ಆರ್‌ಎಸ್‌ಎಸ್‌ನ ಗೋಲ್ವಾಲ್ಕರ್‌ ವಿರುದ್ದ ಪೋಸ್ಟ್‌; ದಿಗ್ವಿಜಯ್‌ ಸಿಂಗ್‌ ವಿರುದ್ಧ ಪ್ರಕರಣ

Date:

  • ವಕೀಲ ರಾಜೇಶ್‌ ಜೋಶಿಯಿಂದ ದಿಗ್ವಿಜಯ್‌ ಸಿಂಗ್‌ ವಿರುದ್ಧ ದೂರು
  • ಆರ್‌ಎಸ್‌ಎಸ್‌ನಲ್ಲಿ ಸುದೀರ್ಘ ಅವಧಿಯವರೆಗೆ ಗೋಲ್ವಾಲ್ಕರ್ ಸೇವೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥರಾಗಿದ್ದ ಎಂ ಎಸ್ ಗೋಲ್ವಾಲ್ಕರ್ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ (ಜುಲೈ 9) ಹೇಳಿದ್ದಾರೆ.

ದಿಗ್ವಿಜಯ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಗೋಲ್ವಾಲ್ಕರ್‌ ಕುರಿತು ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಈ ಸಂಬಂಧ ಸಂಘದ ಕಾರ್ಯಕರ್ತ ಹಾಗೂ ವಕೀಲ ರಾಜೇಶ್‌ ಜೋಶಿ ಎಂಬುವವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಲಾಗಿದೆ.

ದಿಗ್ವಿಜಯ್‌ ಸಿಂಗ್‌ ಅವರ ವಿರುದ್ಧ ಶನಿವಾರ ರಾತ್ರಿ ಐಪಿಸಿ ಸೆಕ್ಷನ್‌ 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಬಿತ್ತುವುದು), 500 (ಮಾನಹಾನಿ) ಮತ್ತು 505ಗಳಡಿ (ಸಾರ್ಜನಿಕ ಸ್ಥಳ ದುರ್ಬಳಕೆ) ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿಗ್ವಿಜಯ್‌ ಅವರು ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಗೋಲ್ವಾಲ್ಕರ್ ವಿರುದ್ಧ ಹೆಸರು ಮತ್ತು ಗುರೂಜಿ ಎಂದು ಕರೆಯಲ್ಪಡುವ ಗೋಲ್ವಾಲ್ಕರ್‌ ಚಿತ್ರವುಳ್ಳ ಪೋಸ್ಟ್ ಅನ್ನು ಹಂಚಿಕೊಂಡಿದ್ದರು.

ಈ ಪೋಸ್ಟ್‌ನಿಂದ ದಲಿತರು, ಹಿಂದುಳಿದ ವರ್ಗ, ಮುಸ್ಲಿಂ ಹಾಗೂ ಹಿಂದೂಗಳ ನಡುವೆ ಪರಸ್ಪರ ದ್ವೇಷ ಭಾವನೆ ಮೂಡಲಿದೆ. ಜತೆಗೆ ಹಿಂದೂಗಳ ಭಾವನೆಗೆ ಮತ್ತು ಅರ್ಎಸ್ಎಸ್‌ನ ಕಾರ್ಯಕರ್ತರ ನಂಬಿಕೆಗಳಿಗೆ ಧಕ್ಕೆ ತಂದಿದೆ ಎಂದು ರಾಜೇಶ್ ಜೋಶಿ ಮಧ್ಯಪ್ರದೇಶ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದಿಗ್ವಿಜಯ್‌ ಅವರ ಗೋಲ್ವಾಲ್ಕರ್‌ ಕುರಿತ ಪೋಸ್ಟ್‌ ಅನ್ನು ಆರ್‌ಎಸ್‌ಎಸ್‌ನ ಸ್ಥಳೀಯ ಅಧಿಕಾರಿಯೊಬ್ಬರು ಖಂಡಿಸಿದ್ದು, “ಸಂಘದ ಘನತೆಗೆ ಕುಂದು ತರಲು ಗೋಲ್ವಾಲ್ಕರ್‌ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯ ಪೋಸ್ಟ್‌ ಹಂಚಿಕೆಯಾಗಿದೆ” ಎಂದು ಹೇಳಿಕೆಯೊಂದನ್ನು ನೀಡಿದ್ದಾರೆ.

ಗುರೂಜಿ ಎಂದು ಕರೆಯಲ್‌ಪಡುತ್ತಿದ್ದ ಗೋಲ್ವಾಲ್ಕರ್‌ ಅವರ ಕುರಿತು ವಿವಾದಾತ್ಮಕ ಹೇಳಿಕೆಗಳುಳ್ಳ ಒಂದು ಪುಟದ ಚಿತ್ರವನ್ನು ಶನಿವಾರ ದಿಗ್ವಿಜಯ್‌ ಸಿಂಗ್‌ ಅವರು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಶನಿವಾರ ಹಂಚಿಕೊಂಡಿದ್ದರು.

“ದಲಿತರು, ಹಿಂದುಳಿದವರ್ಗ, ಮುಸ್ಲಿಮರಿಗೆ ಸಮಾನ ಹಕ್ಕು ನೀಡುವ ಬದಲು ಬ್ರಿಟಿಷ್ ಆಡಳಿತದಲ್ಲಿ ಇರುವುದೇ ಲೇಸು” ಎಂದು ಗೋಲ್ವಾಲ್ಕರ್ ಹೇಳಿದ್ದರು ಎಂಬ ಮಾಹಿತಿಯ ಪೋಸ್ಟ್‌ ಅನ್ನು ದಿಗ್ವಿಜಯ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ₹ 6,100 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಚಾಲನೆ, ಕೆಸಿಆರ್‌ ವಿರುದ್ಧ ವಾಗ್ದಾಳಿ

ಈ ಹೇಳಿಕೆಗೆ ಆರ್‌ಎಸ್‌ಎಸ್‌ ಪ್ರಚಾರ ವಿಭಾಗದ ಮುಖ್ಯಸ್ಥ ಸುನೀಲ್ ಅಂಬೇಕರ್ ಆಕ್ಷೇಪ ವ್ಯಕ್ತಪಡಿಸಿದ್ದರು. “ಆಧಾರ ರಹಿತ ಹೇಳಿಕೆ ಮೂಲಕ ಸಮಾಜದ ಸ್ವಾಸ್ಥ್ಯವನ್ನು ದಿಗ್ವಿಜಯ್ ಕದಡುತ್ತಿದ್ದಾರೆ. ಸಮಾಜವನ್ನು ಒಡೆಯುವ ಇಂಥ ಹೇಳಿಕೆಗಳನ್ನು ‘ಗುರೂಜಿ’ (ಗೋಲ್ವಾಲ್ಕರ್) ಎಂದೂ ನೀಡಿಲ್ಲ.

ಗೋಲ್ವಾಲ್ಕರ್‌ ಅವರು 1940 ರಿಂದ 1973ರವರೆಗೆ ಸುದೀರ್ಘ ಅವಧಿಯವರೆಗೆ ಆರ್‌ಎಸ್‌ಎಸ್‌ನ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...