ಮೋಸಗೊಳಿಸುವ ಜಾಹೀರಾತಿನಲ್ಲಿ ಸೆಲೆಬ್ರಿಟಿಗಳು, ಪ್ರಭಾವಿಗಳು ಸಮಾನ ಹೊಣೆಗಾರರು: ಸುಪ್ರೀಂ ಕೋರ್ಟ್

Date:

ದಾರಿತಪ್ಪಿಸುವ ಜಾಹೀರಾತುಗಳ ಬಗ್ಗೆ ಕಠೋರ ನಿಲುವು ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಸೆಲೆಬ್ರಿಟಿಗಳು ಹಾಗೂ ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ವಾಣಿಜ್ಯಗೊಳಿಸುವ ಉತ್ಪನ್ನ ಅಥವಾ ಸೇವೆಗಳಲ್ಲಿ ಮೋಸ ಕಂಡು ಬಂದಿದ್ದರೆ ಇವರು ಸಮಾನ ಹೊಣೆಗಾರರು ಎಂದು ತಿಳಿಸಿತು.

ಪತಂಜಲಿ ಆಯುರ್ವೇದದ ದಾರಿ ತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಭಾರತೀಯ ವೈದ್ಯಕೀಯ ಮಂಡಳಿ ಸಲ್ಲಿಸಿರುವ ಆಕ್ಷೇಪಕ್ಕೆ ಸಂಬಂಧಿಸಿದಂತೆ ನಡೆದ ವಿಚಾರಣೆಯಲ್ಲಿ ಕಠೋರ ನಿಲುವು ತಳೆದ ಸುಪ್ರೀಂ ಕೋರ್ಟ್,ಜಾಹೀರಾತು ನಿಯಮಗಳನ್ನು ಅನುಸರಿಸಲಾಗುತ್ತಿದೆಯೆ ಎಂಬುದನ್ನು ಮಾಧ್ಯಮಗಳಲ್ಲಿ ಪ್ರದರ್ಶನಪಡಿಸುವವರು ಜಾಹೀರಾತು ನೀಡುವ ಮುನ್ನ ಸ್ವಯಂಘೋಷಣೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚಿಸಿತು.

ಇಂದು ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಎ ಅಮಾನುಲ್ಲಾ ಅವರಿದ್ದ ಪೀಠವು, ದಾರಿತಪ್ಪಿಸುವ ಜಾಹೀರಾತುಗಳ ತಡೆ ಹಾಗೂ ದಾರಿತಪ್ಪಿಸುವ ಜಾಹೀರಾತುಗಳ ಅನುಮೋದನೆಗಳು 2022ರ ಮಾರ್ಗಸೂಚಿಗಳನ್ನು ಉಲ್ಲೇಖಿಸಿತು. ಉತ್ಪನ್ನ ಹಾಗೂ ಸೇವೆಗಳನ್ನು ಅನುಮೋದಿಸುವ ವ್ಯಕ್ತಿಯು ಅದರ ಬಗ್ಗೆ ಮಾಹಿತಿ ಅಥವಾ ಅನುಭವಗಳನ್ನು ನಿಯಮಾವಳಿ 13ರ ಅಗತ್ಯತೆಗಳಿಗೆ ತಕ್ಕಂತೆ ಪಡೆದಿರಬೇಕು. ಅಲ್ಲದೆ ಮೋಸಗೊಳಿಸುವುದಿಲ್ಲ ಎಂಬುದನ್ನು ಖಚಿತಗೊಳಿಸಿಕೊಳ್ಳಬೇಕು ಎಂದು ಪೀಠವು ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ನಿಬಂಧನೆಗಳು ಮುಖ್ಯವಾಗಿ ಆರೋಗ್ಯ ಅಥವಾ ಆಹಾರ ವಲಯಗಳ ಮಾರುಕಟ್ಟೆಗಳಲ್ಲಿ ಗ್ರಾಹಕರಿಗೆ ಯಾವ ರೀತಿಯ ಉತ್ಪನ್ನ ನೀಡಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಅರಿವು ನೀಡುವುದನ್ನು ಖಚಿತಪಡಿಸಬೇಕು. ಅಲ್ಲದೆ ಸೆಲೆಬ್ರಿಟಿಗಳು ಹಾಗೂ ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ವಾಣಿಜ್ಯಗೊಳಿಸುವ ಉತ್ಪನ್ನ ಅಥವಾ ಸೇವೆಗಳಲ್ಲಿ ಮೋಸ ಕಂಡು ಬಂದಿದ್ದರೆ ಇವರು ಸಮಾನ ಹೊಣೆಗಾರರು  ಎಂದು ಪೀಠವು ಈ ಸಂದರ್ಭದಲ್ಲಿ ತಿಳಿಸಿತು.

ಇದೇ ಸಂದರ್ಭದಲ್ಲಿ ಐಎಂಎ ಪದ್ಧತಿಯನ್ನು ಸುಪ್ರೀಂಕೋರ್ಟ್ ಟೀಕಿಸುವುದು ದುರಾದೃಷ್ಟಕರ ಎಂದು ಮಾಧ್ಯಮಕ್ಕೆ ಸಂದರ್ಶನ ನೀಡಿದ್ದ ಭಾರತೀಯ ವ್ಯದ್ಯಕೀಯ ಒಕ್ಕೂಟದ ಅಧ್ಯಕ್ಷ ಆರ್‌ ವಿ ಅಶೋಕನ್‌ ಹೇಳಿಕೆಗೆ ಸಂಬಂಧಿಸಿದಂತೆ ಐಎಂಎಗೆ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್ ಮೇ 14ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...