ಭದ್ರತಾ ಸಿಬ್ಬಂದಿಯನ್ನು ಕರೆಯಿರಿ, ಇವರನ್ನು ಆಚೆ ಕಳುಹಿಸಿ; ಹಿರಿಯ ವಕೀಲರ ವಿರುದ್ಧ ಸಿಜೆಐ ಆಕ್ರೋಶ

Date:

ಸುಪ್ರೀಂ ಕೋರ್ಟ್‌ನಲ್ಲಿ ನೀಟ್- ಯುಜಿ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಹಿರಿಯ ನ್ಯಾಯವಾದಿ ಮ್ಯಾಥ್ಯೂಸ್ ನೆದುಂಪಾರ ವಿರುದ್ಧ ಕಠಿಣ ಶಬ್ಧಗಳಲ್ಲಿ ವಾಗ್ದಾಳಿ ನಡೆಸಿದ ಘಟನೆ ಇಂದು ನಡೆಯಿತು.

ನೀಟ್‌ ಯುಜಿ ಅರ್ಜಿದಾರರಲ್ಲಿ ಒಬ್ಬರಾಗಿದ್ದ ಮ್ಯಾಥ್ಯೂಸ್ ನೆದುಂಪಾರ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಪದೇ ಪದೇ ಅಡ್ಡಿ ಪಡಿಸುತ್ತಿದ್ದರು. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಆರಂಭದಲ್ಲಿ ಹೂಡ ಅವರ ವಾದ ಮುಗಿದ ನಂತರ ಮಾತನಾಡುವಂತೆ ಮ್ಯಾಥ್ಯೂಸ್‌ ಅವರಲ್ಲಿ ಮನವಿ ಮಾಡಿದ್ದರು. ಆದಾಗ್ಯೂ ನೆದುಂಪಾರ ಅವರು ತಾವು ಹಿರಿಯರಾಗಿದ್ದು ತಮಗೆ ಆದ್ಯತೆ ನೀಡಬೇಕೆಂದು ಅಡ್ಡಿಪಡಿಸುತ್ತಿದ್ದರು.

”ನಾನು ನಿಮ್ಮ ಪ್ರಶ್ನೆಗೆ ಉತ್ತರ ನೀಡುತ್ತೇನೆ. ಇಲ್ಲಿರುವ ಎಲ್ಲ ವಕೀಲರಲ್ಲಿ ನಾನು ಅತ್ಯಂತ ಹಿರಿಯ. ನಾನು ನ್ಯಾಯಾಲಯದ ಸಲಹೆಗಾರ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಾಧೀಶರು, ”ಇಲ್ಲ. ನಾನು ಯಾವುದೇ ನ್ಯಾಯಾಲಯದ ಸಲಹೆಗಾರರನ್ನು ನೇಮಿಸಿಕೊಂಡಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | RSS ನಿಷೇಧ ತೆರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆಯೇ?

ಇದಕ್ಕೆ ಪದೇ ಪದೆ ಮಾತು ಬೆಳೆಸುತ್ತಿದ್ದಾಗ ಕೋಪಗೊಂಡ ಸಿಜೆಐ ಚಂದ್ರಚೂಡ್, ”ಪ್ರಶ್ನೆಗೆ ನಿಮ್ಮ ಉತ್ತರ ಬೇಕಾಗಿಲ್ಲ. ಕುಳಿತುಕೊಳ್ಳಿ. ಇಲ್ಲದಿದ್ದರೆ ಕೋರ್ಟ್‌ನಿಂದ ನಿಮ್ಮ ಹೊರ ಹಾಕಬೇಕಾಗುತ್ತದೆ” ಎಂದರು.

ಇದಕ್ಕೆ ಉತ್ತರಿಸಿದ ಮ್ಯಾಥ್ಯೂಸ್ ”ನೀವು ನನಗೆ ಗೌರವ ನೀಡದಿದ್ದರೆ, ನಾನಾಗಿಯೇ ತೆರಳುತ್ತೇನೆ” ಎಂದರು.

