ಆಘಾತಕಾರಿ ಘಟನೆ | ಒಂದು ಕೋಟಿ ರೂ. ಇನ್ಶುರೆನ್ಸ್‌ ಹಣಕ್ಕಾಗಿ ತಂಗಿಯನ್ನೇ ಕೊಂದ ಅಣ್ಣ

Date:

ಯುವತಿಯ ಹೆಸರಿನಲ್ಲಿ ಮಾಡಿಸಲಾಗಿದ್ದ ಇನ್ಶುರೆನ್ಸ್‌ನಿಂದ ಹಣ ಪಡೆಯುವುದಕ್ಕಾಗಿ ಯುವಕನೊಬ್ಬ ಆಕೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ಆಂದ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಮಾಲಪತಿ ಅಶೋಕ್ ಕುಮಾರ್ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ರಿಯಲ್ ಎಸ್ಟೇಟ್‌ ಉದ್ಯಮಿ ಎಂದು ಹೇಳಲಾಗಿದೆ.

ಆರೋಪಿ ಅಶೋಕ್ ರೆಡ್ಡಿಯ ತಂಗಿ ಹೆಸರಿನಲ್ಲಿ 1 ಕೋಟಿ ರೂ. ಮೌಲ್ಯದ ವಿಮೆ ಮಾಡಿಸಲಾಗಿತ್ತು. ಆ ವಿಮೆ ಹಣವನ್ನು ಪಡೆಯುವುದಕ್ಕಾಗಿ ತಂಗಿಯನ್ನೇ ಅಶೋಕ್‌ ರೆಡ್ಡಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಶೋಕ್ ರೆಡ್ಡಿಯ ತಂಗಿಗೆ ವಿವಾಹವಾಗಿದ್ದು, ಗಂಡನಿಂದ ದೂರು ಉಳಿದಿದ್ದರು. ವಿಚ್ಛೇದನ ಪಡೆದಿದ್ದರು. ಮಕ್ಕಳೂ ಇಲ್ಲದ ಕಾರಣ ಏಕಾಂಗಿ ಜೀವನ ನಡೆಸುತ್ತಿದ್ದರು. ಅವರ ಜೀವನ ನಿರ್ವಹಣೆಗೆ ಅಶೋಕ್ ರೆಡ್ಡಿ ಸಹಾಯ ಮಾಡಿದ್ದ ಎಂದು ಹೇಳಲಾಗಿದೆ.

ಸಾಲಬಾಧೆಗೆ ಸಿಲುಕಿದ್ದ ಅಶೋಕ್ ರೆಡ್ಡಿ, ತನ್ನ ತಂಗಿಯನ್ನು ಕೊಂದು ವಿಮೆ ಹಣವನ್ನು ಪಡೆಯಲು ಸಂಚು ರೂಪಿಸಿದ್ದನು. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪವೊಡ್ಡಿ ತನ್ನ ಕಾರಿನಲ್ಲಿ ಕೊರೆದೊಯ್ದಿದ್ದಾನೆ. ಆಸ್ಪತ್ರೆಯಲ್ಲಿ ತಪಾಸಣೆ ಮುಗಿಸಿ, ಹಿಂದಿರುಗುವಾಗ ಆಕೆಗೆ ನಿದ್ರೆ ಮಾತ್ರೆಗಳನ್ನು ಕೊಟ್ಟು, ಹತ್ಯೆಗೈದಿದ್ದಾರೆ. ಪ್ರಕರಣವನ್ನು ಅಪಘಾತವೆಂದು ಬಿಂಬಿಸಲು ಕೂಡ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಪ್ರಕರಣದ ಸತ್ಯಾಸತ್ಯೆತೆಯನ್ನು ಬೇಧಿಸಿದ್ದಾರೆ. ಆಶೋಕ್ ರೆಡ್ಡಿಯೇ ಆಕೆಯನ್ನು ಕೊಲೆ ಮಾಡಿದ್ಧಾನೆ ಎಂದು ಕಂಡುಹಿಡಿದಿದ್ದಾರೆ. ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 120 (ಬಿ), 302, ಮತ್ತು 201 ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...