ಭಾರತದ ಸಾರ್ವಜನಿಕ ಶಿಕ್ಷಣದ ಕಗ್ಗೊಲೆ ಅಂತ್ಯವಾಗಬೇಕು: ಸೋನಿಯಾ ಗಾಂಧಿ

Date:

ಮೋದಿ ಸರ್ಕಾರದ ಶಿಕ್ಷಣ ನೀತಿಯನ್ನು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಖಂಡಿಸಿದ್ದು,ಶಿಕ್ಷಣದಲ್ಲಿ ಅಧಿಕಾರ ಕೇಂದ್ರೀಕರಣ, ಖಾಸಗಿ ವಲಯಗಳಿಗೆ ಹೊರ ಗುತ್ತಿಗೆ ನೀಡುವ ಮೂಲಕ ವಾಣಿಜ್ಯೀಕರಣ ಹಾಗೂ ಪಠ್ಯಪುಸ್ತಕಗಳು, ಪಠ್ಯ ಕ್ರಮ ಮತ್ತು ಶಿಕ್ಷಣ ಸಂಸ್ಥೆಗಳನ್ನು ಕೋಮುವಾದೀಕರಣಗೊಳಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕೆಯೊಂದಕ್ಕೆ ಬರೆದ ಲೇಖನದಲ್ಲಿ ಭಾರತದ ಶಿಕ್ಷಣ ವ್ಯವಸ್ಥೆಯಿಂದ ಉಂಟಾಗುತ್ತಿರುವ ಗಂಭೀರ ಪರಿಣಾಮಗಳ ಬಗ್ಗೆ ಬೆಳಕು ಚಲ್ಲಿದ್ದಾರೆ.

‘ಇಂದು ಕಗ್ಗೊಲೆಯಾಗುತ್ತಿರುವ ಭಾರತೀಯ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಖಂಡಿತಾ ಅಂತ್ಯವಾಗಬೇಕು. ಮಕ್ಕಳು ಹಾಗೂ ಯುವಕರ ಬಗ್ಗೆ ಅಸಡ್ಡೆ ಹೊಂದಿರುವ ಕೇಂದ್ರ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿ(2020)ಯಲ್ಲಿ ವಾಸ್ತವಾಂಶಗಳನ್ನು ಬಚ್ಚಿಟ್ಟು ತಪ್ಪುಗಳನ್ನು ಬಿಂಬಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹತ್ವದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸುವಾಗ ರಾಜ್ಯ ಸರಕಾರಗಳನ್ನು ಕೈಬಿಡುವ ಮೂಲಕ, ಕೇಂದ್ರ ಸರ್ಕಾರ ಶಿಕ್ಷಣದ ಒಕ್ಕೂಟ ಸ್ವರೂಪವನ್ನು ಕಡೆಗಣಿಸಿದೆ’ ಎಂದು ಆರೋಪಿಸಿದ್ದಾರೆ.

ಕೇಂದ್ರೀಕರಣ ಈ ಸರಕಾರದ ಕಳೆದ 11 ವರ್ಷಗಳ ಕಾರ್ಯವೈಖರಿಯ ಗುಣಲಕ್ಷಣವಾಗಿದೆ. ಆದರೆ, ಇದರಿಂದ ತುಂಬಾ ಅಪಾಯಕಾರಿ ದುಷ್ಪರಿಣಾಮವಾಗಿರುವುದು ಶಿಕ್ಷಣ ವಲಯದ ಮೇಲೆ. ಕೇಂದ್ರ ಶಿಕ್ಷಣ ಸಚಿವರು ಹಾಗೂ ರಾಜ್ಯಗಳ ಶಿಕ್ಷಣ ಸಚಿವರನ್ನೊಳಗೊಂಡ ಕೇಂದ್ರ ಶಿಕ್ಷಣ ಸಲಹಾ ಸಮಿತಿಯ ಸಭೆ 2019ರಿಂದಾಚೆಗೆ ಆಯೋಜನೆಗೊಂಡಿಲ್ಲ ಎಂದೂ ಅವರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪುಟ್ಟ ರಾಷ್ಟ್ರಗಳಿಂದ ಇಸ್ರೇಲ್, ರಷ್ಯಾ, ಅಮೆರಿಕ ಕಲಿಯುವುದು ಬಹಳಷ್ಟಿದೆ!

ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸದೆ, ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಕೇಂದ್ರ ಸರಕಾರ ಏಕಪಕ್ಷೀಯವಾಗಿ ಜಾರಿಗೊಳಿಸಿದೆ. ಶಿಕ್ಷಣವನ್ನು ತಳಮಟ್ಟದಿಂದ ಮರು ರೂಪಿಸುವ ನೀತಿಯನ್ನು ಪರಿಚಯಿಸಲಾಗಿದ್ದರೂ, ಈ ನೀತಿಯ ಜಾರಿಯ ಕುರಿತು ಕೇಂದ್ರ ಸರಕಾರ ಒಮ್ಮೆಯೂ ರಾಜ್ಯ ಸರಕಾರಗಳೊಂದಿಗೆ ಸಮಾಲೋಚನೆ ನಡೆಸಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಟೀಕಿಸಿದ್ದಾರೆ.

ಶಿಕ್ಷಣವು ಸಂವಿಧಾನದ ಸಹವರ್ತಿ ಪಟ್ಟಿಯಡಿ ಬರುತ್ತದೆ ಎಂಬುದರತ್ತ ಬೊಟ್ಟು ಮಾಡಿರುವ ಅವರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರಗಳ ನಡುವೆ ದೊಡ್ಡ ಪ್ರಮಾಣದ ಸಹಕಾರವಿರಬೇಕಾದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಕೇಂದ್ರ ಸರಕಾರವು ಪ್ರಜಾತಾಂತ್ರಿಕ ಸಮಾಲೋಚನೆಯನ್ನು ಅಗೌರವಿಸುತ್ತಿದೆ ಹಾಗೂ ವೈವಿಧ್ಯಮಯ ಪ್ರಾದೇಶಿಕ ಭಾವನೆಗಳನ್ನು ಪರಿಗಣಿಸದೆ ನೀತಿಗಳನ್ನು ಹೇರುತ್ತಿದೆ ಎಂದು ಸೋನಿಯಾ ಗಾಂಧಿ ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...