ಬಿಹಾರ | ಹೆಸರು ಕೇಳಿದ ನಂತರ ಮುಸ್ಲಿಂ ವ್ಯಾಪಾರಿಯನ್ನು ಚಿತ್ರಹಿಂಸೆ ಮಾಡಿ ಕೊಲೆಗೈದ ಗುಂಪು

Date:

ಗುಂಪೊಂದು ಅಡ್ಡಗಟ್ಟಿ ಹೆಸರು ಮತ್ತು ಧರ್ಮವನ್ನು ಕೇಳಿದ ನಂತರ ನಡೆದ ಭೀಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮುಸ್ಲಿಂ ಸಮುದಾಯದ ಬಟ್ಟೆ ವ್ಯಾಪಾರಿಯೊಬ್ಬರು ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿರುವ ಘಟನೆ ಬಿಹಾರದ ನವಾಡ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಗಗನ್ ದಿವಾನ್ ಗ್ರಾಮದ ನಿವಾಸಿ ಮೊಹಮ್ಮದ್ ಅತರ್ ಹುಸೇನ್ ಎಂದು ಗುರುತಿಸಲಾಗಿದೆ. ಇವರು ಸೈಕಲ್ ಮೇಲೆ ಊರೂರು ತಿರುಗಿ ಬಟ್ಟೆ ವ್ಯಾಪಾರ ಮಾಡುತ್ತಿದ್ದರು.

ಡಿಸೆಂಬರ್ 5ರಂದು ರೋಹ್ ಪೊಲೀಸ್ ಠಾಣಾ ವ್ಯಾಪ್ತಿಯ ಭಟ್ಟಾಪುರ ಗ್ರಾಮದ ಬಳಿ ಹುಸೇನ್ ಅವರ ಸೈಕಲ್ ಪಂಕ್ಚರ್ ಆಗಿತ್ತು. ಅವರು ರಿಪೇರಿ ಅಂಗಡಿಯನ್ನು ಹುಡುಕುತ್ತಿದ್ದಾಗ, ಗ್ರಾಮಸ್ಥರ ಗುಂಪೊಂದು ಅವರನ್ನು ತಡೆದಿದೆ. ಹುಸೇನ್ ಅವರ ಸಹೋದರ ಮೊಹಮ್ಮದ್ ಶಕಿಬ್ ಆಲಂ ಅವರು ಮಾಧ್ಯಮಗಳಿಗೆ ನೀಡಿದ ಮಾಹಿತಿಯ ಪ್ರಕಾರ, ದುಷ್ಕರ್ಮಿಗಳು ಮೊದಲು ಹುಸೇನ್ ಅವರ ಹೆಸರು ಮತ್ತು ಉದ್ಯೋಗವನ್ನು ಕೇಳಿದ್ದಾರೆ. ನಂತರ ಸುಮಾರು 15 ರಿಂದ 20 ಜನರಿದ್ದ ಗುಂಪು ಅವರ ಮೇಲೆ ಮುಗಿಬಿದ್ದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸ್ತಿ ಅಖಾಡಕ್ಕೆ ಮರಳುವ ವಿನೇಶ್‌ ಫೋಗಟ್‌ ನಿರ್ಧಾರಕ್ಕೆ ಸ್ವಾಗತ!

ದಾಳಿಕೋರರು ಹುಸೇನ್ ಅವರ ಕಿವಿಯನ್ನು ಸೀಳಿದ್ದಲ್ಲದೆ, ಕಾದ ಕಬ್ಬಣಿದ ಸಲಾಕೆಯಿಂದ ಬರೆ ಎಳೆದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರದ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಹುಸೇನ್, “ತನ್ನನ್ನು ಬೆತ್ತಲೆಗೊಳಿಸಿ ಪರಿಶೀಲಿಸಲಾಯಿತು ಮತ್ತು ಬಳಿಯಿದ್ದ 18,000 ರೂ. ಹಣವನ್ನು ದೋಚಲಾಯಿತು” ಎಂದು ಹೇಳಿಕೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪಾವಾಪುರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಶುಕ್ರವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.

ಹುಸೇನ್ ಪತ್ನಿ ಶಬ್ನಮ್ ಪರ್ವೀನ್ ನೀಡಿದ ದೂರಿನನ್ವಯ 10 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರಂಭದಲ್ಲಿ ಗಲಭೆ ಮತ್ತು ಹಲ್ಲೆಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇದೀಗ ಕೊಲೆ ಪ್ರಕರಣವನ್ನಾಗಿ ಬದಲಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ಈಗಾಗಲೇ ಆರು ಜನರನ್ನು ಬಂಧಿಸಿ, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ನವಾಡ ಎಸ್ಪಿ ಅಭಿನವ್ ಧಿಮಾನ್ ತಿಳಿಸಿದ್ದಾರೆ.

ಮತ್ತೊಂದೆಡೆ, ಆರೋಪಿಗಳಲ್ಲಿ ಒಬ್ಬರಾದ ಸಿಕಂದರ್ ಯಾದವ್ ಎಂಬುವರು, “ಹುಸೇನ್ ಕಳ್ಳತನಕ್ಕೆ ಯತ್ನಿಸಿದ್ದರು,” ಎಂದು ಆರೋಪಿಸಿ ಪ್ರತಿದೂರು ನೀಡಿದ್ದಾರೆ. ಪೊಲೀಸರು ಎರಡೂ ದೂರುಗಳ ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...