ಪಹಲ್ಗಾಮ್ ದಾಳಿ | ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್; ಬಿಜೆಪಿ ವಿರುದ್ಧ ದೂರು ದಾಖಲು

Date:

ಪಹಲ್ಗಾಮ್ ದಾಳಿ ಬೆನ್ನಲ್ಲೇ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ವಿರುದ್ಧ ದೂರು ದಾಖಲಾಗಿದೆ. ರಾಹುಲ್ ಗಾಂಧಿ ಬಗ್ಗೆ ಸುಳ್ಳು ಸುದ್ದಿಯನ್ನು ಕರ್ನಾಟಕ ಬಿಜೆಪಿ ತನ್ನ ಎಕ್ಸ್ ಪೋಸ್ಟ್‌ನಲ್ಲಿ ಹರಡುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು ಕನ್ನಡಿಗರು ಸೇರಿದಂತೆ ಒಟ್ಟು 28 ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಕರ್ನಾಟಕ ಬಿಜೆಪಿ, “ರಾಹುಲ್ ಗಾಂಧಿ ದೇಶದಿಂದ ಹೊರ ಹೋದಾಗಲೆಲ್ಲಾ ಇಲ್ಲಿ ಏನಾದರೂ ಕೆಟ್ಟಲು ಸಂಭವಿಸುತ್ತದೆ” ಎಂದು ಬರೆದುಕೊಂಡಿದೆ. ಈ ಪೋಸ್ಟ್‌ ವಿವಾದಕ್ಕೀಡಾಗುತ್ತಿದ್ದಂತೆ ಡಿಲೀಟ್ ಮಾಡಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಮೂವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪೋಸ್ಟ್ ಮಾಡಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ, ಮಾನವ ಹಕ್ಕುಗಳ ಘಟಕದ ಚೇರಮನ್ ಸಿ.ಎಂ ಧನಂಜಯ ಅವರು ದೂರು ನೀಡಿದ್ದಾರೆ. “ಪ್ರತಿ ಬಾರಿಯೂ ರಾಹುಲ್ ಹೊರದೇಶಕ್ಕೆ ಹೋದಾಗ ಇಂತಹ ಕೃತ್ಯಗಳು ಸಂಭವಿಸುತ್ತದೆ ಎಂದು ಬಿಜೆಪಿ ಪೋಸ್ಟ್ ಮಾಡಿದೆ. ಇದರಿಂದ ಸಮಾಜದಲ್ಲಿ ಶಾಂತಿ-ಸುವರ್ಧತೆ ಹಾಳಾಗಿ, ಸಮಾಜದಲ್ಲಿ ಗುಂಪುಗಳ ನಡುವೆ ಘರ್ಷಣೆಯನ್ನು ಉಂಟು ಮಾಡುವ ಉದ್ದೇಶದಿಂದ ಕೂಡಿರುತ್ತದೆ” ಎಂದು ದೂರಿನಲ್ಲಿ ಹೇಳಲಾಗಿದೆ.

“ರಾಹುಲ್ ಗಾಂಧಿಯವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಅವರ ಗೌರವಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಹಾಕಿರುವ ಬಿಜೆಪಿ ಕರ್ನಾಟಕ ಐ.ಟಿ & ಸೋಷಿಯಲ್ ಮೀಡಿಯಾ ಎಂಬ ‘ಎಕ್ಸ್’ ಖಾತೆಯ ಮುಖ್ಯಸ್ಥರು ಮತ್ತು ಇತರರ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...