ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರ ವಿರುದ್ಧ ಸಿಬಿಐ ಎಫ್‌ಐಆರ್

Date:

ದೇಶದಲ್ಲೇ ಅತಿ ದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಸಿಬಿಐ ಬಯಲು ಮಾಡಿದ್ದು, ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ| ಸಿ.ಎನ್.ಮಂಜಪ್ಪ, ಬೆಂಗಳೂರಿನಲ್ಲಿರುವ ಅವರ ಆಪ್ತ ವೈದ್ಯ ಡಾ| ಸತೀಶ್ ವಿರುದ್ಧ ಆರೋಪಗಳು ಕೇಳಿಬಂದಿವೆ. ವೈದ್ಯಕೀಯ ಕಾಲೇಜುಗಳಿಗೆ ಅನುಕೂಲಕರ ವರದಿ ನೀಡಲು ಆ ಕಾಲೇಜುಗಳಿಂದ ತಲಾ 55 ಲಕ್ಷ ರೂ. ಲಂಚ ಪಡೆಯಲಾಗುತ್ತಿತ್ತು ಎಂಬುದು ಆರೋಪ.

ಹಗರಣದಲ್ಲಿ ಛತ್ತೀಸ್‌ಗಢದ ಸ್ವಘೋಷಿತ ದೇವಮಾನವ ರಾವತುರ ಸರ್ಕಾರ್ ಹೆಸರೂ ಕೇಳಿಬಂದಿದ್ದು, ಕೆಲವು ಹಿರಿಯ ಆಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಸಹಿತ 35 ವ್ಯಕ್ತಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ. ಅವರಲ್ಲಿ ಮಾಜಿ ಯುಜಿಸಿ ಅಧ್ಯಕ್ಷ ಡಿ.ಪಿ. ಸಿಂಗ್ ಮತ್ತು ರಿಯಲ್‌ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮಾಜಿ ಅಧ್ಯಕ್ಷ ಸಂಜಯ್ ಶುಕ್ಲಾ ಕೂಡ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶಾದ್ಯಂತ 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಅಕ್ರಮ ಮಾನ್ಯತೆ ಪಡೆದಿರಬಹುದು ಎಂದು ಶಂಕಿಸಲಾಗಿದೆ. ಅಚ್ಚರಿಯೆಂದರೆ ಈ ಹಗರಣದಲ್ಲಿ ಆರೋಗ್ಯ ಸಚಿವಾಲಯದ ಕೆಲವು ಅಧಿಕಾರಿಗಳೂ ಶಾಮೀಲಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಈ ಬಹುಕೋಟಿ ಹಗರಣವು ರಾಜಸ್ಥಾನ, ಗುರುಗ್ರಾಮ, ಇಂದೋರ್, ವಾರಂಗಲ್, ವಿಶಾಖಪಟ್ಟಣಂ ಸಹಿತ ಅನೇಕ ರಾಜ್ಯಗಳಲ್ಲಿ ವ್ಯಾಪಿಸಿದೆ. ಕಳಪೆ ಮಟ್ಟದ ವೈದ್ಯಕೀಯ ಕಾಲೇಜುಗಳಿಗೆ ಅಕ್ರಮ ಅನುಮೋದನೆಗಳನ್ನು ಪಡೆಯಲು ನಕಲಿ ಅಧ್ಯಾಪಕರು, ಸುಳ್ಳು ತನಿಖೆಗಳು ಮತ್ತು ಗೌಪ್ಯ ಸೂಕ್ಷ್ಮ ಮಾಹಿತಿಗಳ ಸೋರಿಕೆ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಹವಾಲಾ ಮತ್ತು ಬ್ಯಾಂಕಿಂಗ್ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ರಾಯ್ಪುರದ ವೈದ್ಯಕೀಯ ಸಂಸ್ಥೆಯಲ್ಲಿ 55 ಲಕ್ಷ ರೂಪಾಯಿ ಲಂಚ ಪ್ರಕರಣದಿಂದ ಆರಂಭವಾದ ತನಿಖೆ ಈಗ ರಾಷ್ಟ್ರಮಟ್ಟದ ಹಗರಣವನ್ನು ಬಯಲಿಗೆಳೆದಿದೆ.

ಛತ್ತೀಸ್‌ಗಢದ ಶ್ರೀರಾಮಪುರ ಸರ್ಕಾರ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಗೆ ನಿಯೋಜಿಸಲಾದ ಎನ್‌ಎಂಪಿ ತಪಾಸಣೆ ತಂಡದಲ್ಲಿ ಡಾ. ಮಂಜಪ್ಪ ಅವರಿದ್ದರು. ಈ ಸಂಸ್ಥೆಯ ಪರವಾಗಿ ವರದಿ ನೀಡಲು ತಂಡವು 55 ಲಕ್ಷ ರೂ. ಲಂಚ ಪಡೆದಿತ್ತು. ಮಂಜಪ್ಪ ಅವರು ಈ ಹಣವನ್ನು ಪಡೆಯುವಂತೆ ಬೆಂಗಳೂರಿನ ಸತೀಶ್‌ಗೆ ತಿಳಿಸಿದ್ದರು. ಬೆಂಗಳೂರಿನಲ್ಲಿ ಲಂಚದ ಹಣ ಸ್ವೀಕರಿಸುವ ಸಮಯದಲ್ಲೇ ಸಿಬಿಐ ಆರೋಪಿಗಳನ್ನು ಬಂಧಿಸಿತು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...