BREAKING NEWS | ಸಂಚಾರ್ ಸಾಥಿ ಆ್ಯಪ್ ಕಡ್ಡಾಯ ಅಳವಡಿಕೆ: ಕೇಂದ್ರದ ಆದೇಶ ರದ್ದು

Date:

ಮೊಬೈಲ್ ತಯಾರಕರು ಫೋನ್‌ಗಳಲ್ಲಿ ಸಂಚಾರ್ ಸಾಥಿ ಆ್ಯಪ್ ಅನ್ನು ಕಡ್ಡಾಯವಾಗಿ ಪೂರ್ವಾನ್ವಯಿತಗೊಳಿಸಬೇಕು ಎಂಬ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ ಹಿಂಪಡೆದಿದೆ. ಗೌಪ್ಯತೆ ಆತಂಕ ಮತ್ತು ವ್ಯಾಪಕ ಟೀಕೆಗಳ ನಂತರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಲೋಕಸಭೆಯಲ್ಲಿ ಬುಧವಾರ ನಡೆದ ಚರ್ಚೆಯಲ್ಲಿ ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಜನರ ಸಲಹೆ-ಅಭಿಪ್ರಾಯಗಳ ಆಧಾರದ ಮೇಲೆ ಸಂಚಾರ್ ಸಾಥಿ ವೇದಿಕೆಯ ನಿಯಮಗಳನ್ನು ತಿದ್ದುಪಡಿ ಮಾಡಲು ಸರ್ಕಾರ ಸಿದ್ಧವಿದೆ ಎಂದು ಸಂಸತ್ತಿಗೆ ತಿಳಿಸಿದರು.

“ಸಂಚಾರ್ ಸಾಥಿ ಆ್ಯಪ್ ಮೂಲಕ ಗೂಢಚಾರಿಕೆ ಸಾಧ್ಯವೇ ಇಲ್ಲ, ಇನ್ನು ಮುಂದೆಯೂ ಎಂದಿಗೂ ಸಾಧ್ಯವಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ ಸಚಿವರು, ಈ ಆ್ಯಪ್ ಬಳಕೆದಾರರ ನೋಂದಣಿ ಇಲ್ಲದೆ ಕೆಲಸ ಮಾಡುವುದಿಲ್ಲ ಹಾಗೂ ಪ್ರತಿಯೊಬ್ಬ ಪ್ರಜೆಗೂ ಅದನ್ನು ಬಳಸಬೇಕೆ ಅಥವಾ ಯಾವಾಗ ಬೇಕಾದರೂ ಅಳಿಸಿಹಾಕಬೇಕೆ ಎಂಬ ಪೂರ್ಣ ಆಯ್ಕೆಯಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವರ್ತಮಾನದ ತಲ್ಲಣಗಳಿಗೆ ನಾರಾಯಣ ಗುರು – ಗಾಂಧಿಯೇ ಉತ್ತರ

ಸಂಚಾರ್ ಸಾಥಿ ಯೋಜನೆಯ ಏಕೈಕ ಉದ್ದೇಶ ದೇಶದ ಪ್ರತಿಯೊಬ್ಬ ಮೊಬೈಲ್ ಬಳಕೆದಾರನನ್ನು ರಕ್ಷಿಸುವುದು ಎಂದು ಒತ್ತಿ ಹೇಳಿದ ಸಿಂಧಿಯಾ ಅವರು, ಪ್ರಜಾಪ್ರಭುತ್ವದಲ್ಲಿ ಅಂತಿಮ ಅಧಿಕಾರ ಪ್ರಜೆಗಳಲ್ಲಿಯೇ ಇದೆ, ಜನರ ಸಲಹೆ-ಅಭಿಪ್ರಾಯಗಳಿಗೆ ಅನುಗುಣವಾಗಿ ನಿಯಮಗಳನ್ನು ತಿದ್ದುಪಡಿ ಮಾಡಲು ಸರ್ಕಾರ ಯಾವಾಗಲೂ ಸಿದ್ಧ ಎಂದು ತಿಳಿಸಿದರು.

ಕಳವಾದ ಫೋನ್ ಪತ್ತೆ ಮಾಡುವುದು ಮತ್ತು ದೂರಸಂಪರ್ಕ ವಂಚನೆ ತಡೆಯುವುದು ಎಂಬ ಸೈಬರ್ ಸುರಕ್ಷತಾ ಸಾಧನವಾಗಿ ಸರ್ಕಾರ ಪರಿಚಯಿಸಿದ್ದ ಈ ಆ್ಯಪ್ ಕುರಿತು ಗೌಪ್ಯತೆ, ದತ್ತಾಂಶ ದುರುಪಯೋಗದ ಆತಂಕ ಹಾಗೂ ಇಂತಹ ಕಡ್ಡಾಯ ಆದೇಶದ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ವಿಪಕ್ಷಗಳು ಆತಂಕ ವ್ಯಕ್ತಪಡಿಸಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...