ದಲಿತ ವಿದ್ಯಾರ್ಥಿಗಳ ಮೇಲೆ ಭೀಕರ ಹಲ್ಲೆ; ಶಿಕ್ಷಕಿ ಅಮಾನತು

Date:

ದಲಿತ ವಿದ್ಯಾರ್ಥಿಗಳ ಮೇಲೆ ಭೀಕರ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಕುರವಾಲಿ ಡೆವಲಪ್‌ಮೆಂಟ್ ಬ್ಲಾಕ್‌ನ ರೀಚ್‌ಪುರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

ಸುಮಾರು 10 ದಿನಗಳ ಹಿಂದೆ ಈ ಘಟನೆ ನಡೆದಿದ್ದರೂ ಗುರುವಾರವಷ್ಟೇ ಪ್ರಕರಣ ಬೆಳಕಿಗೆ ಬಂದಿತ್ತು. ಮಕ್ಕಳ ಮೈಮೇಲೆ ಗಾಯಗಳಿರುವುದನ್ನು ಗಮನಿಸಿದ ಪೋಷಕರು ಆತಂಕಗೊಂಡು ವಿಚಾರಿಸಿದಾಗ ನಿರಂತರವಾಗಿ ಹಲ್ಲೆ ನಡೆಸುತ್ತಿರುವುದು ತಿಳಿದುಬಂದಿದೆ.

ಮಕ್ಕಳ ಮೈಮೇಲೆ ಗಾಯಗಳಿರುವ ವಿಡಿಯೊವೊಂದು ಕಳೆದ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. “1 ರಿಂದ 8ನೇ ತರಗತಿಯ ಮಕ್ಕಳಿಗೆ ಪಾಠ ಮಾಡುವ, 40 ವರ್ಷ ವಯಸ್ಸಿನ ಅನಿತಾ ಗುಪ್ತಾ ಅವರು ಕ್ಷುಲ್ಲಕ ವಿಷಯಗಳ ಕಾರಣಕ್ಕೆ ಯಾವಾಗಲೂ ನಮ್ಮ ಮಕ್ಕಳನ್ನು ಹೊಡೆಯುತ್ತಾರೆ. ಈ ರೀತಿಯ ವರ್ತನೆ ಪುನರಾವರ್ತನೆಯಾಗುತ್ತಲೇ ಇದೆ” ಎಂದು ಪೋಷಕರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮೇಡಂ ನಮ್ಮ ಮೇಲೆ ತುಂಬಾ ಕೋಪ ಮಾಡಿಕೊಳ್ಳುತ್ತಾರೆ’ ಎಂದು ದಲಿತ ವಿದ್ಯಾರ್ಥಿಯೊಬ್ಬ ತಿಳಿಸಿದ್ದಾನೆ. ‘ಜಾತಿಯ ಕಾರಣಕ್ಕಾಗಿಯೇ ಆರು-ಏಳು ದಲಿತ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಶಿಕ್ಷಕಿ ಅನಿತಾ ಗುಪ್ತಾ ಥಳಿಸುತ್ತಿದ್ದಳು’ ಎಂಬ ಆರೋಪ ಬಂದಿದೆ.

ಇದನ್ನೂ ಓದಿರಿ: ನೆಲಮಂಗಲ | ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿ, 6 ಮಂದಿ ದಾರುಣ ಸಾವು

ತರಗತಿ ವೇಳೆ ದಲಿತ ವಿದ್ಯಾರ್ಥಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದು, ತಾರತಮ್ಯ ಮಾಡುವುದು ಈ ಶಿಕ್ಷಕಿಯ ಛಾಳಿಯಾಗಿದೆ ಎಂಬುದು ಪತ್ರಿಕಾ ವರದಿಗಳಿಂದ ಹೊರಬಿದ್ದಿದೆ. ‘ನಮ್ಮ ಮಕ್ಕಳನ್ನು ಅಸ್ಪೃಶ್ಯರೆಂದು ಪರಿಗಣಿಸಿ ಆಕೆ ಥಳಿಸುತ್ತಾಳೆ’ ಎಂದು ಒಬ್ಬ ವಿದ್ಯಾರ್ಥಿಯ ತಂದೆ ಅಮರ್ ಸಿಂಗ್ ನೋವು ತೊಡಿಕೊಂಡಿದ್ದಾರೆ.

ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ತನಿಖೆ ಆರಂಭಿಸಿದೆ. ವಿದ್ಯಾರ್ಥಿಗಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ‘ಜಾತಿವಾದಿ ನಿಂದನೆಗಳನ್ನು ಸಮರ್ಥಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ’ ಎಂದೂ ಅಧಿಕಾರಿಗಳು ಹೇಳಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...