ಜಾತಿ ವಿಕೃತಿ | ದಲಿತ ಯುವಕರ ಅರ್ಧ ತಲೆ ಬೋಳಿಸಿ, ದನಗಳಂತೆ ನಡೆಸಿ, ಹುಲ್ಲು ತಿನ್ನಿಸಿ ದೌರ್ಜನ್ಯ

Date:

ಇಬ್ಬರು ದಲಿತ ಯುವಕರಿಗೆ ಅರ್ಧ ತಲೆ ಬೋಳಿಸಿ, ಅವರನ್ನು ದನಗಳಂತೆ ಮಂಡಿಯೂರಿ ನಡೆಸಿ, ಹುಲ್ಲು ತಿನ್ನಿಸಿ ವಿಕೃತವಾಗಿ ಜಾತಿ ದೌರ್ಜನ್ಯ ಎಸಗಿರುವ ಆಘಾತಕಾರಿ, ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ. ಹಿಂದುತ್ವ ಕೋಮುವಾದಿ ಸಂಘಟನೆ ಬಜರಂಗದಳದ ಕಾರ್ಯಕರ್ತರು ದಲಿತ ಯುವಕರ ಮೇಲೆ ಕ್ರೌರ್ಯ ಮೆರೆದಿದ್ದಾರೆ.

ಬಿಜೆಪಿ ಆಡಳಿತವಿರುವ ಒಡಿಶಾದ ಗಂಜಾಂ ಜಿಲ್ಲೆಯ ಖರಿಗುಮ್ಮ ಗ್ರಾಮದ ಜಹ್ದಾದಲ್ಲಿ ವಿಕೃತ ಘಟನೆ ನಡೆದಿದೆ. ದನ ಕಳ್ಳಸಾಗಣೆದಾರರು ಎಂಬ ಆರೋಪದ ಮೇಲೆ ದಲಿತ ಯುವಕರನ್ನು ಬಜರಂಗದಳದ ಕಾರ್ಯಕರ್ತರು ಥಳಿಸಿ, ಅಮಾನವೀಯ ದೌರ್ಜನ್ಯ ಎಸಗಿದ್ದಾರೆ.

ಸೋಮವಾರ, ಇಬ್ಬರು ದಲಿತರನ್ನು ಹಿಡಿದ ಬಜರಂಗದಳದ ಪುಂಡರು, ಅವರ ಅರ್ಧ ಕೂದಲನ್ನು ಬೋಳಿಸಿದ್ದಾರೆ. ಅಮಾನವೀಯವಾಗಿ ಥಳಿಸಿದ್ದಾರೆ. ಮಂಡಿಯೂರಿ ಮೊಣಕಾಲುಗಳ ಮೇಲೆ ನಡೆಸಿದ್ದು, ದನಗಳ ಮೇವನ್ನು ತಿನ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋ ವೈರಲ್ ಆದ ಬಳಿಕ, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಧರಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತರನ್ನು ಗಂಜಾಂ ಜಿಲ್ಲೆಯ ಸಿಂಗಾಪುರದ ನಿವಾಸಿ ಬಾಬುಲಾ ನಾಯಕ್ (54) ಮತ್ತು ಬುಲು ನಾಯಕ್ (42) ಎಂದು ಹೆಸರಿಸಲಾಗಿದೆ. ಇಬ್ಬರೂ ಹರಿಯೋರ್‌ನಿಂದ ತಮ್ಮ ಗ್ರಾಮಕ್ಕೆ ಎರಡು ಹಸುಗಳು ಮತ್ತು ಒಂದು ಕರುವನ್ನು ಆಟೋದಲ್ಲಿ ಕೊಂಡೊಯ್ಯುತ್ತಿದ್ದರು. ಈ ವೇಳೆ, ಗೋರಕ್ಷಣೆಯ ಹೆಸರಿನಲ್ಲಿ ಬಜರಂಗದಳದ ಕಾರ್ಯಕರ್ತರು ಅವರನ್ನು ಅಡ್ಡಗಟ್ಟಿ, ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಗೋರಕ್ಷಕ ಪುಂಡರ ಗುಂಪು ಸಂತ್ರಸ್ತ ದಲಿತ ಯುವಕರ ಬಳಿ 30,000 ರೂ.ಗೆ ಬೇಡಿಕೆ ಇಟ್ಟಿದೆ. ಸಂತ್ರಸ್ತರು ಹಣ ಕೊಡಲು ನಿರಾಕರಿಸಿದಾಗ, ಅವರ ಮೇಲೆ ಹಲ್ಲೆ ನಡೆಸಿ ಅವಮಾನಿಸಲಾಗಿದೆ. ಅವರ ಅರ್ಧ ತಲೆ ಬೋಳಿಸಿ, ಸುಮಾರು 1 ಕಿ.ಮೀಗೂ ಹೆಚ್ಚು ದೂರ ಮೊಣಕಾಲುಗಳ ಮೇಲೆ ನಡೆಸಿದ್ದಾರೆ. ದನಗಳ ಮೇವು ತಿನ್ನುವಂತೆ ಮತ್ತು ಚರಂಡಿ ನೀರು ಕುಡಿಯುವಂತೆ ಒತ್ತಾಯಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ ಸುವೇಂದು ಕುಮಾರ್ ಪಾತ್ರ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...