ಬೆಂಗಳೂರಿಗೆ ಬರಲಿದೆ ಬುಲೆಟ್‌ ರೈಲು; ಸಮೀಕ್ಷೆಗೆ ಆದೇಶ

Date:

ದಕ್ಷಿಣ ಭಾರತಕ್ಕೆ ಬುಲೆಟ್‌ ರೈಲು ಜಾಲವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದಕ್ಷಿಣ ಭಾರತಕ್ಕೆ ಪ್ರವಾವಿತ ಬುಲೆಟ್‌ ರೈಉ ಯೋಜನೆ ಹೈದರಾಬಾದ್, ಅಮರಾವತಿ, ಬೆಂಗಳೂರು ಹಾಗೂ ಚೆನ್ನೈ ನಡುವೆ ಸಂಪರ್ಕ ಒದಗಿಸಲಿದೆ. ಈ ಬುಲೆಟ್‌ ರೈಲು ಯೋಜನೆಗಾಗಿ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ‘ಭಾರತ ಆಹಾರ ಉತ್ಪಾದನಾ ಶೃಂಗಸಭೆ’ಯಲ್ಲಿ ಮಾತನಾಡಿ ನಾಯ್ಡು, “ದಕ್ಷಿಣ ಭಾರತದ ಈ ಪ್ರಮುಖ ನಾಲ್ಕು ನಗರಗಳು ಸುಮಾರು 5 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು, ವಿಶ್ವದ ಅತಿದೊಡ್ಡ ಮಾರುಕಟ್ಟೆಯನ್ನು ಹೊಂದಿವೆ. ಈ ನಗರಗಳ ನಡುವೆ ಶೀಘ್ರದಲ್ಲೇ ಬುಲೆಟ್ ರೈಲು ಬರಲಿದೆ. ಸಮೀಕ್ಷೆಗೆ ಆದೇಶ ನೀಡಲಾಗಿದೆ” ಎಂದು ಹೇಳಿದ್ದಾರೆ.

ಸದ್ಯ ಚೆನ್ನೈ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಂದು ಮುಂಜಾನೆ ಬುಲೆಟ್‌ ರೈಲಿನಲ್ಲಿ ಟೋಕಿಯೊದಿಂದ ಸೆಂಡೈಗೆ ಪ್ರಯಾಣಿಸಿದರು. ಅವರೊಂದಿಗೆ ಜಪಾನ್ ಪ್ರಧಾನಿ ಶಿಗೇರು ಇಶಿಬಾ ಕೂಡ ಇದ್ದರು. ಈ ವೇಳೆ, ಜಪಾನ್‌ ದಿನಪತ್ರಿಕೆಯೊಂದಿಗೆ ಮಾತನಾಡಿರುವ ಮೋದಿ, “ಭಾರತದಲ್ಲಿ ಹೈಸ್ಪೀಡ್ ರೈಲು ಜಾಲವನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯನ್ನು ಸರ್ಕಾರ ಹೊಂದಿದೆ” ಎಂದು ಹೆಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಯೋಜನೆಯು ಪ್ರಗತಿಯಲ್ಲಿದೆ. ಇದೇ ಸಮಯದಲ್ಲಿ, ನಾವು ಒಂದು ದೊಡ್ಡ ಮಹತ್ವಾಕಾಂಕ್ಷೆಯನ್ನು ಘೋಷಿಸಿದ್ದೇವೆ. ನಮ್ಮ ದೇಶದಲ್ಲಿ 7,000 ಕಿಲೋಮೀಟರ್ ಉದ್ದದ ಹೈಸ್ಪೀಡ್ ರೈಲು ಜಾಲವನ್ನು ನಿರ್ಮಿಸಲಾಗುತ್ತದೆ” ಎಂದು ಮೋದಿ ಹೇಳಿದ್ದಾರೆ.

“ಮುಂದಿನ ಕೆಲವು ವರ್ಷಗಳಲ್ಲಿ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ ಪ್ರಯಾಣಿಕರ ಬಳಕೆಗೆ ದೊರೆಯಲಿದೆ. ಈ ಯೋಜನೆಯು ಭಾರತ ಮತ್ತು ಜಪಾನ್ ನಡುವಿನ ಪ್ರಮುಖ ಯೋಜನೆಯಾಗಿದೆ” ಎಂದಿದ್ದಾರೆ.

ಈ ಲೇಖ ಓದಿದ್ದೀರಾ?: “ಕನ್ನಡನಾಡು ನನ್ನ ಪ್ರೀತಿಯ ನಾಡು” ಎಂದು ಇಡೀ ಜಗತ್ತಿಗೆ ಸಾರುತ್ತಾ ಬಂದ ಬಾನು ದಸರಾ ಉದ್ಘಾಟಿಸಿದರೆ ತಪ್ಪೇ!

ಈ ಹಿಂದೆ, ಸರ್ಕಾರವು ಹೈಸ್ಪೀಡ್ ರೈಲು ಜಾಲದ ಸಂಭಾವ್ಯ ಮಾರ್ಗಗಳನ್ನು ಪಟ್ಟಿ ಮಾಡಿತ್ತು/ ಆ ಪಟ್ಟಿ ಇಂತಿದೆ;
ದೆಹಲಿ – ವಾರಣಾಸಿ
ದೆಹಲಿ – ಅಹಮದಾಬಾದ್
ಮುಂಬೈ – ನಾಗ್ಪುರ
ಮುಂಬೈ – ಹೈದರಾಬಾದ್
ಚೆನ್ನೈ – ಮೈಸೂರು
ದೆಹಲಿ – ಅಮೃತಸರ
ವಾರಣಾಸಿ – ಹೌರಾ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...