳಿಯಲ್ಲಿ ಹಾರಿದ್ದು ವಿಮಾನ ನಿಲ್ದಾಣದ ಸಮೀಪವಿರುವ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್‌ಗೆ ಅಪ್ಪಳಿಸಿದ್ದು ಕೇವಲ 0.9 ನಾಟಿಕಲ್ ಮೈಲುಗಳಷ್ಟು ಹಾರಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...