ಬಿಹಾರ | ನಿರ್ಮಾಣ ಹಂತದ ಸೇತುವೆ ಕುಸಿತ ; ತಿಂಗಳಲ್ಲೇ ಎರಡನೇ ಘಟನೆ

Date:

  • ಬಿಹಾರ ಕಿಶನ್‌ಗಂಜ್‌ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ
  • ಜೂನ್‌ 4ಕ್ಕೆ ಖಗಾರಿಯಾ ಜಿಲ್ಲೆಯಲ್ಲಿ ಕುಸಿದಿದ್ದ ನಿರ್ಮಾಣ ಹಂತದ ಸೇತುವೆ

ಬಿಹಾರ ರಾಜ್ಯದ ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಶನಿವಾರ (ಜೂನ್‌ 24) ನಿರ್ಮಾಣ ಹಂತದ ಸೇತುವೆಯೊಂದರ ಭಾಗ ಕುಸಿದು ಬಿದ್ದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ ಕುಸಿದು ಬಿದ್ದು ಮೂರು ವಾರಗಳ ಬಳಿಕ ಇದೀಗ ಮತ್ತೊಂದು ಸೇತುವೆ ಕುಸಿದಿದೆ.

“ರಾಜಧಾನಿ ಪಾಟ್ನಾ ಜಿಲ್ಲೆಯಿಂದ 400 ಕಿ.ಮೀ ದೂರದಲ್ಲಿರುವ ಕಿಶನ್ಗಂಜ್ ಜಿಲ್ಲೆಯ ಮೆಚ್ಚಿ ನದಿಯ ಮೇಲಿನ ಸೇತುವೆಯ ಕಂಬ ಕುಸಿದಿದೆ. ಎನ್‌ಎಚ್—27ಇ ರಾಷ್ಟ್ರೀಯ ಹೆದ್ದಾರಿಯಲ್ಲಿನ ನಿರ್ಮಾಣ ಹಂತದಲ್ಲಿರುವ ಈ ಸೇತುವೆ ಅಸ್ಸಾಂ ರಾಜ್ಯದ ಕಿಶನ್ಗಂಜ್ ಮತ್ತು ಕತಿಹಾರ್ ಜಿಲ್ಲೆಗಳನ್ನು ಸಂಪರ್ಕಿಸುತ್ತಿತ್ತು” ಎಂದು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಕಾರಣ ಪತ್ತೆಗೆ ತಜ್ಞರಿರುವ ಐದು ಸದಸ್ಯರ ತಂಡವನ್ನು ರಚಿಸಲಾಗಿದೆ. ಸೇತುವೆ ನಿರ್ಮಾಣದಲ್ಲಿ ದೋಷವಿದ್ದಂತೆ ಮೇಲ್ನೋಟಕ್ಕೆ ಕಾಣುತ್ತದೆ ಎಂದು ಅರವಿಂದ್ ಕುಮಾರ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರಪ್ರದೇಶ | ಪೊಲೀಸ್ ಬಂಧನದಲ್ಲಿದ್ದ ಇಬ್ಬರು ದಲಿತರ ಸಾವು; ಕಸ್ಟಡಿ ಕೊಲೆ ಆರೋಪ

ಬಿಹಾರ ರಾಜ್ಯದಲ್ಲಿ ಪೂರ್ಣಗೊಂಡಿರುವ ಮತ್ತು ನಿರ್ಮಾಣ ಹಂತದಲ್ಲಿರುವ ಎಲ್ಲ ಸೇತುವೆಗಳ ರಚನೆ ಕುರಿತು ಪರಿಶೀಲನೆ ನಡೆಸುವುದು ಅಗತ್ಯವಿದೆ ಎಂದು ಬಿಹಾರ ಎಂಜಿನಿಯರ್ ಅಸೋಸಿಯೇಷನ್ ತಿಳಿಸಿದೆ.

ಜೂನ್ 4 ರಂದು ಖಗಾರಿಯಾ ಜಿಲ್ಲೆಯಲ್ಲಿ ಗಂಗಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ನಾಲ್ಕು ಪಥದ ಬೃಹತ್ ಸೇತುವೆ ಕುಸಿದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...