ಜಮ್ಮು ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ಸಹಚರನ ನಿವಾಸ ಸೇರಿ, 12 ಸ್ಥಳದಲ್ಲಿ ಸಿಬಿಐ ಶೋಧ

Date:

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಹಿಂದಿನ ಮಾಧ್ಯಮ ಸಲಹೆಗಾರರ ನಿವಾಸ ಸೇರಿದಂತೆ, ಜಮ್ಮು ಹಾಗೂ ರಾಜಸ್ಥಾನ ರಾಜ್ಯಗಳ 12 ಕಡೆ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದೆ.

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಪ್ರಶ್ನೆಗೊಳಪಡಿಸಿದ ಕೆಲವು ದಿನಗಳ ನಂತರ ಅವರ ಸಹಚರನ ಮೇಲೆ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದೆ.

ಸಿಬಿಐ ಅಧಿಕಾರಿಗಳ ಪ್ರಕಾರ, ನವದೆಹಲಿಯ ಹತ್ತು ಹಾಗೂ ರಾಜಸ್ಥಾನದ ಎರಡು ಕಡೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಅನಿಲ್ ಅಂಬಾನಿ ಮಾಲಿಕತ್ವದ ರಿಲಯನ್ಸ್ ಜನರಲ್ ಇನ್ಷೂರೆನ್ಸ್ ಕಂಪನಿ ಒಳಗೊಂಡಿರುವ ವಿಮಾ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತ ಪ್ರಕರಣ ಇದಾಗಿದೆ. ಈ ವಿಚಾರದಲ್ಲಿ ನನಗೆ ಲಂಚ ನೀಡುವ ಆಮಿಷ ಒಡ್ಡಲಾಗಿತ್ತು ಎಂದು ಸತ್ಯಪಾಲ್ ಮಲಿಕ್ ಆಪಾದಿಸಿದ ನಂತರ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲೇಡಿ ಸಿಂಘಂ ಖ್ಯಾತಿಯ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಸಾವು

ಕಳೆದ ತಿಂಗಳು ಸತ್ಯಪಾಲ್ ಮಲಿಕ್ ಅವರನ್ನು ಅವರ ನಿವಾಸದಲ್ಲಿ ಸುಮಾರು ಐದು ಗಂಟೆಗಳ ಕಾಲ ಸಿಬಿಐ ವಿಚಾರಣೆಗೊಳಪಡಿಸಿತ್ತು. ಕಳೆದ ಏಳು ತಿಂಗಳ ಅವಧಿಯಲ್ಲಿ ಹಲವಾರು ರಾಜ್ಯಗಳ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ಸತ್ಯಪಾಲ್ ಮಲಿಕ್ ಅವರನ್ನು ಎರಡನೆಯ ಬಾರಿಗೆ ವಿಚಾರಣೆಗೊಳಪಡಿಸಲಾಗಿತ್ತು. ಆದರೆ, ಪ್ರಕರಣದಲ್ಲಿ ಸತ್ಯಪಾಲ್ ಮಲಿಕ್ ಆರೋಪಿ ಅಲ್ಲ, ಅವರ ಪಾತ್ರದ ಕುರಿತು ಈವರೆಗೆ ತನಿಖೆ ನಡೆದಿಲ್ಲ ಎಂದು ಸಿಬಿಐ ಸ್ಪಷ್ಟಪಡಿಸಿತ್ತು.

ಸತ್ಯಪಾಲ್ ಮಲಿಕ್ ಅವರು ಬಿಹಾರ, ಜಮ್ಮು ಮತ್ತು ಕಾಶ್ಮೀರ, ಗೋವಾ ಹಾಗೂ ಮೇಘಾಲಯದಲ್ಲಿ ತಮ್ಮ ರಾಜ್ಯಪಾಲರ ಜವಾಬ್ದಾರಿಯನ್ನು ಪೂರ್ಣಗೊಳಿಸಿದ ನಂತರ ಕಳೆದ ಅಕ್ಟೋಬರ್‌ನಲ್ಲಿ ಅವರ ಹೇಳಿಕೆಯನ್ನು ಸಿಬಿಐ ದಾಖಲಿಸಿಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...