ತನಿಖಾ ಸಂಸ್ಥೆಗಳಿಂದ ಸರ್ಕಾರ ನಡೆಸಲು ಸಾಧ್ಯವಾಗದು; ಪತ್ರಿಕಾ ಸ್ವಾತಂತ್ರ್ಯದ ಪರ ಸುಪ್ರೀಂ ಬ್ಯಾಟಿಂಗ್

Date:

ಮಾಧ್ಯಮ ಪ್ರತಿನಿಧಿಗಳು ಸುದ್ದಿ ಸಂಗ್ರಹಿಸಲು ತಮ್ಮದೇ ಆದ ಮೂಲಗಳನ್ನು ಹೊಂದಿದ್ದಾರೆ ಮತ್ತು ತನಿಖಾ ಸಂಸ್ಥೆಗಳು ಯಾವುದೇ ರೀತಿಯ ತನಿಖೆಗಾಗಿ ಪತ್ರಕರ್ತರ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಳ್ಳುವುದಕ್ಕೆ ಕೇಂದ್ರವು ಪ್ರತ್ಯೇಕ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಪತ್ರಕರ್ತರ ಸಾಧನಗಳನ್ನು ವಶಪಡಿಸಿಕೊಳ್ಳುವ ಕಾನೂನು ಜಾರಿ ಸಂಸ್ಥೆಗಳಿಗೆ ವಿವರವಾದ ಮಾರ್ಗಸೂಚಿಗಳನ್ನು ಕೋರಿರುವ ಫೌಂಡೇಶನ್ ಫಾರ್ ಮೀಡಿಯಾ ಪ್ರೊಫೆಷನಲ್ಸ್‌ನ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠ ತನಿಖಾ ಸಂಸ್ಥೆಗಳಿಂದ ಸರ್ಕಾರ ನಡೆಸಲು ಸಾಧ್ಯವಾಗದು ಎಂದು ಹೇಳಿದೆ.

“ಪತ್ರಕರ್ತರ ಸಾಧನಗಳನ್ನು ವಶಪಡಿಸಿಕೊಂಡಿರುವುದು ಗಂಭೀರ ವಿಷಯವಾಗಿದೆ. ಮಾಧ್ಯಮ ಸಂಸ್ಥೆಗಳ ವೃತ್ತಿಪರರಿಗೆ ಉತ್ತಮ ಮಾರ್ಗಸೂಚಿಗಳು ಇರಬೇಕು. ಮಾಧ್ಯಮ ವೃತ್ತಿಪರರು ತಮ್ಮದೇ ಆದ ಮೂಲಗಳನ್ನು ಹೊಂದಿದ್ದಾರೆ. ನಾವು ಖಾಸಗಿತನದ ಮೂಲಭೂತ ಹಕ್ಕನ್ನು ಹೊಂದಿದ್ದೇವೆ. ಇದರಲ್ಲಿ ಸಮತೋಲನ ಇರಬೇಕು. ಮುಂದಿನ ವಿಚಾರಣೆಯನ್ನು ಡಿಸೆಂಬರ್‌ 6ಕ್ಕೆ ಕೈಗೆತ್ತಿಕೊಳ್ಳಲಾಗುವುದು” ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ನ್ಯಾಯಾಲಯದ ಮುಂದಿರುವ ವಿಷಯವು ಸಂಕೀರ್ಣ ಕಾನೂನು ಸಮಸ್ಯೆಗಳಿಗೆ ಸಂಬಂಧಿಸಿದೆ. ಮಾಧ್ಯಮಗಳಿಗೂ ಹಕ್ಕುಗಳಿವೆ, ಆದರೆ ಅದು ಕಾನೂನಿಗಿಂತ ಮೇಲಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದೆಹಲಿ ವಾಯು ಮಾಲಿನ್ಯ: 4 ರಾಜ್ಯಗಳಲ್ಲಿ ತ್ಯಾಜ್ಯ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಸುಪ್ರೀಂ ಆದೇಶ

