ಕ್ಯಾಬ್‌ ಚಾಲಕನ ಮೇಲೆ ಹಲ್ಲೆ-ಕೊಲೆ ಆರೋಪ; ಪೊಲೀಸ್‌ ಪೇದೆ ಬಂಧನ

Date:

ಕ್ಯಾಬ್‌ ಚಾಲಕನ ಮೇಲೆ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣನಾದ ಆರೋಪದ ಮೇಲೆ ತಮಿಳುನಾಡಿನ ಮಧುರವಾಯಲ್ ಪೊಲೀಸ್‌ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ನನ್ನು ಬಂಧಿಸಲಾಗಿದೆ.

ಗುರುವಾರ ತಡರಾತ್ರಿ ಮಧುರವಾಯಲ್ ಸರ್ವೀಸ್ ರಸ್ತೆಯಲ್ಲಿ 39 ವರ್ಷದ ಕ್ಯಾಬ್‌ ಚಾಲಕ ರಾಜ್‌ಕುಮಾರ್‌ ಮೇಲೆ ಹೆಡ್‌ ಕಾನ್ಸ್‌ಟೇಬಲ್ ರಿಜ್ವಾನ್ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ರಸ್ತೆಯಲ್ಲಿ ಬಿದ್ದಿದ್ದ ರಾಜ್‌ಕುಮಾರ್‌ನನ್ನು ದಾರಿ ಹೋಕರು ಕಂಡು, ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ರಾಜ್‌ಕುಮಾರ್ ಅ ವೇಳೆಗಾಗಲೇ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು. ರಾಜ್‌ಕುಮಾರ್ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಹಲ್ಲೆ ಬಗ್ಗೆ ತಿಳಿಯದ ಕುಟುಂಬವು ಅಂತ್ಯಸಂಸ್ಕಾರ ನೆರವೇರಿಸಿತ್ತು.

ಪೊಲೀಸರು ಮತ್ತು ಕುಟುಂಬದವರು ಆರಂಭದಲ್ಲಿ ಸಾವಿಗೆ ಹೃದಯಾಘಾತ ಕಾರಣವಿರಬಹುದು ಎಂದು ಭಾವಿಸಿದ್ದರು. ಆದರೆ, ರಾಜ್‌ಕುಮಾರ್ ಸ್ನೇಹಿತೆಯೊಬ್ಬರು ಪದೇ ರಿಜ್ವಾನ್‌ ಹಲ್ಲೆ ನಡೆಸಿರುವ ಬಗ್ಗೆ ಆತನ ಸಹೋದರನಿಗೆ ಮಾಹಿತಿ ನೀಡಿದ ಬಳಿಕ, ಘಟನೆ ಬೆಳಕಿಗೆ ಬಂದಿದೆ.

ಮೂಲಗಳ ಪ್ರಕಾರ, ಗುರುವಾರ ರಾತ್ರಿ ಮಹಿಳೆ ಮತ್ತು ರಾಜ್‌ಕುಮಾರ್ ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದರು. ಆಗ, ರಿಜ್ವಾನ್ ಮತ್ತು ಗಸ್ತು ಕರ್ತವ್ಯದಲ್ಲಿದ್ದ ಇನ್ನೊಬ್ಬ ಕಾನ್‌ಸ್ಟೆಬಲ್ ಆ ಮಾರ್ಗವಾಗಿ ಬಂದಿದ್ದಾರೆ. ತಡರಾತ್ರಿ ಏನು ಮಾಡುತ್ತಿದ್ದೀರಿ ಎಂದು ಇಬ್ಬರನ್ನೂ ಪ್ರಶ್ನಿಸಿದ್ದಾರೆ. ರಾಜ್‌ಕುಮಾರ್ ಕಾರಿನಿಂದ ಇಳಿದು ಅವರೊಂದಿಗೆ ಮಾತನಾಡಿದ್ದು, ಮಾತಿಗೆ ಮಾತ ಬೆಳೆದು ರಾಜ್‌ಕುಮಾರ್‌ ಅವರ ಬೆನ್ನಿಗೆ ರಿಜ್ವಾನ್‌ ಹೊಡೆದಿದ್ದಾರೆ.

ರಾಜ್‌ಕುಮಾರ್ ಕುಸಿದು ಬಿದ್ದಾಗ, ಆತನನ್ನು ಎಚ್ಚರಿಸಲು ಪೊಲೀಸರು ಯತ್ನಿಸಿದ್ದಾರೆ. ಬಳಿಕ, ಮಹಿಳೆಗೆ ಸ್ಥಳದಿಂದ ಹೋಗುವಂತೆ ಬೆದರಿಕೆ ಹಾಕಿದ್ದಾರೆ. ಆಕೆ ಹೋದ ಬಳಿಕ, ರಾಜ್‌ಕುಮಾರ್‌ನನ್ನು ಸ್ಥಳದಲ್ಲೇ ಬಿಟ್ಟು ಪೊಲೀಸ್‌ ಪೇದೆಗಳು ಪರಾರಿಯಾಗಿದ್ದಾರೆ.

ಮಹಿಳೆ ರಾಜ್‌ಕುಮಾರ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿ, ಘಟನೆ ಬಗ್ಗೆ ವಿವರಿಸಿದ್ದಾರೆ. ಬಳಿಕ, ರಾಜ್‌ಕುಮಾರ್‌ನ ಅಣ್ಣ ಜಯಕುಮಾರ್ ಮಧುರವಾಯಲ್ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು, ರಿಜ್ವಾನ್ ವಿರುದ್ಧ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಿಜ್ವಾನ್‌ನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...