ಬಿಹಾರ | ಭೀಕರ ಅಪಘಾತ: ಐವರು ಉದ್ಯಮಿಗಳು ಸಾವು

Date:

ಕಾರು ಟ್ರಕ್‌ಗೆ ಡಿಕ್ಕಿ ಹೊಡೆದು ಐವರು ಉದ್ಯಮಿಗಳು ಸಾವನ್ನಪ್ಪಿರುವ ಘಟನೆ ಬಿಹಾರದ ಪಾರ್ಸಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಯಾ ಮೋರ್ ಬಳಿ ನಡೆದಿದೆ. ಗುರುವಾರ ಬೆಳಗಿನ ಜಾವ 12.45ರ ಸುಮಾರಿಗೆ ಪಟನಾ-ಗಯಾ-ದೋಭಿ ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 83ರಲ್ಲಿ ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಜೋರಾದ ಡಿಕ್ಕಿಯ ಶಬ್ದ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಗ್ಯಾಸ್ ಕಟ್ಟರ್‌ಗಳು ಮತ್ತು ಕ್ರೇನ್ ಸಹಾಯದಿಂದ ಸುಮಾರು ಎರಡು ಗಂಟೆಗಳು ಪ್ರಯತ್ನ ನಡೆಸಿ ಶವಗಳನ್ನು ಹೊರತೆಗೆದಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ | ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಐವರ ದಾರುಣ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರನ್ನು ಪಟನಾದ ಕುರ್ಜಿ ಚಶ್ಮಾ ಗಾಲಿಯ ನಿವಾಸಿ ರಾಜೇಶ್ ಕುಮಾರ್ (50), ಪಟನಾದ ಪಟೇಲ್ ನಗರದ ನಿವಾಸಿ ಸಂಜಯ್ ಕುಮಾರ್ ಸಿನ್ಹಾ (55), ಪಟನಾದ ನಿವಾಸಿ ಕಮಲ್ ಕಿಶೋರ್ (38), ಪಟನಾದಲ್ಲಿ ವಾಸಿಸುತ್ತಿದ್ದ ಸಮಷ್ಟಿಪುರ ನಿವಾಸಿ ಪ್ರಕಾಶ್ ಚೌರಾಸಿಯಾ (35) ಮತ್ತು ಮುಜಫರ್‌ಪುರ ನಿವಾಸಿ ಸುನಿಲ್ ಕುಮಾರ್ (38) ಎಂದು ಗುರುತಿಸಲಾಗಿದೆ.

ಮೃತ ಐವರೂ ಪಟನಾ ಮತ್ತು ಹತ್ತಿರದ ಜಿಲ್ಲೆಗಳ ನಿವಾಸಿಗಳಾಗಿದ್ದು ಕೀಟನಾಶಕ ಮತ್ತು ಕೃಷಿ ಉತ್ಪನ್ನಗಳ ವ್ಯವಹಾರದಲ್ಲಿ ತೊಡಗಿದ್ದರು. ಉದ್ಯಮಿಗಳು ಒಂದು ವ್ಯಾಪಾರಕ್ಕಾಗಿ ಫತುಹಾಗೆ ಹೋಗಿದ್ದು ತಡರಾತ್ರಿ ಪಟನಾಕ್ಕೆ ಹಿಂದಿರುತ್ತಿದ್ದರು.

ಕಾರು ಅತಿ ವೇಗದಲ್ಲಿ ಚಲಾಯಿಸಲಾಗುತ್ತಿತ್ತು. ಟ್ರಕ್ ನಿಧಾನವಾಗಿ ಚಲಿಸುತ್ತಿತ್ತು ಅಥವಾ ಸರಿಯಾದ ಸಿಗ್ನಲ್ ಹಾಕದೆ ರಸ್ತೆಬದಿಯಲ್ಲಿ ನಿಲ್ಲಿಸಲಾಗಿತ್ತು. ಕಾರಿನ ಚಾಲಕನಿಗೆ ಬ್ರೇಕ್ ಹಾಕುವಷ್ಟೂ ಸಮಯ ಇರಲಿಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪಟನಾ ಪೊಲೀಸರು ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಟನಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (PMCH) ಕಳುಹಿಸಲಾಗಿದೆ. ಮೊಬೈಲ್ ಫೋನ್‌ಗಳಿಗೆ ಬಂದ ಕರೆಗಳ ಮೂಲಕ ಪೊಲೀಸರು ಕುಟುಂಬಗಳಿಗೆ ಮಾಹಿತಿ ನೀಡಿದ್ದಾರೆ.

ಟ್ರಕ್ ಚಾಲಕ ಪರಾರಿಯಾಗಿದ್ದು ಆತನ ವಿರುದ್ಧ ಪರ್ಸಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...