ದಾಭೋಲ್ಕರ್ ಹತ್ಯೆ ಪ್ರಕರಣ: ಅಂತಿಮ ವರದಿಯಲ್ಲಿ ಮೂವರು ಆರೋಪಿಗಳ ಬಿಡುಗಡೆಗೆ ಸಿಬಿಐ ಶಿಫಾರಸ್ಸು

Date:

ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಬುಧವಾರ ಪುಣೆಯ ವಿಶೇಷ ನ್ಯಾಯಾಲಯಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದ್ದು, ಮೂವರು ಆರೋಪಿಗಳಾದ ಅಮೋಲ್ ಕಾಳೆ, ರಾಕೇಶ್ ಬಂಗೇರಾ ಮತ್ತು ಅಮಿತ್ ದಿಗ್ವೇಕರ್ ವಿರುದ್ಧ ಯಾವುದೇ “ವಿಚಾರಣೆಗೆ ಒಳಪಡುವ ಸಾಕ್ಷ್ಯ” ಸಿಗಲಿಲ್ಲ ಎಂಬ ಕಾರಣ ನೀಡಿ ಬಿಡುಗಡೆ ಮಾಡಲು ಶಿಫಾರಸು ಮಾಡಿದೆ.

ಹಿರಿಯ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು 2013ರ ಆಗಸ್ಟ್ 20ರಂದು ಪುಣೆಯಲ್ಲಿ ಬೆಳಗಿನ ನಡಿಗೆಗೆ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ತನಿಖಾ ಸಂಸ್ಥೆಯು ಸೆಪ್ಟೆಂಬರ್ 2018 ರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿತ್ತು. ಆದರೆ, ಅವರನ್ನು ಬಂಧಿಸಿದ 90 ದಿನಗಳಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಲು ವಿಫಲವಾದ ಮೂರು ತಿಂಗಳ ನಂತರ ಪುಣೆ ನ್ಯಾಯಾಲಯವು ಅವರಿಗೆ ಡೀಫಾಲ್ಟ್ ಜಾಮೀನು ಮಂಜೂರುಗೊಳಿಸಿತ್ತು.

ಈ ಮೂವರು ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಫೆಬ್ರವರಿ 20, 2015 ರಂದು ಕೊಲ್ಹಾಪುರದಲ್ಲಿ ಹಿರಿಯ ಕಮ್ಯುನಿಸ್ಟ್ ನಾಯಕ ಗೋವಿಂದ್ ಪನ್ಸಾರೆ ಹತ್ಯೆಯಲ್ಲಿ ಕಾಳೆ ಮತ್ತು ದಿಗ್ವೇಕರ್ ಆರೋಪಿಗಳಾಗಿದ್ದಾರೆ. ಮೂವರು ಆರೋಪಿಗಳು ಸದ್ಯ ಬೆಂಗಳೂರು ಜೈಲಿನಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶೇ. 40 ಹಾಲಿ ಸಂಸದರಿಗೆ ಕ್ರಿಮಿನಲ್ ಆರೋಪ, ಶೇ. 7 ಮಂದಿ ಶತ ಕೋಟ್ಯಾಧೀಶರು: ಎಡಿಆರ್ ವರದಿ

ಸಿಬಿಐನ ಡೆಪ್ಯುಟಿ ಎಸ್ಪಿ ವಿಕಾಸ್ ಕುಮಾರ್ ಮೀನಾ ಅವರ ಸಹಿ ಮತ್ತು ಡಿಐಜಿ ಸದಾನಂದ ದಾಟೆ ಅವರು ಪ್ರತಿ ಸಹಿ ಮಾಡಿದ ಅಂತಿಮ ವರದಿಯು ಪ್ರಕರಣದ ಮುಂದಿನ ತನಿಖೆಯನ್ನು ಮುಕ್ತಾಯಗೊಳಿಸಲು ತನಿಖಾ ಸಂಸ್ಥೆಗೆ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಒತ್ತಾಯಿಸಿದೆ. ಹೊಸ ಸಾಕ್ಷ್ಯಾಧಾರಗಳು ಬೆಳಕಿಗೆ ಬಂದರೆ, ನ್ಯಾಯಾಲಯದ ಅನುಮತಿಯೊಂದಿಗೆ ಸಿಬಿಐ ಹೆಚ್ಚಿನ ತನಿಖೆ ನಡೆಸುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ತಲೆಮರೆಸಿಕೊಂಡಿರುವ ಆರೋಪಿಗಳಾದ ಸಾರಂಗ್‌ ಅಕೋಲ್ಕರ್‌ ಮತ್ತು ವಿನಯ್‌ ಪವಾರ್‌ ಅವರ ವಿಚಾರಣೆಯು ಈ ಪ್ರಕರಣದ ಹಿಂದಿನ ಸಂಚನ್ನು ಅನಾವರಣಗೊಳಿಸಲು ಅಗತ್ಯವಾಗಿದೆ, ಅವರನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ವರದಿ ಹೇಳಿದೆ. ಈ ತಲೆಮರೆಸಿಕೊಂಡಿರುವ ಇಬ್ಬರನ್ನೂ ದಾಭೋಲ್ಕರ್‌ ಅವರನ್ನು ಹತ್ಯೆಗೈದ ಶೂಟರ್‌ಗಳು ಎಂದು ಗುರುತಿಸಲಾಗಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಸೂರ್ಯವಂಶಿ ಕೂಡ ಸಿಬಿಐ ಪರವಾಗಿ ಲಿಖಿತ ಹೇಳಿಕೆ ಸಲ್ಲಿಸಿದರು. ಪ್ರಮುಖ ಆರೋಪಿ ವೀರೇಂದ್ರಸಿಂಹ ತಾವ್ಡೆ, ಆರೋಪಿ ಶೂಟರ್‌ಗಳಾದ ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣದ ವಿಚಾರಣೆಯಲ್ಲಿ ಸಾಕ್ಷ್ಯಗಳನ್ನು ಮುಕ್ತಾಯಗೊಳಿಸಿರುವ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಿದರು.

ವಿಶೇಷ ನ್ಯಾಯಾಧೀಶರಾದ ಪಿಪಿ ಜಾಧವ್ ಅವರು ಮುಂದಿನ ವಿಚಾರಣೆಯ ದಿನಾಂಕವಾದ ಸೆಪ್ಟೆಂಬರ್ 18 ರೊಳಗೆ ಸಿಬಿಐ ಅಂತಿಮ ವರದಿಯ ಬಗ್ಗೆ ತಮ್ಮ ಲಿಖಿತ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಪ್ರತಿವಾದಿ ವಕೀಲರಿಗೆ ಸೂಚಿಸಿದರು.

ದಾಭೋಲ್ಕರ್ ಪ್ರಕರಣದಲ್ಲಿ ಭಾಗಿಯಾಗಿರುವ ಕಾಳೆ, ಬಂಗೇರ ಮತ್ತು ದಿಗ್ವೇಕರ್ ಸೆಪ್ಟೆಂಬರ್ 5, 2017 ರಂದು ನಡೆದಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿಯೂ ಭಾಗಿಯಾಗಿದ್ದಾರೆ. ಮಹಾರಾಷ್ಟ್ರ ಎಟಿಎಸ್ ನಾಲಾಸೋಪಾರ ಶಸ್ತ್ರಾಸ್ತ್ರ ಸಾಗಣೆ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...