ಮಾನಹಾನಿ ಪ್ರಕರಣ | ರಾಹುಲ್‌ ಗಾಂಧಿ ಮೇಲ್ಮನವಿ ವಿರುದ್ಧ ‘ಸುಪ್ರೀಂ’ನಲ್ಲಿ ಕೇವಿಯಟ್‌ ಸಲ್ಲಿಕೆ

Date:

  • ಗುಜರಾತ್‌ ಹೈಕೋರ್ಟ್‌ ತೀರ್ಪಿನ ದಿನದಂದೇ ಕೇವಿಯಟ್‌ ಸಲ್ಲಿಕೆ
  • ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ 2 ವರ್ಷ ಶಿಕ್ಷೆ ಪ್ರಕಟ

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಕೆಳ ಹಂತದ ನ್ಯಾಯಾಲಯ ಶಿಕ್ಷೆ ನೀಡಿದ್ದನ್ನು ಎತ್ತಿಹಿಡಿದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗುವ ಮೇಲ್ಮನವಿ ವಿರುದ್ಧ ಕೇವಿಯಟ್‌ (ತಡೆ ಅರ್ಜಿ) ಸಲ್ಲಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಶಾಸಕ ಪೂರ್ಣೇಶ್‌ ಮೋದಿ ಈ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್‌ ಗಾಂಧಿ ಅವರ ವಿರುದ್ಧ ಮೋದಿ ಉಪನಾಮದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದರ ಸಂಬಂಧ ದಾಖಲಾದ ಮಾನಹಾನಿ ಪ್ರಕರಣದಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗಿತ್ತು.

ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತಾರೆ ಎಂದು ಕಾಂಗ್ರೆಸ್‌ ಹೇಳಿತ್ತು. ಈ ಹಿನ್ನೆಲೆ ಪೂರ್ಣೇಶ್‌ ಮೋದಿ ಕೇವಿಯಟ್ ಸಲ್ಲಿಸಿದ್ದು ಪ್ರಕರಣದ ಸೂಕ್ತ ವಿಚಾರಣೆ ಆಲಿಸಿ ತೀರ್ಪು ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್ ಹೈಕೋರ್ಟ್ ತೀರ್ಪು ಪ್ರಕಟವಾದ ದಿನದಂದೇ ಪೂರ್ಣೇಶ್‌ ಮೋದಿ ಅವರು ತಮ್ಮ ವಕೀಲ ಪಿ.ಎಸ್‌.ಸುಧೀರ್‌ ಅವರ ಮೂಲಕ ಈ ಕೇವಿಯಟ್ ಸಲ್ಲಿಸಿದ್ದಾರೆ. ಯಾವುದೇ ಆದೇಶವನ್ನು ನೀಡುವ ಮೊದಲು ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಬೇಕೆಂದು ಕೇವಿಯಟ್‌ನಲ್ಲಿ ಮನವಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ನ ಜಾಲತಾಣ ಹೇಳಿದೆ.

ಮೋದಿ ಉಪನಾಮದ ಕುರಿತು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ಹಂತದ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಜುಲೈ 7ರಂದು ಗುಜರಾತ್‌ ಹೈಕೋರ್ಟ್‌ನ ಏಕ ಸದಸ್ಯ ಪೀಠ ರಾಹುಲ್ ಮನವಿಯನ್ನು ತಿರಸ್ಕರಿಸಿತ್ತು.

ಏನಿದು ಪ್ರಕರಣ?

2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ಭಾಷಣದ ವೇಳೆ ರಾಹುಲ್ ಗಾಂಧಿ, ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು.

ಮೋದಿ ಉಪನಾಮದ ಟೀಕೆ ವಿರುದ್ಧ ಗುಜರಾತ್‌ನ ಸೂರತ್ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ, ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಇಡಿ ಮುಖ್ಯಸ್ಥ ಸಂಜಯ್ ಮಿಶ್ರಾ ಸೇವಾ ವಿಸ್ತರಣೆ ಕಾನೂನುಬಾಹಿರ ಎಂದ ಸುಪ್ರೀಂ ಕೋರ್ಟ್

ಈ ವರ್ಷದ ಮಾರ್ಚ್ 23ರಂದು ಪ್ರಕರಣದ ತೀರ್ಪು ನೀಡಿದ್ದ ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ, ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಈ ತೀರ್ಪಿನ ಬಳಿಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...