ಉತ್ತರಾಖಂಡದ ಸುರಂಗ ಕಾರ್ಮಿಕರನ್ನು ರಕ್ಷಿಸಿದ್ದ ವಕೀಲ್ ಹಸನ್ ಮನೆ ಧ್ವಂಸಗೊಳಿಸಿದ ದೆಹಲಿ ಅಭಿವೃದ್ಧಿ ಪ್ರಾಧಿಕಾರ!

Date:

ಉತ್ತರಾಖಂಡದ ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವ ಉಳಿಸಿದ್ದ ‘ಇಲಿ ಬಿಲ ಗಣಿಗಾರಿಕೆ’ (ರ‌್ಯಾಟ್ ಹೋಲ್‌ ಮೈನಿಂಗ್‌) ತಂತ್ರಗಾರಿಕೆ ಮೂಲಕ ರಂಧ್ರ ಕೊರೆಯುವ ಗುಂಪಿನ ನೇತೃತ್ವ ವಹಿಸಿದ್ದ ವಕೀಲ್ ಹಸನ್ ಅವರ ಮನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಬುಲ್ಡೋಝರ್ ಮೂಲಕ ಧ್ವಂಸಗೊಳಿಸಿರುವುದಾಗಿ ವರದಿಯಾಗಿದೆ.

ಅಕ್ರಮ ಒತ್ತುವರಿಯ ನೆಪವೊಡ್ಡಿ ಫೆಬ್ರವರಿ 28ರ ಬುಧವಾರದಂದು ಡಿಡಿಎ ಅಧಿಕಾರಿಗಳು ಬುಲ್ಡೋಜರ್ ಅನ್ನು ತಂದು ವಕೀಲ್ ಹಸನ್ ಅವರ ಮನೆಯನ್ನು ಕೆಡವಿದ್ದಾರೆ. ಅವರ ಮನೆಯನ್ನು ಧ್ವಂಸಗೊಳಿಸಿದಾಗ ಹಸನ್ ಅವರನ್ನು ಪೊಲೀಸರು ಬಂಧಿಸಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನೆ ಕೆಡಹುವ ಮುನ್ನ ಡಿಡಿಎ ನನಗೆ ಯಾವುದೇ ನೋಟಿಸ್ ನೀಡಿರಲಿಲ್ಲ ಎಂದು ಹಸನ್ ತಿಳಿಸಿದ್ದು, “ಉತ್ತರಾಖಂಡದ ಕಾರ್ಮಿಕರನ್ನು ರಕ್ಷಿಸಿದಾಗ ನನಗೆ ಕೋಟಿ ರೂಪಾಯಿಯ ಬಹುಮಾನ ಘೋಷಿಸಿದ್ದರು. ಆದರೆ ನನಗೆ ನನ್ನ ಮನೆಯನ್ನು ಮಾತ್ರ ಬಹುಮಾನವಾಗಿ ನೀಡಿ ಎಂದು ಕೇಳಿದ್ದೆ. ಅದನ್ನು ನೀಡುವ ಬದಲಾಗಿ, ಡಿಡಿಎ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ನನ್ನ ಮನೆಯನ್ನು ಕೆಡವಿದ್ದಾರೆ” ಎಂದು ದೆಹಲಿಯಲ್ಲಿ ರಾಕ್‌ವೆಲ್ ಎಂಟರ್‌ಪ್ರೈಸಸ್ ಎಂಬ ರಾಟ್‌ ಹೋಲ್‌(Rat Miner) ಮೈನಿಂಗ್‌ ಸಂಸ್ಥೆ ನಡೆಸುತ್ತಿರುವ ವಕೀಲ್ ಹಸನ್ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 15ರಂದು ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದ 41 ಕಾರ್ಮಿಕರನ್ನು ರಕ್ಷಿಸುವ ಎಲ್ಲ ಪ್ರಯತ್ನಗಳು ಫಲಪ್ರದವಾಗದಿದ್ದಾಗ,  ಹಸನ್ ಮತ್ತವರ ಇಲಿ ಗಣಿಗಾರರ ತಂಡವನ್ನು ಸಿಲ್ಕ್ಯಾರಾಕ್ಕೆ ಕರೆಸಲಾಗಿತ್ತು. ಇವರ ತಂಡದ ನಿರಂತರ ಶ್ರಮದ ಫಲವಾಗಿ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿತ್ತು. 17 ದಿನಗಳ ನಂತರ ಕಾರ್ಮಿಕರು ಹೊರ ಬಂದಿದ್ದರು.

ಈ ಪ್ರಯತ್ನಕ್ಕೆ ಇವರ ತಂಡವನ್ನು ಇಡೀ ದೇಶವೇ ಕೊಂಡಾಡಿತ್ತು. ಇವರ ಶ್ರಮಕ್ಕೆ ಉತ್ತರಾಖಂಡದ ಮುಖ್ಯಮಂತ್ರಿ ಪರಿಹಾರ ಮೊತ್ತವನ್ನು ಘೋಷಿಸಿದ್ದರು. ಇದನ್ನು ಸ್ವೀಕರಿಸಲು ನಿರಾಕರಿಸಿದ್ದ ವಕೀಲ್ ಹಸನ್ ಅವರ ತಂಡ, “ನಾವು ದೇಶದ ಸೇವೆ ಮಾಡಿದ್ದೇವೆ. ಅದಕ್ಕಾಗಿ ನಮಗೆ ಹಣ ಬೇಡ” ಎಂದು ಮೊತ್ತವನ್ನು ಪಡೆದುಕೊಳ್ಳಲು ನಿರಾಕರಿಸಿದ್ದರು. ಅಂದು ಹೀರೋ ಆಗಿದ್ದ ವ್ಯಕ್ತಿ, ಇಂದು ಮನೆ ಕಳೆದುಕೊಂಡು ಬೀದಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಿಸಲಾಗಿದೆ.

ಈ ಘಟನೆಯನ್ನು ಖಂಡಿಸಿರುವ ಟಿಎಂಸಿಯ ರಾಜ್ಯಸಭಾ ಸಂಸದೆ ಸಾಗರಿಕಾ ಘೋಸ್ಮ ಇದೊಂದು ನಿಜಕ್ಕೂ ದುರಂತ ಮತ್ತು ನಾಚಿಕೆಗೇಡು ಎಂದು ಆಕ್ರೋಶ ಹೊರಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...