ತಾಯಿಯನ್ನು ಕೊಂದು, ಬೇಯಿಸಿ ತಿಂದಿದ್ದ ವ್ಯಕ್ತಿಗೆ ಗಲ್ಲು ಶಿಕ್ಷೆ ವಿಧಿಸಿದ ಬಾಂಬೆ ಹೈಕೋರ್ಟ್

Date:

ತನ್ನ ತಾಯಿಯನ್ನು ಕೊಂದು ದೇಹದ ಕೆಲವು ಭಾಗಗಳನ್ನು ತಿಂದಿದ್ದ ವ್ಯಕ್ತಿಗೆ ಕೊಲ್ಲಾಪುರ ನ್ಯಾಯಾಲಯ ವಿಧಿಸಿದ್ದ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಇದು ನರಭಕ್ಷಕತೆಯ ಪ್ರಕರಣ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ವಿಭಾಗೀಯ ಪೀಠವು ಅಪರಾಧಿ ಸುನಿಲ್ ಕುಚ್ಕೋರವಿಗೆ ಮರಣದಂಡನೆಯನ್ನು ವಿಧಿಸಿದೆ. ಇದು ನರಭಕ್ಷಕತೆಯ ಪ್ರಕರಣವಾಗಿದ್ದು, ಇದು ಅಪರೂಪದ ಅಪರೂಪದ ವರ್ಗಕ್ಕೆ ಸೇರುತ್ತದೆ ಎಂದು ಪೀಠ ಹೇಳಿದೆ.

“ಈ ಪ್ರಕರಣವು ಅಪರೂಪದಲ್ಲಿ ಅಪರೂಪದ ಪ್ರಕರಣದ ಅಡಿಯಲ್ಲಿ ಬರುತ್ತದೆ. ಅಪರಾಧಿ ತನ್ನ ತಾಯಿಯನ್ನು ಹತ್ಯೆ ಮಾಡಿದ್ದು ಮಾತ್ರವಲ್ಲದೆ ಆಕೆಯ ದೇಹದ ಭಾಗಗಳಾದ ಮೆದುಳು, ಹೃದಯ, ಯಕೃತ್ತು, ಮೂತ್ರಪಿಂಡ, ಕರುಳುಗಳನ್ನು ತೆಗೆದು ಬಾಣಲೆಯಲ್ಲಿ ಬೇಯಿಸುತ್ತಿದ್ದ” ಎಂದು ಹೈಕೋರ್ಟ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಂಬಂಧಿಯನ್ನು ಕಚ್ಚಿದ ನಾಯಿಯನ್ನೇ ಕೊಂದು ತಿಂದ ವ್ಯಕ್ತಿ; ಬಂಧನ

“ತನ್ನ ತಾಯಿಯ ಪಕ್ಕೆಲುಬುಗಳನ್ನು ಬೇಯಿಸಿ ತಿಂದು, ಕೊನೆಯಲ್ಲಿ ಹೃದಯವನ್ನು ಬೇಯಿಸಿ ತಿನ್ನಲು ಹೊರಟ್ಟಿದ್ದನು. ಇದು ನರಭಕ್ಷಕತೆಯ ಪ್ರಕರಣವಾಗಿದೆ. ಇದು ನರಭಕ್ಷಕ ಪ್ರವೃತ್ತಿ ಆಗಿರುವುದರಿಂದ ಅಪರಾಧಿಯ ಸುಧಾರಣೆಗೆ ಯಾವುದೇ ಅವಕಾಶವಿಲ್ಲ. ಜೀವಾವಧಿ ಶಿಕ್ಷೆ ನೀಡಿದರೆ, ಜೈಲಿನಲ್ಲಿಯೂ ಇದೇ ರೀತಿಯ ಅಪರಾಧ ಮಾಡುವ ಅಪಾಯವಿದೆ” ಎಂದು ಕೋರ್ಟ್ ಅಭಿಪ್ರಾಯಿಸಿದೆ.

ವರದಿ ಪ್ರಕಾರ ಸುನಿಲ್ ಕುಚ್ಕೋರವಿ ತನ್ನ 63 ವರ್ಷದ ತಾಯಿ ಯಲ್ಲಮ್ಮ ರಾಮಾ ಕುಚ್ಕೋರವಿಯನ್ನು 2017ರ ಆಗಸ್ಟ್ 28ರಂದು ಕೊಲ್ಲಾಪುರ ನಗರದ ತಮ್ಮ ನಿವಾಸದಲ್ಲಿ ಭೀಕರವಾಗಿ ಹತ್ಯೆ ಮಾಡಿದ್ದನು. ಬಳಿಕ ದೇಹವನ್ನು ಕತ್ತರಿಸಿ, ಬಾಣಲೆಯಲ್ಲಿ ಬೇಯಿಸಿ ಕೆಲವು ಅಂಗಗಳನ್ನು ತಿಂದಿದ್ದಾನೆ.

ಮದ್ಯ ಖರೀದಿಸಲು ತಾಯಿ ಹಣ ನೀಡಲಿಲ್ಲ ಎಂಬ ಕಾರಣದಿಂದಾಗಿ ಸುನಿಲ್ ಕುಚ್ಕೋರವಿ ತನ್ನ ತಾಯಿಯನ್ನು ಕೊಂದಿದ್ದಾನೆ ಎಂದು ಕೊಲ್ಲಾಪುರ ನ್ಯಾಯಾಲಯವು 2021ರಲ್ಲಿ ಮರಣದಂಡನೆ ವಿಧಿಸಿತ್ತು. ಅಪರಾಧಿ ತನ್ನ ವಿರುದ್ಧದ ಆರೋಪವನ್ನು ಪ್ರಶ್ನಿಸಿ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದನು. ಈ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಕೊಲ್ಲಾಪುರ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...