ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಮೇಘಾಲಯ ರಾಜ್ಯಪಾಲರಾಗಿ ನೇಮಕ

Date:

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಿದ್ದು, ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಅವರನ್ನು ನೇಮಕ ಮಾಡಿದ್ದಾರೆ. ಒಟ್ಟು ಮೂರು ರಾಜ್ಯಗಳಲ್ಲಿ ರಾಜ್ಯಪಾಲರನ್ನು ಬದಲಾಯಿಸಲಾಗಿದೆ. ಜುಲೈ 27ರಂದು ತಡರಾತ್ರಿ ಈ ಪ್ರಕಟನೆ ಹೊರಬಿದ್ದಿದೆ.

ಕರ್ನಾಟಕದ ಹಿರಿಯ ರಾಜಕಾರಣಿ ವಿಜಯಶಂಕರ್ 1994ರಲ್ಲಿ ಕರ್ನಾಟಕ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದರು. ನಂತರ ಲೋಕಸಭೆಯಲ್ಲಿ ಮೈಸೂರು ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದಾರೆ.

ಮೈಸೂರಿನ ಕುರುಬ ನಾಯಕ ವಿಜಯಶಂಕರ್ ಅವರು 1998 ಮತ್ತು 2004ರ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿ ಪ್ರವೇಶಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಆದರೆ 2014ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಸ್ಪರ್ಧಿಸಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಎದುರು ಪರಾಭವಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ರಾಜ್ಯಪಾಲರ ‘ವರ್ತನೆ’ಗೆ ಘಟಿಕೋತ್ಸವದ ವೇದಿಕೆಯಲ್ಲೇ ಕಣ್ಣೀರಿಟ್ಟ ಮಂಗಳೂರು ವಿವಿ ಉಪಕುಲಪತಿ!

2017ರಲ್ಲಿ ಬಿಜೆಪಿ ತೊರೆದಿದ್ದ ವಿಜಯಶಂಕರ್ ಒಂದು ವರ್ಷದಲ್ಲೇ ಕಾಂಗ್ರೆಸ್‌ಗೆ ಸೇರ್ಪಡೆಯಾದರು. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮೈಸೂರಿನಿಂದ ಕಾಂಗ್ರೆಸ್ ಟಿಕೆಟ್‌ನಿಂದ ಕಣಕ್ಕಿಳಿದಿದ್ದರು. ಆದರೆ ಪ್ರತಾಪ್ ಸಿಂಹ ವಿರುದ್ಧ 1.38 ಲಕ್ಷ ಮತಗಳ ಅಂತರದಲ್ಲಿ ಸೋಲು ಕಂಡರು.

2019ರ ನವೆಂಬರ್‌ನಲ್ಲಿ ಬಿಜೆಪಿಗೆ ಮರಳಿದರು. ಕಾಂಗ್ರೆಸ್‌ನಲ್ಲಿ ತನ್ನನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ದೂರಿದ್ದರು. 2023ರಲ್ಲಿ ವಿಜಯಶಂಕರ್ ವಿಧಾನಸಭಾ ಚುನಾವಣೆಯಲ್ಲಿ ಪಿರಿಯಾಪಟ್ಟಣ (ಮೈಸೂರು) ಕ್ಷೇತ್ರದಿಂದ ಸ್ಪರ್ಧಿಸಿ ಸೋತರು.

ಮಾಜಿ ಸಚಿವರೂ ಆಗಿರುವ ವಿಜಯಶಂಕರ್ ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳು ಸೇರಿದಂತೆ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. 2010ರಿಂದ 2016ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...