ಪಶ್ಚಿಮ ಬಂಗಾಳ | ಸಚಿವ, ಶಾಸಕರ ನಿವಾಸಗಳಲ್ಲಿ ಸಿಬಿಐ ಶೋಧ

Date:

ರಾಜ್ಯದಲ್ಲಿನ ನಾಗರಿಕ ಸಂಸ್ಥೆಗಳ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಅಕ್ಟೋಬರ್ 8 ರಂದು ಭಾನುವಾರ ಬೆಳಿಗ್ಗೆ ಪಶ್ಚಿಮ ಬಂಗಾಳ ಹಿರಿಯ ಸಚಿವ ಫಿರ್ಹಾದ್ ಹಕೀಮ್ ಹಾಗೂ ಶಾಸಕ ಮದನ್‌ ಮಿತ್ರ ಅವರ ಕೋಲ್ಕತ್ತಾದ ನಿವಾಸಗಳ ಮೇಲೆ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರಾಭಿವೃದ್ಧಿ ಮತ್ತು ಮುನ್ಸಿಪಲ್ ವ್ಯವಹಾರಗಳ ಸಚಿವರಾದ ಫಿರ್ಹಾದ್ ಹಕೀಮ್ ಅವರು ಕೋಲ್ಕತ್ತಾದ ಮೇಯರ್ ಕೂಡ ಆಗಿದ್ದಾರೆ. ಅವರು ಟಿಎಂಸಿಯ ಹಿರಿಯ ನಾಯಕರಾಗಿದ್ದು, ಪಕ್ಷದ ಸಂಘಟನೆಯಲ್ಲಿ ಪ್ರಮುಖ ಹಿಡಿತ ಹೊಂದಿದ್ದಾರೆ.

ಸಿಬಿಐ ಅಧಿಕಾರಿಗಳ ತಂಡವು ಕೇಂದ್ರ ಮೀಸಲು ಪಡೆಗಳ ದೊಡ್ಡ ತುಕಡಿಯೊಂದಿಗೆ ದಕ್ಷಿಣ ಕೋಲ್ಕತ್ತಾದ ಚೆಟ್ಲಾ ಪ್ರದೇಶದಲ್ಲಿರುವ ಹಕೀಮ್ ಅವರ ನಿವಾಸವನ್ನು ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಬ್ಬರು ಸಿಬಿಐ ಅಧಿಕಾರಿಗಳು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಸಿಬಿಐ ಶೋಧ ಪ್ರಾರಂಭವಾಗುತ್ತಿದ್ದಂತೆ, ಹಕೀಮ್ ಅವರ ಬೆಂಬಲಿಗರು ಅವರ ಮನೆಯ ಹೊರಗೆ ಜಮಾಯಿಸಿದರು ಮತ್ತು ಪ್ರತಿಭಟನೆಯನ್ನು ಪ್ರಾರಂಭಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ, ಜಾರಿ ನಿರ್ದೇಶನಾಲಯ (ಇಡಿ) ಆಹಾರ ಮತ್ತು ಸರಬರಾಜು ಸಚಿವ ರಥಿನ್ ಘೋಷ್ ಅವರ ನಿವಾಸ ಸೇರಿದಂತೆ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿತು.

ಈ ಸುದ್ದಿ ಓದಿದ್ದೀರಾ? ಕೇರಳ | ತಪ್ಪು ಮಾಹಿತಿ ನೀಡಿದ ಗೂಗಲ್‌ ಮ್ಯಾಪ್‌: ಕಾರು ನದಿಗೆ ಉರುಳಿ ಇಬ್ಬರು ವೈದ್ಯರ ಸಾವು

2014 ಮತ್ತು 2018 ರ ನಡುವೆ ಪಶ್ಚಿಮ ಬಂಗಾಳ ರಾಜ್ಯದ ವಿವಿಧ ನಾಗರಿಕ ಸಂಸ್ಥೆಗಳು ವಿತ್ತೀಯ ಪರಿಗಣನೆಗೆ ವಿರುದ್ಧವಾಗಿ ಸುಮಾರು 1,500 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿವೆ ಎಂದು ಸಿಬಿಐ ಆರೋಪಿಸಿದೆ.

ಉತ್ತರ 24 ಪರಗಣ ಜಿಲ್ಲೆಯ ಕಮರ್ಹಾಟಿಯ ಶಾಸಕ ಹಾಗೂ ಮಾಜಿ ಸಚಿವ ಮದನ್ ಮಿತ್ರ ಅವರ ಮನೆ ಮೇಲೂ ಸಿಬಿಐ ದಾಳಿ ನಡೆಸಿದೆ.

ಈ ಹಿಂದೆ ಹಕೀಮ್ ಮತ್ತು ಮದನ್ ಮಿತ್ರ ಇಬ್ಬರನ್ನೂ 2021ರಲ್ಲಿ ನಾರದ ಕುಟುಕು ಕಾರ್ಯಾಚರಣೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. 2014ರಲ್ಲಿ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಮಿತ್ರ ಅವರನ್ನು ಸಿಬಿಐ ಬಂಧಿಸಿತ್ತು.

ಕೋಲ್ಕತ್ತಾ ಹೈಕೋರ್ಟ್‌ನ ಏಕಸದಸ್ಯ ಪೀಠವು ಈ ವರ್ಷ ಏಪ್ರಿಲ್ 21 ರಂದು ಮುನ್ಸಿಪಲ್ ನೇಮಕಾತಿ ಹಗರಣದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆದೇಶಿಸಿತು. ಜಾರಿ ನಿರ್ದೇಶನಾಲಯದ (ಇಡಿ) ಅರ್ಜಿಯನ್ನು ಆಧರಿಸಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...