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಈ ಪ್ರಕರಣವು ರಾಷ್ಟ್ರದ ವಿರುದ್ಧ ಗೌಪ್ಯತೆಗೆ ಸಂಬಂಧಿಸಿದ ದೋಷಾರೋಪಣೆಗೆ ಸಂಬಂಧಿಸಿದೆ. ಈಗ ಅವರು ಪಾಸ್‌ವರ್ಡ್‌ಗಳು ಅಥವಾ ಬಯೋಮೆಟ್ರಿಕ್‌ಗಳನ್ನು ಹಂಚಿಕೊಳ್ಳಲು ಒತ್ತಾಯಿಸುತ್ತಾರೆ. ವೈಯಕ್ತಿಕ ಡೇಟಾ, ಹಣಕಾಸಿನ ಡೇಟಾ ಎಲ್ಲ ಡಿಜಿಟಲ್ ಮಾಹಿತಿಗಳು ಆ ಸಾಧನದಲ್ಲಿರುವ ಕಾರಣ ಅವರು ಏನನ್ನು ವಶಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಸಂಬಂಧಿಸಿದಂತೆ ಯಾವುದೇ ಮಾರ್ಗಸೂಚಿಗಳಿಲ್ಲ” ಎಂದು ಹೇಳಿದರು

ಈ ಪ್ರಕರಣದಲ್ಲಿ ಯಾವ ರೀತಿಯ ಮಾರ್ಗಸೂಚಿಗಳ ಅಗತ್ಯವಿದೆ ಎಂಬುದನ್ನು ಕೇಂದ್ರವು ವಿಶ್ಲೇಷಿಸಬೇಕು.ಸಾಲಿಸಿಟರ್ ಜನರಲ್ ಅವರು ಈ ಬಗ್ಗೆ ಸ್ಪಷ್ಟ ಕಾರ್ಯಸೂಚಿಯೊಂದಿಗೆ ಹಿಂತಿರುಗಲು ನಾವು ಬಯಸುತ್ತೇವೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಈ ಹಿಂದೆ, 16 ಪತ್ರಿಕಾ ಸಂಘಟನೆಗಳು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದು, ಮಾಧ್ಯಮಗಳ ವಿರುದ್ಧ ತನಿಖಾ ಸಂಸ್ಥೆಗಳ “ದಮನಕಾರಿ” ಬಳಕೆಯನ್ನು ಕೊನೆಗೊಳಿಸಲು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯನ್ನು ಕೋರಿದ್ದವು. ಪತ್ರಕರ್ತರ ಎಲೆಕ್ಟ್ರಾನಿಕ್ ಸಾಧನಗಳನ್ನು ಪೊಲೀಸರು ವಶಪಡಿಸಿಕೊಳ್ಳುವ ಕುರಿತು ಅವರು ಮಾರ್ಗಸೂಚಿಗಳನ್ನು ಅಳವಡಿಸಲು ನಿರ್ದೇಶಿಸುವಂತೆ ಮನವಿ ಮಾಡಿದ್ದರು.

ಸುದ್ದಿ ಪೋರ್ಟಲ್ ‘ನ್ಯೂಸ್‌ಕ್ಲಿಕ್‌’ಗೆ ಸಂಬಂಧಿಸಿದ ಪತ್ರಕರ್ತರು, ಸಂಪಾದಕರು ಮತ್ತು ಬರಹಗಾರರ ಮನೆಗಳ ಮೇಲೆ ಕೆಲವು ದಿನಗಳ ಹಿಂದೆ ದೆಹಲಿ ಪೊಲೀಸರು ದಾಳಿ ನಡೆಸಿದ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ. ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಬಂಧಿಸಲಾಗಿದೆ. ವೆಬ್ ಪೋರ್ಟಲ್, ಚೀನಾ ಪರ ಪ್ರಚಾರ ಮಾಡಲು ಹಣವನ್ನು ಪಡೆದಿದೆ ಎಂದು ಇವರಿಬ್ಬರ ಮೇಲೆ ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...