ಜಾತಿ ದೌರ್ಜನ್ಯ | ಕಾರಿಗೆ ಬೈಕ್‌ ತಾಕಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Date:

ರಸ್ತೆಯಲ್ಲಿ ತೆರಳುವಾಗಿ ಪ್ರಬಲ ಜಾತಿಯ ವ್ಯಕ್ತಿಗೆ ಸೇರಿದ ಕಾರಿಗೆ ಬೈಕ್‌ ತಗುಲಿತು ಎಂಬ ಕಾರಣಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಜಾತಿ ದೌರ್ಜನ್ಯದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ಸೆಪ್ಟೆಂಬರ್ 2ರಂದು ಘಟನೆ ನಡೆದಿದೆ. ದಲಿತ ಯುವಕ ಆದಿತ್ಯ ಕುಮಾರ್ ಮೇಲೆ ಪ್ರಬಲ ಜಾತಿಯ ದುರುಳರು ಅಮಾನುಷವಾಗಿ ಹಲ್ಲೆಗೈದಿದ್ದಾರೆ.

ಆದಿತ್ಯ ಕುಮಾರ್ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ, ಬೈರಾಗಿ ಪೂರ್ವಾ ಗ್ರಾಮದ ನಿವಾಸಿ, ಪ್ರಬಲ ಜಾತಿಯ ಕೃಷ್ಣ ಪಟೇಲ್ ಅವರ ಕಾರಿಗೆ ಆದಿತ್ಯ ಅವರ ಬೈಕ್ ಆಕಸ್ಮಿಕವಾಗಿ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಕೋಪಗೊಂಡ ಪಟೇಲ್ ಮತ್ತು ಅವರ ಸಹಚರರು ಯುವಕನನ್ನು ತಡೆದು, ಗಲಾಟೆ ನಡೆಸಿದ್ದಾರೆ. ಆದಿತ್ಯ ಅವರ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಯಿಂದ ರಕ್ತಸ್ರಾವವಾಗಿದ್ದು, ಆದಿತ್ಯ ಅವರನ್ನು ಗ್ರಾಮಸ್ಥರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ. ಆದಿತ್ಯ ಅವರ ದೂರಿನ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಭಾರತ-ಚೀನಾ-ರಷ್ಯಾ ದೋಸ್ತಿ: ಅಮೆರಿಕದ ನಿಲುವೇನು?

ಕಾನೂನು ರಕ್ಷಣೆ ಮತ್ತು ಸರ್ಕಾರಿ ಕಾನೂನುಗಳ ಹೊರತಾಗಿಯೂ, ಭಾರತದಲ್ಲಿ ದಲಿತರು ಜಾತಿ ಆಧಾರಿತ ಹಿಂಸೆ, ತಾರತಮ್ಯ, ಲೈಂಗಿಕ ದೌರ್ಜನ್ಯ ಮತ್ತು ಸಾಮಾಜಿಕ ಬಹಿಷ್ಕಾರವನ್ನು ಎದುರಿಸುತ್ತಿದ್ದಾರೆ. ಇತ್ತೀಚೆಗೆ, ರಾಜಸ್ಥಾನದಲ್ಲಿ ನೀರಿನ ಪಾತ್ರೆ ಮುಟ್ಟಿದ್ದಕ್ಕಾಗಿ ಎಂಟು ವರ್ಷದ ದಲಿತ ಬಾಲಕನನ್ನು ಮರದಿಂದ ತಲೆಕೆಳಗಾಗಿ ನೇತು ಹಾಕಲಾಯಿತು. ಶೌಚಾಲಯವನ್ನು ಸ್ವಚ್ಛಗೊಳಿಸಲು ಮತ್ತು ಕಸ ಸಂಗ್ರಹಿಸಲು ಕೇಳಲಾಯಿತು. ಕೆಲಸ ಮುಗಿಸಿದ ನಂತರ ನೀರು ಕೇಳಿದಾಗ ಅವರು ಹಲ್ಲೆ ನಡೆಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...