ಠಾಕ್ರೆ ಕುಟುಂಬ 10 ನಿಮಿಷದಲ್ಲಿ ಮುಂಬೈ ಬಂದ್ ಮಾಡುತ್ತದೆ: ಸಂಸದ ಸಂಜಯ್ ರಾವತ್

Date:

ಮಹಾರಾಷ್ಟ್ರ ರಾಜಕೀಯದಲ್ಲಿ ಠಾಕ್ರೆ ಕುಟುಂಬದ ಪ್ರಭಾವ ಇಂದಿಗೂ ಕಡಿಮೆಯಾಗಿಲ್ಲ. ನಾವು ಮನಸ್ಸು ಮಾಡಿದರೆ ಕೇವಲ 10 ನಿಮಿಷಗಳಲ್ಲಿ ಇಡೀ ಮುಂಬೈ ಮಹಾನಗರವನ್ನೇ ಬಂದ್ ಮಾಡಬಲ್ಲೆವು ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

​ಆದರೆ ರಾವತ್ ಅವರ ಈ ಹೇಳಿಕೆಯನ್ನು ತಳ್ಳಿಹಾಕಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್, ‘ಬಾಳಾಸಾಹೇಬರ ಕಾಲದಲ್ಲಿ ಮುಂಬೈ ಬಂದ್ ಮಾಡುವ ತಾಕತ್ತು ಶಿವಸೇನೆಗಿತ್ತು, ಆದರೆ ಈಗಿನವರಿಂದ ಅದು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

​ಮುಂಬರುವ 2026ರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಗೂ ಮುನ್ನ, ಸುಮಾರು 20 ವರ್ಷಗಳ ನಂತರ ಠಾಕ್ರೆ ಸಹೋದರರಾದ (ದಾಯಾದಿಗಳು) ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಒಂದಾಗುವ ಸೂಚನೆಗಳು ಸಿಗುತ್ತಿರುವ ಬೆನ್ನಲ್ಲೇ ಈ ವಾಕ್ಸಮರ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಠಾಕ್ರೆಗಳನ್ನು ಮುಗಿಸಲು ಸಾಧ್ಯವಿಲ್ಲ:
ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಜಯ್ ರಾವತ್, ಇತ್ತೀಚಿನ ಚುನಾವಣಾ ಹಿನ್ನಡೆಗಳ ಹೊರತಾಗಿಯೂ ರಾಜ್ಯ ರಾಜಕಾರಣದಲ್ಲಿ ಠಾಕ್ರೆ ಕುಟುಂಬಕ್ಕಿರುವ ಹಿಡಿತವನ್ನು ಸಮರ್ಥಿಸಿಕೊಂಡರು. “ಠಾಕ್ರೆಗಳನ್ನು ರಾಜಕೀಯವಾಗಿ ಎಂದಿಗೂ ಮುಗಿಸಲು ಸಾಧ್ಯವಿಲ್ಲ. ಮುಂಬೈ ಮೇಲೆ ನಮಗೆ ಈಗಲೂ ಹಿಡಿತವಿದ್ದು, ಹತ್ತು ನಿಮಿಷದಲ್ಲಿ ನಗರದ ಚಟುವಟಿಕೆಗಳನ್ನು ಸ್ಥಗಿತಗೊಳಿಸುವ ಶಕ್ತಿ ನಮಗಿದೆ,” ಎಂದು ಅವರು ಪ್ರತಿಪಾದಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್ ವಿರುದ್ಧ ಇನ್ನಾದರೂ ಎದೆ ಸೆಟೆಸುವರೇ ಮೋದಿ?

​ಫಡ್ನವೀಸ್ ತಿರುಗೇಟು:
ರಾವತ್ ಅವರ ಹೇಳಿಕೆಗೆ ಅದೇ ವೇದಿಕೆಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಫಡ್ನವೀಸ್, ಇದೊಂದು ‘ಟೊಳ್ಳು ಬೆದರಿಕೆ’ ಎಂದು ವ್ಯಂಗ್ಯವಾಡಿದರು. “ಏಕನಾಥ್ ಶಿಂಧೆ ಅವರನ್ನು ಮುಂಬೈಗೆ ಕಾಲಿಡಲು ಬಿಡುವುದಿಲ್ಲ ಎಂದು ಇವರು ಹೇಳುತ್ತಿದ್ದರು. ಆದರೆ ಶಿಂಧೆ 50 ಶಾಸಕರೊಂದಿಗೆ ಬಂದು, ರಾಜಭವನಕ್ಕೆ ತೆರಳಿ ಸರ್ಕಾರವನ್ನೇ ರಚಿಸಿದರು. ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರು ಬದುಕಿದ್ದಾಗ ಮುಂಬೈ ಬಂದ್ ಮಾಡುವ ಶಕ್ತಿ ಪಕ್ಷಕ್ಕಿತ್ತು. ಆದರೆ ಈಗಿನ ನಾಯಕರಿಗೆ ಆ ಸಾಮರ್ಥ್ಯವಿಲ್ಲ,” ಎಂದು ಫಡ್ನವೀಸ್ ಹೇಳಿದರು.

​ಸಹೋದರರ ಸವಾಲ್ ಮತ್ತು ಹೊಂದಾಣಿಕೆ:
ಉದ್ಧವ್ ಮತ್ತು ರಾಜ್ ಠಾಕ್ರೆ ಅವರ ಒಂದಾಗಿರುವ ಕುರಿತು ಮಾತನಾಡಿದ ರಾವತ್, ಹಿಂದೆ ಕಾಂಗ್ರೆಸ್ ಜೊತೆಗೂ ಶಿವಸೇನೆ ಕೈಜೋಡಿಸಿತ್ತು. ಸಿದ್ಧಾಂತಗಳು ಬೇರೆ ಇರಬಹುದು, ಆದರೆ ದೇಶದ ಹಿತದೃಷ್ಟಿಯಿಂದ ಹಾಗೂ ದ್ವೇಷದ ರಾಜಕಾರಣವನ್ನು ತಡೆಯಲು ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕೆಲವು ವಿಷಯಗಳಲ್ಲಿ ರಾಜಿ ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...