ಇಬ್ಬರ ನಡುವೆ ಮಾತು ಮುಂದುವರೆದು ಮ್ಯಾಥ್ಯೂಸ್‌ ಹೂಡಾ ವಿಚಾರಣೆ ಸಂದರ್ಭದಲ್ಲಿ ಅಡ್ಡಿಪಡಿಸುವುದು ಹೆಚ್ಚಾಯಿತು. ಇದಕ್ಕೆ ತೀವ್ರ ಕೋಪಗೊಂಡ ಸಿಜೆಐ ಚಂಡ್ರಚೂಡ್ ”ಭದ್ರತಾ ಸಿಬ್ಬಂದಿಯನ್ನು ಕರೆಯಿರಿ. ನೆದುಂಪಾರ ಅವರನ್ನು ಕೋರ್ಟ್‌ನಿಂದ ಹೊರಗೆ ಹಾಕಿ” ಎಂದು ಕಠಿಣ ಮಾತುಗಳಲ್ಲಿ ಹೇಳಿದರು.

ಇದಕ್ಕೆ ಅಸಮಾಧಾನಗೊಂಡ ನೆದುಂಪಾರ, ”ನಾನು ತೆರಳುತ್ತೇನೆ. ಇದು ಸರಿಯಲ್ಲ” ಎಂದು ಹೇಳಿದರು.

ಮಾತು ಮುಂದುವರೆದು ವಾಗ್ವಾದ ಹೆಚ್ಚಾದಾಗ, ”ನೀವು ಹೀಗೆ ಮಾತನಾಡುವ ಅಗತ್ಯವಿಲ್ಲ. ನೀವೀಗ ಇಲ್ಲಿಂದ ಹೊರಡಬಹುದು. ಕಳೆದ 24 ವರ್ಷಗಳಿಂದ ನಾನು ನ್ಯಾಯಾಂಗ ವ್ಯವಸ್ಥೆಯಲ್ಲಿದ್ದೇನೆ. ವಕೀಲರು ಈ ಕೋರ್ಟ್‌ ಹೇಗೆ ನಡೆಯಬೇಕು ಎಂದು ತಿಳಿಸೋದಕ್ಕೆ ನಾನು ಬಿಡೋದಿಲ್ಲ” ಎಂದರು.

ಇದಕ್ಕೆ ಮ್ಯಾಥ್ಯೂಸ್‌, ನಾನು ಕೂಡ 1979ರಿಂದಲೂ ಈ ಕೋರ್ಟ್‌ಅನ್ನು ನೋಡುತ್ತಿದ್ದೇನೆ ಎಂದು ಎದುರು ಉತ್ತರಿಸಿದರು.

ನೆದುಂಪಾರ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರೊಂದಿಗೆ ವಾಗ್ವಾದ ನಡೆಸುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಬಾಂಡ್‌ಗಳ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಾಧೀಶರು ಅದರ ವಿರುದ್ಧ ಎಚ್ಚರಿಕೆ ನೀಡಿದ್ದರೂ, ನೆದುಂಪಾರ ಅವರು ವಿಚಾರಣೆಗೆ ಅಡ್ಡಿಪಡಿಸಿದರು.

‘ನನ್ನ ಮೇಲೆ ಕೂಗಾಡಬೇಡಿ’ ಎಂದು ಮುಖ್ಯ ನ್ಯಾಯಮೂರ್ತಿ ನೆಡುಂಪಾರ ಅವರಿಗೆ ಹೇಳಿದ್ದರು. ”ಇದು ಹೈಡ್ ಪಾರ್ಕ್ ಕಾರ್ನರ್ ಮೀಟಿಂಗ್ ಅಲ್ಲ, ನೀವು ನ್ಯಾಯಾಲಯದಲ್ಲಿದ್ದೀರಿ, ನೀವು ಅರ್ಜಿಯನ್ನು ಸ್ಥಳಾಂತರಿಸಲು, ಅರ್ಜಿ ಸಲ್ಲಿಸಲು ಬಯಸುತ್ತೀರಿ, ನೀವು ಮುಖ್ಯ ನ್ಯಾಯಮೂರ್ತಿಯಾಗಿ ನನ್ನ ನಿರ್ಧಾರವನ್ನು ಪಡೆದಿದ್ದೀರಿ, ನಾವು ನಿಮ್ಮ ಮಾತನ್ನು ಕೇಳುತ್ತಿಲ್ಲ, ನೀವು ಅರ್ಜಿ ಸಲ್ಲಿಸಲು ಬಯಸಿದರೆ, ಅದನ್ನು ಇಮೇಲ್‌ನಲ್ಲಿ ಸಲ್ಲಿಸಿ. ಅದು ಈ ನ್ಯಾಯಾಲಯದ ನಿಯಮವಾಗಿದೆ” ಎಂದು ಹೇಳಿದ್ದರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...